Homeಮುಖಪುಟಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿ ರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ 68 ವರ್ಷದ ನಟ ವೈಜನಾಥ ಬಿರಾದಾರ ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದರಾಗಿದ್ದಾರೆ. ಸುಮಾರು 500ರಷ್ಟು ಸಿನಿಮಾದಲ್ಲಿ ನಟಿಸಿರುವ ಬಿರಾದರ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾಗಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬಕ್ಕೆ ಒಂದು ಬರಹ!

ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವದಲ್ಲಿ ಅವರಿಗೆ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿತ್ತು. ಇದೀಗ ಇಂತಹ ಪ್ರತಿಭಾನ್ವಿತ ನಟನಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಫೇಸ್‌ಬುಕ್, ವಾಟ್ಸಪ್‌ನಲ್ಲಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ.

ಚಿಂತಕ ಕೆಎಲ್‌ ಚಂದ್ರಶೇಖರ್‌ ಐಜೂರು ಅವರು, “ಇವರು ನಟ ಬಿರಾದಾರ್….ಇವರು ನಿಮ್ಮ ಅನಂತನಾಗ್’ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಪ್ರತಿನಿಧಿಸುವ ರಾಜಕಾರಣದ ನಿಲುವಿಗೆ ಸೇರಿದವರಲ್ಲ. ಇವರದು ಅನಂತನಾಗ್ ಜಾತಿಯಂತೂ ಅಲ್ಲವೇ ಅಲ್ಲ. ಅನಂತನಾಗ್ ಅವರಿಗಿಂತಲೂ ನಟ ಬಿರಾದಾರ್ ಒಕ್ಕೂಟ ಸರ್ಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಲ್ಲೂ ಅರ್ಹ. ಪದ್ಮಶ್ರೀ ಈ ಸಲ ಬಿರಾದಾರರಿಗೆ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ರಾಜಾರಾಂ ಚಿಟ್ಟಾ ಅವರು, “ಬಿರಾದಾರ ಅವರು ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಿಂದಲೂ ಅರ್ಹರಿದ್ದಾರೆ ಎಂಬುದು ಒಬ್ಬ ಕನ್ನಡಿಗನಾಗಿ ನನ್ನ ಅನಿಸಿಕೆ. ನಟ ಎಂದರೇ ಕೇವಲ ಹೀರೋಗಳು ಮಾತ್ರವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಪತ್ರಕರ್ತ ರವಿಕುಮಾರ್‌ ಟೆಲೆಕ್ಸ್‌ ಅವರು, “ಬಿರಾದಾರ್ ಕನ್ನಡದ ಮತ್ತೋರ್ವ ಖ್ಯಾತ ನಟ ಅನಂತನಾಗ್‌ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಅವರಿಗಿರಬಹುದಾದ ಸಾಮಾಜಿಕ‌ ಹಿನ್ನಲೆಯಾಗಲಿ, ಸಾಂಸ್ಕೃತಿಕ ಪ್ರಭಾವಳಿಯಾಗಲಿ, ರಾಜಕೀಯ ಸಿದ್ಧಾಂತದ ಬಲವಾಗಲಿ ಬಿರಾದರ್‌ಗೆ ಇಲ್ಲ. ಆದರೆ ಬಿರಾದಾರ್ ತನಗೊಹಿಸುವ ಪಾತ್ರದಲ್ಲಿ ಯಾರಿಗೂ ಕಮ್ಮಿಯಿಲ್ಲದಂತೆ ಪ್ರತಿಭೆಯನ್ನು ಮೆರೆಯುತ್ತಾರೆ. ಪಾತ್ರಕ್ಕೆ ನ್ಯಾಯ ಒದಗಿಸಬಲ್ಲರು. ಅನಂತ್ ನಾಗ್ ಮತ್ತು ಬಿರಾದಾರ್ ಅವರನ್ನು ಪರಸ್ಪರ ಹೋಲಿಕೆ ಮಾಡಲಾಗದು ನಿಜ, ಆದರೆ ನೈಜ ಪ್ರತಿಭೆ ಬಿರಾದಾರ್ ಒಕ್ಕೂಟ ಸರ್ಕಾರದ ‘ಪದ್ಮಶ್ರೀ’ ಪ್ರಶಸ್ತಿಗೆ ಎಲ್ಲಾ ಬಗೆಯಲ್ಲೂ ಅರ್ಹರಿದ್ದಾರೆ ಎಂಬುದನ್ನು ಅಲ್ಲೆಗೆಳೆಯುವಂತಿಲ್ಲ. ಬಿರಾದಾರ್ ಅವರಿಗೆ ಪದ್ಮಶ್ರೀ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ಮರಿಬಸಪ್ಪ ತುಮಕೂರು ಅವರು, “ವೈಜನಾಥ್ ಬಿರಾದರ್‌‌ 600 ಚಲನಚಿತ್ರಗಳಲ್ಲಿ ರಂಗಭೂಮಿಯಲ್ಲಿ ತಮ್ಮ ಬದುಕನ್ನು ಸವೆಸಿದ ಕಲಾವಿದ. ಇಂದು ಬರಿ ದೈನಂದಿನ ಬದುಕು ನೆಡೆಸಲಾಗದ, ಕುಟುಂಬ ಪೋಷಣೆ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು ಕಲಾಸೇವೆ ಮಾಡುತ್ತಿರುವ ಅಪ್ಪಟ ಕಲಾವಿದ. ಒಕ್ಕೂಟ ಸರ್ಕಾರ ಈ ಕಲಾವಿದ ಕಲಾಸೇವೆ ಗುರುತಿಸಲಿ” ಎಂದು ಆಗ್ರಹಿಸಿದ್ದಾರೆ.

ಬಸವರಾಜ ಅವರು, ನೈಜ ಕಲಾವಿದ, ಸರಳ ಜೀವಿ, ವೈಜನಾಥ ಬಿರಾದಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿರಾದಾರರಿಗೆ ಪದ್ಮಶ್ರೀ ಪಡೆಯುವ ಎಲ್ಲಾ ಅರ್ಹತೆಗಳೂ ಇವೆ. ಈ ಬಾರಿ ಪದ್ಮಶ್ರೀ ಅವರಿಗೆ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...