Homeಮುಖಪುಟಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ರೈತರು ಬುರಾರಿ ಮೈದಾನದಲ್ಲಿ ಬೆಳೆ ಬೆಳೆಯುವ ಮೂಲಕ ತಾವು ಸುಮ್ಮನೆ ಕೂರುವ ಜಾಯಮಾನದವರಲ್ಲಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ ತಿಂಗಳು ಪೂರೈಸಿದೆ. ಸರ್ಕಾರ ರೈತ ಮುಖಂಡರೊಂದಿಗೆ ಆರನೇ ಸುತ್ತಿನ ಚರ್ಚೆ ನಡೆಸಲು ಡಿಸೆಂಬರ್ 29 ರಂದು ಸಭೆ ಕರೆದಿದೆ. ಕಾರ್ಪೊರೇಟ್ ಕಂಪನಿಗಳು ನಮ್ಮಿಂದ ಕೃಷಿ ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಶಪಥಗೈದಿರುವ ರೈತರು ತಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ ಮಾಡುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.

ದೆಹಲಿಯ ಬುರಾರಿ ನಿರಂಕಾರಿ ಸಮಾಗಮ ಮೈದಾನದಲ್ಲಿ ಹೋರಾಟನಿರತ ರೈತರು ಹೋರಾಟದ ಮಧ್ಯೆ ಈರುಳ್ಳಿ ಬಿತ್ತನೆ ಮಾಡಿದ್ದು, ಉತ್ತಮ ಪೈರು ಬಿಟ್ಟಿವೆ. ಈರುಳ್ಳಿ ಪೈರುಗಳಿಗೆ ರೈತರು ನಿರುಣಿಸುತ್ತಿರುವ ಚಿತ್ರಗಳನ್ನು ಎಎನ್‌ಐ ಟ್ವೀಟ್ ಮಾಡಿದೆ.

“ನಾವು ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದೇವೆ. ಪ್ರತಿಭಟನೆಯ ನಡುವೆ ಸುಮ್ಮನೆ ಕುಳಿತುಕೊಳ್ಳುವುದಕ್ಕಿಂತ ಏನಾದರೂ ಮಾಡೋಣ ಎಂದು ಈರುಳ್ಳಿ ಬಿತ್ತಿದ್ದೇವೆ. ಹೇಗಿದ್ದರೂ ನಾವು ಅಡುಗೆಗೆ ತರಕಾರಿಗಳನ್ನು ಬಳಸುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ತರಕಾರಿಗಳನ್ನು ಈ ಮೈದಾನದಲ್ಲಿ ಬೆಳೆಯುತ್ತೇವೆ” ಎಂದು ರೈತರೊಬ್ಬರು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ದೆಹಲಿ ಪ್ರತಿಭಟನೆಗೆ ಆಗಮಿಸುವಾಗಲೇ ರೈತರು 4-5 ತಿಂಗಳಿಗಾಗುವಷ್ಟು ದವಸ ಧಾನ್ಯಗಳನ್ನು ತಮ್ಮೊಡನೆ ತಂದಿದ್ದಾರೆ. ಅಂದರೆ ಅಷ್ಟು ದಿನಗಳಾದರೂ ಸರಿಯೇ ಈ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ನಾವು ವಾಪಸ್ ಹೋಗುವುದಿಲ್ಲ ಎಂದು ದೃಢ ನಿರ್ಧಾರ ಮಾಡಿದ್ದಾರೆ. ಅದರ ಭಾಗವಾಗಿಯೇ ಈಗ ಬುರಾರಿ ಮೈದಾನದಲ್ಲಿ ತರಕಾರಿ ಬೆಳೆಯಲು ಮುಂದಾಗಿದ್ದಾರೆ.

ದೆಹಲಿಯಲ್ಲಿರುವ ಬುರಾರಿ ನಿರಂಕಾರಿ ಮೈದಾನವು ನೂರಾರು ಎಕರೆ ವಿಸ್ತೀರ್ಣವುಳ್ಳದ್ದಾಗಿದೆ. ಎಲ್ಲ ರೈತರು ಇಲ್ಲಿ ಬಂದು ಪ್ರತಿಭಟನೆ ನಡೆಸಬಹುದು ಎಂದು ಕೇಂದ್ರ ಸರ್ಕಾರ ನವೆಂಬರ್ 27 ರಂದು ತಿಳಿಸಿತ್ತು. ಕೆಲ ರೈತರು ಇಲ್ಲಿ ಬಂದು ಧರಣಿ ಆರಂಭಿಸಿದರೆ ಉಳಿದ ಬಹುತೇಕ ರೈತರು ಇಲ್ಲಿಗೆ ಬರಲು ಒಪ್ಪಲಿಲ್ಲ. ಕೇಂದ್ರ ಸರ್ಕಾರ ರೈತರನ್ನು ಬಂಧಿಸಿಡಲು 9 ಕ್ರೀಡಾಂಗಣಗಳನ್ನು ನೀಡುವಂತೆ ದೆಹಲಿ ಆಪ್ ಸರ್ಕಾರಕ್ಕೆ ಕೇಳಿತ್ತು. ಆದರೆ ಆಪ್ ಸರ್ಕಾರ ಅದಕ್ಕೆ ಅವಕಾಶ ನೀಡಿರಲಿಲ್ಲ. ಈಗಾಗಿ ಈ ಮೈದಾನಕ್ಕೆ ಬಂದರೆ ಸರ್ಕಾರ ಅದನ್ನು ಬಂಧೀಖಾನೆಯನ್ನಾಗಿ ಮಾಡುತ್ತದೆ ಎಂದು ತಿಳಿದ ರೈತರು ಇಲ್ಲಿಗೆ ಬರಲು ನಿರಾಕರಿಸಿ ತಾವಿರುವ ದೆಹಲಿಯ ಗಡಿಗಳಲ್ಲಿಯೇ ಪ್ರತಿಭಟನೆ ಮುಂದುವರೆಸಿದ್ದಾರೆ.

ಒಟ್ಟಿನಲ್ಲಿ ರೈತರು ಬುರಾರಿ ಮೈದಾನದಲ್ಲಿ ಬೆಳೆ ಬೆಳೆಯುವ ಮೂಲಕ ತಾವು ಸುಮ್ಮನೆ ಕೂರುವ ಜಾಯಮಾನದವರಲ್ಲಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಂತಹ ಕಾಯ್ದೆ ತಂದರೂ ಹೋರಾಡುತ್ತಲೇ ನಮ್ಮ ಕಾಯಕ ಮುಂದುವರೆಸುತ್ತೇವೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ. ರೈತರ ಈ ಕೃತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ.


ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...