Homeಮುಖಪುಟಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿ ರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ 68 ವರ್ಷದ ನಟ ವೈಜನಾಥ ಬಿರಾದಾರ ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದರಾಗಿದ್ದಾರೆ. ಸುಮಾರು 500ರಷ್ಟು ಸಿನಿಮಾದಲ್ಲಿ ನಟಿಸಿರುವ ಬಿರಾದರ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾಗಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬಕ್ಕೆ ಒಂದು ಬರಹ!

ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವದಲ್ಲಿ ಅವರಿಗೆ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿತ್ತು. ಇದೀಗ ಇಂತಹ ಪ್ರತಿಭಾನ್ವಿತ ನಟನಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಫೇಸ್‌ಬುಕ್, ವಾಟ್ಸಪ್‌ನಲ್ಲಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ.

ಚಿಂತಕ ಕೆಎಲ್‌ ಚಂದ್ರಶೇಖರ್‌ ಐಜೂರು ಅವರು, “ಇವರು ನಟ ಬಿರಾದಾರ್….ಇವರು ನಿಮ್ಮ ಅನಂತನಾಗ್’ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಪ್ರತಿನಿಧಿಸುವ ರಾಜಕಾರಣದ ನಿಲುವಿಗೆ ಸೇರಿದವರಲ್ಲ. ಇವರದು ಅನಂತನಾಗ್ ಜಾತಿಯಂತೂ ಅಲ್ಲವೇ ಅಲ್ಲ. ಅನಂತನಾಗ್ ಅವರಿಗಿಂತಲೂ ನಟ ಬಿರಾದಾರ್ ಒಕ್ಕೂಟ ಸರ್ಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಲ್ಲೂ ಅರ್ಹ. ಪದ್ಮಶ್ರೀ ಈ ಸಲ ಬಿರಾದಾರರಿಗೆ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ರಾಜಾರಾಂ ಚಿಟ್ಟಾ ಅವರು, “ಬಿರಾದಾರ ಅವರು ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಿಂದಲೂ ಅರ್ಹರಿದ್ದಾರೆ ಎಂಬುದು ಒಬ್ಬ ಕನ್ನಡಿಗನಾಗಿ ನನ್ನ ಅನಿಸಿಕೆ. ನಟ ಎಂದರೇ ಕೇವಲ ಹೀರೋಗಳು ಮಾತ್ರವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಪತ್ರಕರ್ತ ರವಿಕುಮಾರ್‌ ಟೆಲೆಕ್ಸ್‌ ಅವರು, “ಬಿರಾದಾರ್ ಕನ್ನಡದ ಮತ್ತೋರ್ವ ಖ್ಯಾತ ನಟ ಅನಂತನಾಗ್‌ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಅವರಿಗಿರಬಹುದಾದ ಸಾಮಾಜಿಕ‌ ಹಿನ್ನಲೆಯಾಗಲಿ, ಸಾಂಸ್ಕೃತಿಕ ಪ್ರಭಾವಳಿಯಾಗಲಿ, ರಾಜಕೀಯ ಸಿದ್ಧಾಂತದ ಬಲವಾಗಲಿ ಬಿರಾದರ್‌ಗೆ ಇಲ್ಲ. ಆದರೆ ಬಿರಾದಾರ್ ತನಗೊಹಿಸುವ ಪಾತ್ರದಲ್ಲಿ ಯಾರಿಗೂ ಕಮ್ಮಿಯಿಲ್ಲದಂತೆ ಪ್ರತಿಭೆಯನ್ನು ಮೆರೆಯುತ್ತಾರೆ. ಪಾತ್ರಕ್ಕೆ ನ್ಯಾಯ ಒದಗಿಸಬಲ್ಲರು. ಅನಂತ್ ನಾಗ್ ಮತ್ತು ಬಿರಾದಾರ್ ಅವರನ್ನು ಪರಸ್ಪರ ಹೋಲಿಕೆ ಮಾಡಲಾಗದು ನಿಜ, ಆದರೆ ನೈಜ ಪ್ರತಿಭೆ ಬಿರಾದಾರ್ ಒಕ್ಕೂಟ ಸರ್ಕಾರದ ‘ಪದ್ಮಶ್ರೀ’ ಪ್ರಶಸ್ತಿಗೆ ಎಲ್ಲಾ ಬಗೆಯಲ್ಲೂ ಅರ್ಹರಿದ್ದಾರೆ ಎಂಬುದನ್ನು ಅಲ್ಲೆಗೆಳೆಯುವಂತಿಲ್ಲ. ಬಿರಾದಾರ್ ಅವರಿಗೆ ಪದ್ಮಶ್ರೀ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ಮರಿಬಸಪ್ಪ ತುಮಕೂರು ಅವರು, “ವೈಜನಾಥ್ ಬಿರಾದರ್‌‌ 600 ಚಲನಚಿತ್ರಗಳಲ್ಲಿ ರಂಗಭೂಮಿಯಲ್ಲಿ ತಮ್ಮ ಬದುಕನ್ನು ಸವೆಸಿದ ಕಲಾವಿದ. ಇಂದು ಬರಿ ದೈನಂದಿನ ಬದುಕು ನೆಡೆಸಲಾಗದ, ಕುಟುಂಬ ಪೋಷಣೆ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು ಕಲಾಸೇವೆ ಮಾಡುತ್ತಿರುವ ಅಪ್ಪಟ ಕಲಾವಿದ. ಒಕ್ಕೂಟ ಸರ್ಕಾರ ಈ ಕಲಾವಿದ ಕಲಾಸೇವೆ ಗುರುತಿಸಲಿ” ಎಂದು ಆಗ್ರಹಿಸಿದ್ದಾರೆ.

ಬಸವರಾಜ ಅವರು, ನೈಜ ಕಲಾವಿದ, ಸರಳ ಜೀವಿ, ವೈಜನಾಥ ಬಿರಾದಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿರಾದಾರರಿಗೆ ಪದ್ಮಶ್ರೀ ಪಡೆಯುವ ಎಲ್ಲಾ ಅರ್ಹತೆಗಳೂ ಇವೆ. ಈ ಬಾರಿ ಪದ್ಮಶ್ರೀ ಅವರಿಗೆ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...