Homeಮುಖಪುಟಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿ ರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ 68 ವರ್ಷದ ನಟ ವೈಜನಾಥ ಬಿರಾದಾರ ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದರಾಗಿದ್ದಾರೆ. ಸುಮಾರು 500ರಷ್ಟು ಸಿನಿಮಾದಲ್ಲಿ ನಟಿಸಿರುವ ಬಿರಾದರ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾಗಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬಕ್ಕೆ ಒಂದು ಬರಹ!

ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವದಲ್ಲಿ ಅವರಿಗೆ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿತ್ತು. ಇದೀಗ ಇಂತಹ ಪ್ರತಿಭಾನ್ವಿತ ನಟನಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಫೇಸ್‌ಬುಕ್, ವಾಟ್ಸಪ್‌ನಲ್ಲಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ.

ಚಿಂತಕ ಕೆಎಲ್‌ ಚಂದ್ರಶೇಖರ್‌ ಐಜೂರು ಅವರು, “ಇವರು ನಟ ಬಿರಾದಾರ್….ಇವರು ನಿಮ್ಮ ಅನಂತನಾಗ್’ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಪ್ರತಿನಿಧಿಸುವ ರಾಜಕಾರಣದ ನಿಲುವಿಗೆ ಸೇರಿದವರಲ್ಲ. ಇವರದು ಅನಂತನಾಗ್ ಜಾತಿಯಂತೂ ಅಲ್ಲವೇ ಅಲ್ಲ. ಅನಂತನಾಗ್ ಅವರಿಗಿಂತಲೂ ನಟ ಬಿರಾದಾರ್ ಒಕ್ಕೂಟ ಸರ್ಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಲ್ಲೂ ಅರ್ಹ. ಪದ್ಮಶ್ರೀ ಈ ಸಲ ಬಿರಾದಾರರಿಗೆ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ರಾಜಾರಾಂ ಚಿಟ್ಟಾ ಅವರು, “ಬಿರಾದಾರ ಅವರು ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಿಂದಲೂ ಅರ್ಹರಿದ್ದಾರೆ ಎಂಬುದು ಒಬ್ಬ ಕನ್ನಡಿಗನಾಗಿ ನನ್ನ ಅನಿಸಿಕೆ. ನಟ ಎಂದರೇ ಕೇವಲ ಹೀರೋಗಳು ಮಾತ್ರವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಪತ್ರಕರ್ತ ರವಿಕುಮಾರ್‌ ಟೆಲೆಕ್ಸ್‌ ಅವರು, “ಬಿರಾದಾರ್ ಕನ್ನಡದ ಮತ್ತೋರ್ವ ಖ್ಯಾತ ನಟ ಅನಂತನಾಗ್‌ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಅವರಿಗಿರಬಹುದಾದ ಸಾಮಾಜಿಕ‌ ಹಿನ್ನಲೆಯಾಗಲಿ, ಸಾಂಸ್ಕೃತಿಕ ಪ್ರಭಾವಳಿಯಾಗಲಿ, ರಾಜಕೀಯ ಸಿದ್ಧಾಂತದ ಬಲವಾಗಲಿ ಬಿರಾದರ್‌ಗೆ ಇಲ್ಲ. ಆದರೆ ಬಿರಾದಾರ್ ತನಗೊಹಿಸುವ ಪಾತ್ರದಲ್ಲಿ ಯಾರಿಗೂ ಕಮ್ಮಿಯಿಲ್ಲದಂತೆ ಪ್ರತಿಭೆಯನ್ನು ಮೆರೆಯುತ್ತಾರೆ. ಪಾತ್ರಕ್ಕೆ ನ್ಯಾಯ ಒದಗಿಸಬಲ್ಲರು. ಅನಂತ್ ನಾಗ್ ಮತ್ತು ಬಿರಾದಾರ್ ಅವರನ್ನು ಪರಸ್ಪರ ಹೋಲಿಕೆ ಮಾಡಲಾಗದು ನಿಜ, ಆದರೆ ನೈಜ ಪ್ರತಿಭೆ ಬಿರಾದಾರ್ ಒಕ್ಕೂಟ ಸರ್ಕಾರದ ‘ಪದ್ಮಶ್ರೀ’ ಪ್ರಶಸ್ತಿಗೆ ಎಲ್ಲಾ ಬಗೆಯಲ್ಲೂ ಅರ್ಹರಿದ್ದಾರೆ ಎಂಬುದನ್ನು ಅಲ್ಲೆಗೆಳೆಯುವಂತಿಲ್ಲ. ಬಿರಾದಾರ್ ಅವರಿಗೆ ಪದ್ಮಶ್ರೀ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ಮರಿಬಸಪ್ಪ ತುಮಕೂರು ಅವರು, “ವೈಜನಾಥ್ ಬಿರಾದರ್‌‌ 600 ಚಲನಚಿತ್ರಗಳಲ್ಲಿ ರಂಗಭೂಮಿಯಲ್ಲಿ ತಮ್ಮ ಬದುಕನ್ನು ಸವೆಸಿದ ಕಲಾವಿದ. ಇಂದು ಬರಿ ದೈನಂದಿನ ಬದುಕು ನೆಡೆಸಲಾಗದ, ಕುಟುಂಬ ಪೋಷಣೆ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು ಕಲಾಸೇವೆ ಮಾಡುತ್ತಿರುವ ಅಪ್ಪಟ ಕಲಾವಿದ. ಒಕ್ಕೂಟ ಸರ್ಕಾರ ಈ ಕಲಾವಿದ ಕಲಾಸೇವೆ ಗುರುತಿಸಲಿ” ಎಂದು ಆಗ್ರಹಿಸಿದ್ದಾರೆ.

ಬಸವರಾಜ ಅವರು, ನೈಜ ಕಲಾವಿದ, ಸರಳ ಜೀವಿ, ವೈಜನಾಥ ಬಿರಾದಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿರಾದಾರರಿಗೆ ಪದ್ಮಶ್ರೀ ಪಡೆಯುವ ಎಲ್ಲಾ ಅರ್ಹತೆಗಳೂ ಇವೆ. ಈ ಬಾರಿ ಪದ್ಮಶ್ರೀ ಅವರಿಗೆ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....