Homeಮುಖಪುಟಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ರೈತರು ಬುರಾರಿ ಮೈದಾನದಲ್ಲಿ ಬೆಳೆ ಬೆಳೆಯುವ ಮೂಲಕ ತಾವು ಸುಮ್ಮನೆ ಕೂರುವ ಜಾಯಮಾನದವರಲ್ಲಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ ತಿಂಗಳು ಪೂರೈಸಿದೆ. ಸರ್ಕಾರ ರೈತ ಮುಖಂಡರೊಂದಿಗೆ ಆರನೇ ಸುತ್ತಿನ ಚರ್ಚೆ ನಡೆಸಲು ಡಿಸೆಂಬರ್ 29 ರಂದು ಸಭೆ ಕರೆದಿದೆ. ಕಾರ್ಪೊರೇಟ್ ಕಂಪನಿಗಳು ನಮ್ಮಿಂದ ಕೃಷಿ ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಶಪಥಗೈದಿರುವ ರೈತರು ತಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ ಮಾಡುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.

ದೆಹಲಿಯ ಬುರಾರಿ ನಿರಂಕಾರಿ ಸಮಾಗಮ ಮೈದಾನದಲ್ಲಿ ಹೋರಾಟನಿರತ ರೈತರು ಹೋರಾಟದ ಮಧ್ಯೆ ಈರುಳ್ಳಿ ಬಿತ್ತನೆ ಮಾಡಿದ್ದು, ಉತ್ತಮ ಪೈರು ಬಿಟ್ಟಿವೆ. ಈರುಳ್ಳಿ ಪೈರುಗಳಿಗೆ ರೈತರು ನಿರುಣಿಸುತ್ತಿರುವ ಚಿತ್ರಗಳನ್ನು ಎಎನ್‌ಐ ಟ್ವೀಟ್ ಮಾಡಿದೆ.

“ನಾವು ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದೇವೆ. ಪ್ರತಿಭಟನೆಯ ನಡುವೆ ಸುಮ್ಮನೆ ಕುಳಿತುಕೊಳ್ಳುವುದಕ್ಕಿಂತ ಏನಾದರೂ ಮಾಡೋಣ ಎಂದು ಈರುಳ್ಳಿ ಬಿತ್ತಿದ್ದೇವೆ. ಹೇಗಿದ್ದರೂ ನಾವು ಅಡುಗೆಗೆ ತರಕಾರಿಗಳನ್ನು ಬಳಸುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ತರಕಾರಿಗಳನ್ನು ಈ ಮೈದಾನದಲ್ಲಿ ಬೆಳೆಯುತ್ತೇವೆ” ಎಂದು ರೈತರೊಬ್ಬರು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ದೆಹಲಿ ಪ್ರತಿಭಟನೆಗೆ ಆಗಮಿಸುವಾಗಲೇ ರೈತರು 4-5 ತಿಂಗಳಿಗಾಗುವಷ್ಟು ದವಸ ಧಾನ್ಯಗಳನ್ನು ತಮ್ಮೊಡನೆ ತಂದಿದ್ದಾರೆ. ಅಂದರೆ ಅಷ್ಟು ದಿನಗಳಾದರೂ ಸರಿಯೇ ಈ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ನಾವು ವಾಪಸ್ ಹೋಗುವುದಿಲ್ಲ ಎಂದು ದೃಢ ನಿರ್ಧಾರ ಮಾಡಿದ್ದಾರೆ. ಅದರ ಭಾಗವಾಗಿಯೇ ಈಗ ಬುರಾರಿ ಮೈದಾನದಲ್ಲಿ ತರಕಾರಿ ಬೆಳೆಯಲು ಮುಂದಾಗಿದ್ದಾರೆ.

ದೆಹಲಿಯಲ್ಲಿರುವ ಬುರಾರಿ ನಿರಂಕಾರಿ ಮೈದಾನವು ನೂರಾರು ಎಕರೆ ವಿಸ್ತೀರ್ಣವುಳ್ಳದ್ದಾಗಿದೆ. ಎಲ್ಲ ರೈತರು ಇಲ್ಲಿ ಬಂದು ಪ್ರತಿಭಟನೆ ನಡೆಸಬಹುದು ಎಂದು ಕೇಂದ್ರ ಸರ್ಕಾರ ನವೆಂಬರ್ 27 ರಂದು ತಿಳಿಸಿತ್ತು. ಕೆಲ ರೈತರು ಇಲ್ಲಿ ಬಂದು ಧರಣಿ ಆರಂಭಿಸಿದರೆ ಉಳಿದ ಬಹುತೇಕ ರೈತರು ಇಲ್ಲಿಗೆ ಬರಲು ಒಪ್ಪಲಿಲ್ಲ. ಕೇಂದ್ರ ಸರ್ಕಾರ ರೈತರನ್ನು ಬಂಧಿಸಿಡಲು 9 ಕ್ರೀಡಾಂಗಣಗಳನ್ನು ನೀಡುವಂತೆ ದೆಹಲಿ ಆಪ್ ಸರ್ಕಾರಕ್ಕೆ ಕೇಳಿತ್ತು. ಆದರೆ ಆಪ್ ಸರ್ಕಾರ ಅದಕ್ಕೆ ಅವಕಾಶ ನೀಡಿರಲಿಲ್ಲ. ಈಗಾಗಿ ಈ ಮೈದಾನಕ್ಕೆ ಬಂದರೆ ಸರ್ಕಾರ ಅದನ್ನು ಬಂಧೀಖಾನೆಯನ್ನಾಗಿ ಮಾಡುತ್ತದೆ ಎಂದು ತಿಳಿದ ರೈತರು ಇಲ್ಲಿಗೆ ಬರಲು ನಿರಾಕರಿಸಿ ತಾವಿರುವ ದೆಹಲಿಯ ಗಡಿಗಳಲ್ಲಿಯೇ ಪ್ರತಿಭಟನೆ ಮುಂದುವರೆಸಿದ್ದಾರೆ.

ಒಟ್ಟಿನಲ್ಲಿ ರೈತರು ಬುರಾರಿ ಮೈದಾನದಲ್ಲಿ ಬೆಳೆ ಬೆಳೆಯುವ ಮೂಲಕ ತಾವು ಸುಮ್ಮನೆ ಕೂರುವ ಜಾಯಮಾನದವರಲ್ಲಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಂತಹ ಕಾಯ್ದೆ ತಂದರೂ ಹೋರಾಡುತ್ತಲೇ ನಮ್ಮ ಕಾಯಕ ಮುಂದುವರೆಸುತ್ತೇವೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ. ರೈತರ ಈ ಕೃತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ.


ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...