Homeಮುಖಪುಟಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿ ರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ 68 ವರ್ಷದ ನಟ ವೈಜನಾಥ ಬಿರಾದಾರ ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದರಾಗಿದ್ದಾರೆ. ಸುಮಾರು 500ರಷ್ಟು ಸಿನಿಮಾದಲ್ಲಿ ನಟಿಸಿರುವ ಬಿರಾದರ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾಗಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬಕ್ಕೆ ಒಂದು ಬರಹ!

ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವದಲ್ಲಿ ಅವರಿಗೆ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿತ್ತು. ಇದೀಗ ಇಂತಹ ಪ್ರತಿಭಾನ್ವಿತ ನಟನಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಫೇಸ್‌ಬುಕ್, ವಾಟ್ಸಪ್‌ನಲ್ಲಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ.

ಚಿಂತಕ ಕೆಎಲ್‌ ಚಂದ್ರಶೇಖರ್‌ ಐಜೂರು ಅವರು, “ಇವರು ನಟ ಬಿರಾದಾರ್….ಇವರು ನಿಮ್ಮ ಅನಂತನಾಗ್’ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಪ್ರತಿನಿಧಿಸುವ ರಾಜಕಾರಣದ ನಿಲುವಿಗೆ ಸೇರಿದವರಲ್ಲ. ಇವರದು ಅನಂತನಾಗ್ ಜಾತಿಯಂತೂ ಅಲ್ಲವೇ ಅಲ್ಲ. ಅನಂತನಾಗ್ ಅವರಿಗಿಂತಲೂ ನಟ ಬಿರಾದಾರ್ ಒಕ್ಕೂಟ ಸರ್ಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಲ್ಲೂ ಅರ್ಹ. ಪದ್ಮಶ್ರೀ ಈ ಸಲ ಬಿರಾದಾರರಿಗೆ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ರಾಜಾರಾಂ ಚಿಟ್ಟಾ ಅವರು, “ಬಿರಾದಾರ ಅವರು ಪದ್ಮಶ್ರೀ ಪ್ರಶಸ್ತಿಗೆ ಎಲ್ಲಾ ರೀತಿಯಿಂದಲೂ ಅರ್ಹರಿದ್ದಾರೆ ಎಂಬುದು ಒಬ್ಬ ಕನ್ನಡಿಗನಾಗಿ ನನ್ನ ಅನಿಸಿಕೆ. ನಟ ಎಂದರೇ ಕೇವಲ ಹೀರೋಗಳು ಮಾತ್ರವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಪತ್ರಕರ್ತ ರವಿಕುಮಾರ್‌ ಟೆಲೆಕ್ಸ್‌ ಅವರು, “ಬಿರಾದಾರ್ ಕನ್ನಡದ ಮತ್ತೋರ್ವ ಖ್ಯಾತ ನಟ ಅನಂತನಾಗ್‌ರಷ್ಟು ಸ್ಫುರದ್ರೂಪಿಯಲ್ಲ. ಅನಂತನಾಗ್ ಅವರಿಗಿರಬಹುದಾದ ಸಾಮಾಜಿಕ‌ ಹಿನ್ನಲೆಯಾಗಲಿ, ಸಾಂಸ್ಕೃತಿಕ ಪ್ರಭಾವಳಿಯಾಗಲಿ, ರಾಜಕೀಯ ಸಿದ್ಧಾಂತದ ಬಲವಾಗಲಿ ಬಿರಾದರ್‌ಗೆ ಇಲ್ಲ. ಆದರೆ ಬಿರಾದಾರ್ ತನಗೊಹಿಸುವ ಪಾತ್ರದಲ್ಲಿ ಯಾರಿಗೂ ಕಮ್ಮಿಯಿಲ್ಲದಂತೆ ಪ್ರತಿಭೆಯನ್ನು ಮೆರೆಯುತ್ತಾರೆ. ಪಾತ್ರಕ್ಕೆ ನ್ಯಾಯ ಒದಗಿಸಬಲ್ಲರು. ಅನಂತ್ ನಾಗ್ ಮತ್ತು ಬಿರಾದಾರ್ ಅವರನ್ನು ಪರಸ್ಪರ ಹೋಲಿಕೆ ಮಾಡಲಾಗದು ನಿಜ, ಆದರೆ ನೈಜ ಪ್ರತಿಭೆ ಬಿರಾದಾರ್ ಒಕ್ಕೂಟ ಸರ್ಕಾರದ ‘ಪದ್ಮಶ್ರೀ’ ಪ್ರಶಸ್ತಿಗೆ ಎಲ್ಲಾ ಬಗೆಯಲ್ಲೂ ಅರ್ಹರಿದ್ದಾರೆ ಎಂಬುದನ್ನು ಅಲ್ಲೆಗೆಳೆಯುವಂತಿಲ್ಲ. ಬಿರಾದಾರ್ ಅವರಿಗೆ ಪದ್ಮಶ್ರೀ ಸಿಗಲಿ” ಎಂದು ಆಗ್ರಹಿಸಿದ್ದಾರೆ.

ಮರಿಬಸಪ್ಪ ತುಮಕೂರು ಅವರು, “ವೈಜನಾಥ್ ಬಿರಾದರ್‌‌ 600 ಚಲನಚಿತ್ರಗಳಲ್ಲಿ ರಂಗಭೂಮಿಯಲ್ಲಿ ತಮ್ಮ ಬದುಕನ್ನು ಸವೆಸಿದ ಕಲಾವಿದ. ಇಂದು ಬರಿ ದೈನಂದಿನ ಬದುಕು ನೆಡೆಸಲಾಗದ, ಕುಟುಂಬ ಪೋಷಣೆ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು ಕಲಾಸೇವೆ ಮಾಡುತ್ತಿರುವ ಅಪ್ಪಟ ಕಲಾವಿದ. ಒಕ್ಕೂಟ ಸರ್ಕಾರ ಈ ಕಲಾವಿದ ಕಲಾಸೇವೆ ಗುರುತಿಸಲಿ” ಎಂದು ಆಗ್ರಹಿಸಿದ್ದಾರೆ.

ಬಸವರಾಜ ಅವರು, ನೈಜ ಕಲಾವಿದ, ಸರಳ ಜೀವಿ, ವೈಜನಾಥ ಬಿರಾದಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿರಾದಾರರಿಗೆ ಪದ್ಮಶ್ರೀ ಪಡೆಯುವ ಎಲ್ಲಾ ಅರ್ಹತೆಗಳೂ ಇವೆ. ಈ ಬಾರಿ ಪದ್ಮಶ್ರೀ ಅವರಿಗೆ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...