Homeಮುಖಪುಟಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿ ರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ 68 ವರ್ಷದ ನಟ ವೈಜನಾಥ ಬಿರಾದಾರ ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದರಾಗಿದ್ದಾರೆ. ಸುಮಾರು 500ರಷ್ಟು ಸಿನಿಮಾದಲ್ಲಿ ನಟಿಸಿರುವ ಬಿರಾದರ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾಗಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬಕ್ಕೆ ಒಂದು ಬರಹ!

ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವದಲ್ಲಿ ಅವರಿಗೆ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿತ್ತು. ಇದೀಗ ಇಂತಹ ಪ್ರತಿಭಾನ್ವಿತ ನಟನಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಫೇಸ್‌ಬುಕ್, ವಾಟ್ಸಪ್‌ನಲ್ಲಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ.

ಚಿಂತಕ ಕೆಎಲ್‌ ಚಂದ್ರಶೇಖರ್‌ ಐಜೂರು ಅವರು, “ಇವರು ನಟ ಬಿರಾದಾರ್….ಇವರು ನಿಮ್ಮ ಅನಂತನಾಗ್’ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಪ್ರತಿನಿಧಿಸುವ ರಾಜಕಾರಣದ ನಿಲುವಿಗೆ ಸೇರಿದವರಲ್ಲ. ಇವರದು ಅನಂತನಾಗ್ ಜಾತಿಯಂತೂ ಅಲ್ಲವೇ ಅಲ್ಲ. ಅನಂತನಾಗ್ ಅವರಿಗಿಂತಲೂ ನಟ ಬಿರಾದಾರ್ ಒಕ್ಕೂಟ ಸರ್ಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಲ್ಲೂ ಅರ್ಹ. ಪದ್ಮಶ್ರೀ ಈ ಸಲ ಬಿರಾದಾರರಿಗೆ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ರಾಜಾರಾಂ ಚಿಟ್ಟಾ ಅವರು, “ಬಿರಾದಾರ ಅವರು ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಿಂದಲೂ ಅರ್ಹರಿದ್ದಾರೆ ಎಂಬುದು ಒಬ್ಬ ಕನ್ನಡಿಗನಾಗಿ ನನ್ನ ಅನಿಸಿಕೆ. ನಟ ಎಂದರೇ ಕೇವಲ ಹೀರೋಗಳು ಮಾತ್ರವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಪತ್ರಕರ್ತ ರವಿಕುಮಾರ್‌ ಟೆಲೆಕ್ಸ್‌ ಅವರು, “ಬಿರಾದಾರ್ ಕನ್ನಡದ ಮತ್ತೋರ್ವ ಖ್ಯಾತ ನಟ ಅನಂತನಾಗ್‌ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಅವರಿಗಿರಬಹುದಾದ ಸಾಮಾಜಿಕ‌ ಹಿನ್ನಲೆಯಾಗಲಿ, ಸಾಂಸ್ಕೃತಿಕ ಪ್ರಭಾವಳಿಯಾಗಲಿ, ರಾಜಕೀಯ ಸಿದ್ಧಾಂತದ ಬಲವಾಗಲಿ ಬಿರಾದರ್‌ಗೆ ಇಲ್ಲ. ಆದರೆ ಬಿರಾದಾರ್ ತನಗೊಹಿಸುವ ಪಾತ್ರದಲ್ಲಿ ಯಾರಿಗೂ ಕಮ್ಮಿಯಿಲ್ಲದಂತೆ ಪ್ರತಿಭೆಯನ್ನು ಮೆರೆಯುತ್ತಾರೆ. ಪಾತ್ರಕ್ಕೆ ನ್ಯಾಯ ಒದಗಿಸಬಲ್ಲರು. ಅನಂತ್ ನಾಗ್ ಮತ್ತು ಬಿರಾದಾರ್ ಅವರನ್ನು ಪರಸ್ಪರ ಹೋಲಿಕೆ ಮಾಡಲಾಗದು ನಿಜ, ಆದರೆ ನೈಜ ಪ್ರತಿಭೆ ಬಿರಾದಾರ್ ಒಕ್ಕೂಟ ಸರ್ಕಾರದ ‘ಪದ್ಮಶ್ರೀ’ ಪ್ರಶಸ್ತಿಗೆ ಎಲ್ಲಾ ಬಗೆಯಲ್ಲೂ ಅರ್ಹರಿದ್ದಾರೆ ಎಂಬುದನ್ನು ಅಲ್ಲೆಗೆಳೆಯುವಂತಿಲ್ಲ. ಬಿರಾದಾರ್ ಅವರಿಗೆ ಪದ್ಮಶ್ರೀ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ಮರಿಬಸಪ್ಪ ತುಮಕೂರು ಅವರು, “ವೈಜನಾಥ್ ಬಿರಾದರ್‌‌ 600 ಚಲನಚಿತ್ರಗಳಲ್ಲಿ ರಂಗಭೂಮಿಯಲ್ಲಿ ತಮ್ಮ ಬದುಕನ್ನು ಸವೆಸಿದ ಕಲಾವಿದ. ಇಂದು ಬರಿ ದೈನಂದಿನ ಬದುಕು ನೆಡೆಸಲಾಗದ, ಕುಟುಂಬ ಪೋಷಣೆ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು ಕಲಾಸೇವೆ ಮಾಡುತ್ತಿರುವ ಅಪ್ಪಟ ಕಲಾವಿದ. ಒಕ್ಕೂಟ ಸರ್ಕಾರ ಈ ಕಲಾವಿದ ಕಲಾಸೇವೆ ಗುರುತಿಸಲಿ” ಎಂದು ಆಗ್ರಹಿಸಿದ್ದಾರೆ.

ಬಸವರಾಜ ಅವರು, ನೈಜ ಕಲಾವಿದ, ಸರಳ ಜೀವಿ, ವೈಜನಾಥ ಬಿರಾದಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿರಾದಾರರಿಗೆ ಪದ್ಮಶ್ರೀ ಪಡೆಯುವ ಎಲ್ಲಾ ಅರ್ಹತೆಗಳೂ ಇವೆ. ಈ ಬಾರಿ ಪದ್ಮಶ್ರೀ ಅವರಿಗೆ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...