Homeಮುಖಪುಟಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ರೈತರು ಬುರಾರಿ ಮೈದಾನದಲ್ಲಿ ಬೆಳೆ ಬೆಳೆಯುವ ಮೂಲಕ ತಾವು ಸುಮ್ಮನೆ ಕೂರುವ ಜಾಯಮಾನದವರಲ್ಲಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ ತಿಂಗಳು ಪೂರೈಸಿದೆ. ಸರ್ಕಾರ ರೈತ ಮುಖಂಡರೊಂದಿಗೆ ಆರನೇ ಸುತ್ತಿನ ಚರ್ಚೆ ನಡೆಸಲು ಡಿಸೆಂಬರ್ 29 ರಂದು ಸಭೆ ಕರೆದಿದೆ. ಕಾರ್ಪೊರೇಟ್ ಕಂಪನಿಗಳು ನಮ್ಮಿಂದ ಕೃಷಿ ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಶಪಥಗೈದಿರುವ ರೈತರು ತಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ ಮಾಡುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.

ದೆಹಲಿಯ ಬುರಾರಿ ನಿರಂಕಾರಿ ಸಮಾಗಮ ಮೈದಾನದಲ್ಲಿ ಹೋರಾಟನಿರತ ರೈತರು ಹೋರಾಟದ ಮಧ್ಯೆ ಈರುಳ್ಳಿ ಬಿತ್ತನೆ ಮಾಡಿದ್ದು, ಉತ್ತಮ ಪೈರು ಬಿಟ್ಟಿವೆ. ಈರುಳ್ಳಿ ಪೈರುಗಳಿಗೆ ರೈತರು ನಿರುಣಿಸುತ್ತಿರುವ ಚಿತ್ರಗಳನ್ನು ಎಎನ್‌ಐ ಟ್ವೀಟ್ ಮಾಡಿದೆ.

“ನಾವು ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದೇವೆ. ಪ್ರತಿಭಟನೆಯ ನಡುವೆ ಸುಮ್ಮನೆ ಕುಳಿತುಕೊಳ್ಳುವುದಕ್ಕಿಂತ ಏನಾದರೂ ಮಾಡೋಣ ಎಂದು ಈರುಳ್ಳಿ ಬಿತ್ತಿದ್ದೇವೆ. ಹೇಗಿದ್ದರೂ ನಾವು ಅಡುಗೆಗೆ ತರಕಾರಿಗಳನ್ನು ಬಳಸುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ತರಕಾರಿಗಳನ್ನು ಈ ಮೈದಾನದಲ್ಲಿ ಬೆಳೆಯುತ್ತೇವೆ” ಎಂದು ರೈತರೊಬ್ಬರು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ದೆಹಲಿ ಪ್ರತಿಭಟನೆಗೆ ಆಗಮಿಸುವಾಗಲೇ ರೈತರು 4-5 ತಿಂಗಳಿಗಾಗುವಷ್ಟು ದವಸ ಧಾನ್ಯಗಳನ್ನು ತಮ್ಮೊಡನೆ ತಂದಿದ್ದಾರೆ. ಅಂದರೆ ಅಷ್ಟು ದಿನಗಳಾದರೂ ಸರಿಯೇ ಈ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ನಾವು ವಾಪಸ್ ಹೋಗುವುದಿಲ್ಲ ಎಂದು ದೃಢ ನಿರ್ಧಾರ ಮಾಡಿದ್ದಾರೆ. ಅದರ ಭಾಗವಾಗಿಯೇ ಈಗ ಬುರಾರಿ ಮೈದಾನದಲ್ಲಿ ತರಕಾರಿ ಬೆಳೆಯಲು ಮುಂದಾಗಿದ್ದಾರೆ.

ದೆಹಲಿಯಲ್ಲಿರುವ ಬುರಾರಿ ನಿರಂಕಾರಿ ಮೈದಾನವು ನೂರಾರು ಎಕರೆ ವಿಸ್ತೀರ್ಣವುಳ್ಳದ್ದಾಗಿದೆ. ಎಲ್ಲ ರೈತರು ಇಲ್ಲಿ ಬಂದು ಪ್ರತಿಭಟನೆ ನಡೆಸಬಹುದು ಎಂದು ಕೇಂದ್ರ ಸರ್ಕಾರ ನವೆಂಬರ್ 27 ರಂದು ತಿಳಿಸಿತ್ತು. ಕೆಲ ರೈತರು ಇಲ್ಲಿ ಬಂದು ಧರಣಿ ಆರಂಭಿಸಿದರೆ ಉಳಿದ ಬಹುತೇಕ ರೈತರು ಇಲ್ಲಿಗೆ ಬರಲು ಒಪ್ಪಲಿಲ್ಲ. ಕೇಂದ್ರ ಸರ್ಕಾರ ರೈತರನ್ನು ಬಂಧಿಸಿಡಲು 9 ಕ್ರೀಡಾಂಗಣಗಳನ್ನು ನೀಡುವಂತೆ ದೆಹಲಿ ಆಪ್ ಸರ್ಕಾರಕ್ಕೆ ಕೇಳಿತ್ತು. ಆದರೆ ಆಪ್ ಸರ್ಕಾರ ಅದಕ್ಕೆ ಅವಕಾಶ ನೀಡಿರಲಿಲ್ಲ. ಈಗಾಗಿ ಈ ಮೈದಾನಕ್ಕೆ ಬಂದರೆ ಸರ್ಕಾರ ಅದನ್ನು ಬಂಧೀಖಾನೆಯನ್ನಾಗಿ ಮಾಡುತ್ತದೆ ಎಂದು ತಿಳಿದ ರೈತರು ಇಲ್ಲಿಗೆ ಬರಲು ನಿರಾಕರಿಸಿ ತಾವಿರುವ ದೆಹಲಿಯ ಗಡಿಗಳಲ್ಲಿಯೇ ಪ್ರತಿಭಟನೆ ಮುಂದುವರೆಸಿದ್ದಾರೆ.

ಒಟ್ಟಿನಲ್ಲಿ ರೈತರು ಬುರಾರಿ ಮೈದಾನದಲ್ಲಿ ಬೆಳೆ ಬೆಳೆಯುವ ಮೂಲಕ ತಾವು ಸುಮ್ಮನೆ ಕೂರುವ ಜಾಯಮಾನದವರಲ್ಲಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಂತಹ ಕಾಯ್ದೆ ತಂದರೂ ಹೋರಾಡುತ್ತಲೇ ನಮ್ಮ ಕಾಯಕ ಮುಂದುವರೆಸುತ್ತೇವೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ. ರೈತರ ಈ ಕೃತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ.


ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...