Homeಮುಖಪುಟಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

ಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

- Advertisement -
- Advertisement -

ಕೇರಳ ಶಾಲೆಗಳ ಆನ್‌ಲೈನ್ ತರಗತಿಗಳನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಅಶ್ಲೀಲ ವೀಡಿಯೊಗಳನ್ನು ಹಾಗೂ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ದುಷ್ಕೃತ್ಯವೆಸಗಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕನಿಷ್ಠ ಮೂರು ಘಟನೆಗಳಲ್ಲಿ ಜನಪ್ರಿಯ ವಿಡಿಯೋ ಕಾನ್ಫರೆನ್ಸಿಂಗ್ ಅಪ್ಲಿಕೇಶನ್ ಜೂಮ್ ಮತ್ತು ವಾಟ್ಸಾಪ್‌ಗೆ ದುಷ್ಕರ್ಮಿಗಳು ನುಸುಳಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ಸಮಾಜ ಕಲ್ಯಾಣ ಇಲಾಖೆ ಮತ್ತು ಪೊಲೀಸರು ಶಾಲೆಗಳು ಮತ್ತು ಶಿಕ್ಷಕರಿಗೆ ಇಂತಹ ಕೃತ್ಯಗಳ ಬಗ್ಗೆ ಎಚ್ಚರದಿಂದಿರಬೇಕೆಂದು ಕೇಳಿಕೊಂಡಿದ್ದು, ಅಂತಹ ಪೋಸ್ಟ್‌ಗಳು ಮಕ್ಕಳ ಮೇಲೆ ಆಳವಾದ ಆಘಾತವನ್ನು ಉಂಟುಮಾಡಬಹುದು ಎಂದು ಹೇಳಿದ್ದಾರೆ.

ಘಟನೆಗಳ ಬಗ್ಗೆ ರಾಜ್ಯ ಪೊಲೀಸರ ವಿಶೇಷ ತಂಡ ತನಿಖೆ ಆರಂಭಿಸಿದ್ದು, ಜೂಮ್‌ನಲ್ಲಿನ ಲೋಪದೋಷಗಳನ್ನು ಬಹಿರಂಗಪಡಿಸಿದ ಮೊದಲ ಘಟನೆ ಎಡಪ್ಪಲ್‌ನ ಖಾಸಗಿ ಶಾಲೆಯಿಂದ ವರದಿಯಾಗಿತ್ತು.

ಎಡಪ್ಪಲ್‌ನ ಸಿಬಿಎಸ್‌ಇ ಶಾಲೆಯ ಅಧಿಕಾರಿಗಳು 7 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ತರಗತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ತಮ್ಮ ನಗ್ನ ವೀಡಿಯೊಗಳನ್ನು ಲೈವ್-ಸ್ಟ್ರೀಮ್ ಮಾಡಿದ್ದಾರೆ ಎಂಬ ದೂರಿನೊಂದಿಗೆ ಮಲಪ್ಪುರಂನ ಚೈಲ್ಡ್ ಲೈನ್ ​​ಅಧಿಕಾರಿಗಳನ್ನು ಸಂಪರ್ಕಿಸಿದ್ದರು.

ಇದನ್ನೂ ಓದಿ: ಕೊರೊನಾ ಲಾಕ್‍ಡೌನ್ ಎದುರಾಗಿ ಆನ್‍ಲೈನ್ ಶಿಕ್ಷಣದ ಅಪಾಯ ಮತ್ತು ಸಮಸ್ಯೆಗಳು

ಶಾಲಾ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಪ್ರಕಾರ, “ಆಗಸ್ಟ್ 17 ರಿಂದ ಆಗಸ್ಟ್ 21 ರವರೆಗೆ ದುಷ್ಕರ್ಮಿಯು ಜೂಮ್ ಮೂಲಕ ಆನ್‌ಲೈನ್ ತರಗತಿಗಳಿಗೆ ಸೇರಿದ್ದು, ಅಲ್ಲಿ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ಕಳುಹಿಸಿದ್ದಾರೆ. ಈ ಘಟನೆಯು ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಶಿಕ್ಷಕರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಆಘಾತಕಾರಿ ಘಟನೆ. ಆ ಮನುಷ್ಯನ ನಿಜವಾದ ಉದ್ದೇಶ ನಮಗೆ ತಿಳಿದಿಲ್ಲ. ಆರಂಭದಲ್ಲಿ, ನಾವು ಅದನ್ನು ನಿಭಾಯಿಸಲು ಹೆಣಗಾಡಿದೆವು. ಶಾಲಾ ಆಡಳಿತ ಮಂಡಳಿಯು ಮಕ್ಕಳ ಕಲ್ಯಾಣ ಅಧಿಕಾರಿಗಳು ಮತ್ತು ಪೊಲೀಸರನ್ನು ಸಂಪರ್ಕಿಸಿದೆ ” ಎಂದು ಹೇಳಿದ್ದಾರೆ.

ಓದಿ: ಆನ್‌ಲೈನ್‌ನಲ್ಲಿ ಕಾನೂನು ಬಾಹಿರ ಆರೋಗ್ಯ ಸೇವೆ ನೀಡುವವರ ವಿರುದ್ದ ಕ್ರಮ ಕೈಗೊಳ್ಳಿ: ದೆಹಲಿ ಹೈಕೋರ್ಟ್

ಇತರ ಶಾಲೆಗಳ ಶಿಕ್ಷಕರು ಕೂಡ ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದ ಅವರು, “ಹೆಚ್ಚಿನ ಶಾಲಾ ಆಡಳಿತ ಮಂಡಳಿಗಳು ಪೊಲೀಸರನ್ನು ಸಂಪರ್ಕಿಸಲು ಸಿದ್ಧವಾಗಿಲ್ಲ” ಎಂದಿದ್ದಾರೆ.

ಮುಖ್ಯೋಪಾಧ್ಯಾಯರು ನೀಡಿದ ದೂರಿನ ಆಧಾರದ ಮೇಲೆ, ಕುಟ್ಟಿಪ್ಪುರಂ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸೆಕ್ಷನ್ 11 (I), 11(iii) ಮತ್ತು 12, ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಐಪಿಸಿ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣ ಬೇಡ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ SFI ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...