Homeಮುಖಪುಟಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿ ರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ 68 ವರ್ಷದ ನಟ ವೈಜನಾಥ ಬಿರಾದಾರ ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದರಾಗಿದ್ದಾರೆ. ಸುಮಾರು 500ರಷ್ಟು ಸಿನಿಮಾದಲ್ಲಿ ನಟಿಸಿರುವ ಬಿರಾದರ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾಗಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬಕ್ಕೆ ಒಂದು ಬರಹ!

ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವದಲ್ಲಿ ಅವರಿಗೆ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿತ್ತು. ಇದೀಗ ಇಂತಹ ಪ್ರತಿಭಾನ್ವಿತ ನಟನಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಫೇಸ್‌ಬುಕ್, ವಾಟ್ಸಪ್‌ನಲ್ಲಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ.

ಚಿಂತಕ ಕೆಎಲ್‌ ಚಂದ್ರಶೇಖರ್‌ ಐಜೂರು ಅವರು, “ಇವರು ನಟ ಬಿರಾದಾರ್….ಇವರು ನಿಮ್ಮ ಅನಂತನಾಗ್’ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಪ್ರತಿನಿಧಿಸುವ ರಾಜಕಾರಣದ ನಿಲುವಿಗೆ ಸೇರಿದವರಲ್ಲ. ಇವರದು ಅನಂತನಾಗ್ ಜಾತಿಯಂತೂ ಅಲ್ಲವೇ ಅಲ್ಲ. ಅನಂತನಾಗ್ ಅವರಿಗಿಂತಲೂ ನಟ ಬಿರಾದಾರ್ ಒಕ್ಕೂಟ ಸರ್ಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಲ್ಲೂ ಅರ್ಹ. ಪದ್ಮಶ್ರೀ ಈ ಸಲ ಬಿರಾದಾರರಿಗೆ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ರಾಜಾರಾಂ ಚಿಟ್ಟಾ ಅವರು, “ಬಿರಾದಾರ ಅವರು ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಿಂದಲೂ ಅರ್ಹರಿದ್ದಾರೆ ಎಂಬುದು ಒಬ್ಬ ಕನ್ನಡಿಗನಾಗಿ ನನ್ನ ಅನಿಸಿಕೆ. ನಟ ಎಂದರೇ ಕೇವಲ ಹೀರೋಗಳು ಮಾತ್ರವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಪತ್ರಕರ್ತ ರವಿಕುಮಾರ್‌ ಟೆಲೆಕ್ಸ್‌ ಅವರು, “ಬಿರಾದಾರ್ ಕನ್ನಡದ ಮತ್ತೋರ್ವ ಖ್ಯಾತ ನಟ ಅನಂತನಾಗ್‌ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಅವರಿಗಿರಬಹುದಾದ ಸಾಮಾಜಿಕ‌ ಹಿನ್ನಲೆಯಾಗಲಿ, ಸಾಂಸ್ಕೃತಿಕ ಪ್ರಭಾವಳಿಯಾಗಲಿ, ರಾಜಕೀಯ ಸಿದ್ಧಾಂತದ ಬಲವಾಗಲಿ ಬಿರಾದರ್‌ಗೆ ಇಲ್ಲ. ಆದರೆ ಬಿರಾದಾರ್ ತನಗೊಹಿಸುವ ಪಾತ್ರದಲ್ಲಿ ಯಾರಿಗೂ ಕಮ್ಮಿಯಿಲ್ಲದಂತೆ ಪ್ರತಿಭೆಯನ್ನು ಮೆರೆಯುತ್ತಾರೆ. ಪಾತ್ರಕ್ಕೆ ನ್ಯಾಯ ಒದಗಿಸಬಲ್ಲರು. ಅನಂತ್ ನಾಗ್ ಮತ್ತು ಬಿರಾದಾರ್ ಅವರನ್ನು ಪರಸ್ಪರ ಹೋಲಿಕೆ ಮಾಡಲಾಗದು ನಿಜ, ಆದರೆ ನೈಜ ಪ್ರತಿಭೆ ಬಿರಾದಾರ್ ಒಕ್ಕೂಟ ಸರ್ಕಾರದ ‘ಪದ್ಮಶ್ರೀ’ ಪ್ರಶಸ್ತಿಗೆ ಎಲ್ಲಾ ಬಗೆಯಲ್ಲೂ ಅರ್ಹರಿದ್ದಾರೆ ಎಂಬುದನ್ನು ಅಲ್ಲೆಗೆಳೆಯುವಂತಿಲ್ಲ. ಬಿರಾದಾರ್ ಅವರಿಗೆ ಪದ್ಮಶ್ರೀ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ಮರಿಬಸಪ್ಪ ತುಮಕೂರು ಅವರು, “ವೈಜನಾಥ್ ಬಿರಾದರ್‌‌ 600 ಚಲನಚಿತ್ರಗಳಲ್ಲಿ ರಂಗಭೂಮಿಯಲ್ಲಿ ತಮ್ಮ ಬದುಕನ್ನು ಸವೆಸಿದ ಕಲಾವಿದ. ಇಂದು ಬರಿ ದೈನಂದಿನ ಬದುಕು ನೆಡೆಸಲಾಗದ, ಕುಟುಂಬ ಪೋಷಣೆ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು ಕಲಾಸೇವೆ ಮಾಡುತ್ತಿರುವ ಅಪ್ಪಟ ಕಲಾವಿದ. ಒಕ್ಕೂಟ ಸರ್ಕಾರ ಈ ಕಲಾವಿದ ಕಲಾಸೇವೆ ಗುರುತಿಸಲಿ” ಎಂದು ಆಗ್ರಹಿಸಿದ್ದಾರೆ.

ಬಸವರಾಜ ಅವರು, ನೈಜ ಕಲಾವಿದ, ಸರಳ ಜೀವಿ, ವೈಜನಾಥ ಬಿರಾದಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿರಾದಾರರಿಗೆ ಪದ್ಮಶ್ರೀ ಪಡೆಯುವ ಎಲ್ಲಾ ಅರ್ಹತೆಗಳೂ ಇವೆ. ಈ ಬಾರಿ ಪದ್ಮಶ್ರೀ ಅವರಿಗೆ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...