Homeಚಳವಳಿಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

ಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

- Advertisement -
- Advertisement -

ಸನ್ಮಾನ್ಯ ಸಜ್ಜನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ,

ನೀವು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಿರಿ. ಆನ್ ಲೈನ್ ಶಿಕ್ಷಣ ಮುಂದುವರಿಸುವುದಾಗಿ ಹೇಳಿದಿರಿ. ಆನ್ ಲೈನ್ ಕುರಿತು ಎರಡು ಭಿನ್ನ ಅಭಿಪ್ರಾಯಗಳು ಇವೆ. ಆನ್ ಲೈನ್ ಮಾಡಬೇಕು-ಮಾಡಬಾರದೆಂಬ ಎರಡೂ ವಾದಗಳು ಇವೆ. ಇದು ಗೊಂದಲಕ್ಕೆ ಕಾರಣ ಎಂದು ಹೇಳಿದಿರಿ. ಆದರೆ ನೀವು ಸ್ಪಷ್ಟನಿರ್ಧಾರಕ್ಕೆ ಬರಲು ಕ್ರಮ ವಹಿಸಿದಂತೆ ಕಾಣುತ್ತಿಲ್ಲ.

ಆನ್ ಲೈನ್ ಶಿಕ್ಷಣ ಮುಂದುವರಿಸುವ ತೀರ್ಮಾನ ಏಕೆ ಮಾಡಿದ್ದೀರಿ ಎಂಬುದೇ ತಿಳಿಯುತ್ತಿಲ್ಲ. ಸಾಮಾಜಿಕ ಅಂತರದಂತೆ ಶಿಕ್ಷಣದ ಅಂತರ, ತಾರತಮ್ಯ ಹೆಚ್ಚುತ್ತದೆ. ಹೀಗೆ ಸೃಷ್ಟಿಯಾಗುವ ಕಂದಕವನ್ನು ಮುಚ್ಚಲು ಕಷ್ಟಸಾಧ್ಯ. ನಗರ ಮತ್ತು ಗ್ರಾಮೀಣ ಭಾಗದ ನಡುವಿನ ವಿದ್ಯಾರ್ಥಿಗಳ ಜ್ಞಾನ ವಿಸ್ತರಣೆಯಲ್ಲಿ ಸಾಕಷ್ಟು ಅಂತರ ಉಂಟಾಗುತ್ತದೆ ಎಂಬ ಬಗ್ಗೆ ನೀವು ಯಾಕೆ ಯೋಚಿಸುತ್ತಿಲ್ಲ?

ಆನ್ ಲೈನ್ ಶಿಕ್ಷಣ ನೀಡುವುದನ್ನು ಮುಂದುವರಿಸಿದರೆ ಎಲ್ಲರ ಬಳಿ ಮೊಬೈಲ್ ಇರಬೇಕು ಅಲ್ಲವೇ? ಈಗ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದ ಮಕ್ಕಳು ಮತ್ತು ಪೋಷಕರ ಬಳಿ ಎಷ್ಟು ಆಂಡ್ರಾಯಿಡ್ ಮೊಬೈಲ್ ಗಳು ಇವೆ? ಎಲ್ಲರೂ ಮೊಬೈಲ್ ಹೊಂದಿದ್ದಾರೆಯೇ? ಈ ಬಗ್ಗೆ ಸರ್ವೇ ನಡೆಸಿದ್ದೀರಾ?

ಗ್ರಾಮೀಣ ಭಾಗದಲ್ಲಿ ಶಾಲೆಗೆ ಮಕ್ಕಳು ಬರುವುದೇ ದುಸ್ಥರ. ಪರಿಸ್ಥಿತಿ ಹೀಗಿದ್ದಾಗ ಆ ಮಕ್ಕಳು ಮತ್ತು ಪೋಷಕರು ಮೊಬೈಲ್ ಗಳನ್ನು ಎಲ್ಲಿಂದ ಖರೀದಿಸಬೇಕು. ನಿಮ್ಮದೇ ಪಕ್ಷದ ಸರ್ಕಾರವೇ ಮಾಡಿದ ಅವೈಜ್ಞಾನಿಕ ನೀತಿಗಳು ಗ್ರಾಮೀಣ ಜನರು ಹಣಕ್ಕೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಥದ್ದರಲ್ಲಿ ತಮ್ಮ ಮಕ್ಕಳಿಗೆ ಕನಿಷ್ಟ ಏಳೆಂಟು ಸಾವಿರ ರೂಪಾಯಿ ಮೌಲ್ಯದ ಅಂಡ್ರಾಯಿಡ್ ಮೊಬೈಲ್ ಕೊಡಿಸುವ ಶಕ್ತಿ ಎಲ್ಲಿಂದ ಬರುತ್ತದೆ. ಹೋಗಲಿ ಕೆಲವರ ಬಳಿ ಮೊಬೈಲ್ ಗಳು ಇವೆ ಎಂದರೂ ಅದಕ್ಕೆ ಡೇಟಾ, ನೆಟ್ ವರ್ಕ್ ಸಿಗಬೇಕು ಅಲ್ಲವೇ? 5ಜಿ ಯತ್ತ ದೇಶ ಮುಖ ಮಾಡಿದ್ದರೂ ಗ್ರಾಮೀಣ ಭಾಗ ಸಿಗ್ನಲ್, ನೆಟ್ ವೆರ್ಕ್ ಸಿಗದೆ ಬಳಲುತ್ತಿದೆ.
ಸಿಗ್ನಲ್ ಅಥವಾ ನೆಟ್ ವರ್ಕ್ ಸಿಗಬೇಕು ಅಂದರೆ ಮರಗಳನ್ನು ಹತ್ತಿ ಕುಳಿತುಕೊಳ್ಳಬೇಕು. ಮಕ್ಕಳು ಆ ಕೆಲಸವನ್ನು ಮಾಡಬಹುದು. ಅಲ್ಲಿ ಅನಾಹುತ ಸಂಭವಿಸಿದರೆ ಜೀವಹಾನಿ ಆಗುತ್ತದೆ. ಅದಕ್ಕೆ ಹೊಣೆ ಯಾರು? ಆನ್ ಲೈನ್ ಶಿಕ್ಷಣ ಬಡ ವಿದ್ಯಾರ್ಥಿಗಳಿಗೆ ಸುಲಭವಾಗಿ ದೊರೆಯುವುದಿಲ್ಲ. ದುಡ್ಡಿದ್ದವರು ದುಭಾರಿ ಬೆಲೆಯ ಮೊಬೈಲ್ ಖರೀದಿ ಮಾಡಿ ಆನ್ ಲೈನ್ ಶಿಕ್ಷಣಕ್ಕೆ ಹೊಂದಿಕೊಳ್ಳಬಹುದು.

ಆನ್ ಲೈನ್ ಶಿಕ್ಷಣ ಅಂದರೆ ಖಾಸಗಿ ಶಾಲೆಗಳು ದುಡ್ಡು ಸುಲಿಯಲು ಹೆಚ್ಚು ಅವಕಾಶ ಮಾಡಿಕೊಡುತ್ತದೆ. ಮನೆ ಪಾಠದ ನೆಪದಲ್ಲಿ ಕ್ಯಾಪಿಟೇಶನ್ ಶುಲ್ಕ ವಸೂಲಿಗೂ ಅವಕಾಶ ಮಾಡಿಕೊಡುವ ಖಾಸಗಿ ಆಡಳಿತ ಮಂಡಳಿಗಳ ಜೊತೆಗೆ ನೀವು ಶಾಮೀಲಾಗಿದ್ದೀರಿ ಎಂಬ ಅನುಮಾನ ಮೂಡುತ್ತದೆ.

ಗ್ರಾಮೀಣ ಭಾಗದಲ್ಲಿರುವ ಖಾಸಗಿ ಮತ್ತು ಸರ್ಕಾರಿ ಪ್ರೌಢಶಿಕ್ಷಣ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಬಡವರೇ ಆಗಿರುತ್ತಾರೆ. ಆ ಮಕ್ಕಳು ಸರ್ಕಾರ ವಿಧಿಸಿರುವ ಶುಲ್ಕ ಕಟ್ಟಲು ಕೂಡ ಕಷ್ಟಪಡುತ್ತಾರೆ. ಇದೇ ಕಾರಣಕ್ಕಾಗಿಯೇ ಗ್ರಾಮಾಂತರ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ ಲೈನ್ ಶಿಕ್ಷಣ ಬೇಡವೆಂದು ಮನವಿಗಳ ಮೇಲೆ ಮನವಿಗಳನ್ನು ಸಲ್ಲಿಸಿದವು. ನಮ್ಮ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಕೊಡಲು ಸಾಧ್ಯವಿಲ್ಲ. ನಮ್ಮ ವಿದ್ಯಾರ್ಥಿಗಳು ಮೊಬೈಲ್ ಕೊಳ್ಳುವಷ್ಟು ಶಕ್ತಿ ಇಲ್ಲ. ಹಾಗಾಗಿ ಆನ್ ಲೈನ್ ಶಿಕ್ಷಣ ಕಡಾಖಂಡಿತವಾಗಿ ಬೇಡವೆಂದರು. ಈ ಮನವಿಗಳು ಸಜ್ಜನ ಶಿಕ್ಷಣ ಸಚಿವರ ಕಿವಿಗೆ ಹೋಗಲೇ ಇಲ್ಲ ಅನ್ನಿಸುತ್ತದೆ.
ನಗರ ಪ್ರದೇಶದಲ್ಲಿ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಎಲ್ಲ ಮಕ್ಕಳ ಬಳಿಯೂ ಮೊಬೈಲ್ ಇದೆ ಎಂದು ಭಾವಿಸುವುದೂ ಕೂಡ ತಪ್ಪು. ಯಾಕೆಂದರೆ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಬಂದ ಬಡ ಕುಟುಂಬಗಳು ಮನೆ ಬಾಡಿಗೆ, ಕುಟುಂಬ ನಿರ್ವಹಣೆ ಮಾಡುವುದು ದುಸ್ಥರ. ಬಡ ತಂದೆತಾಯಿಗಳು ತಮ್ಮ ಮಕ್ಕಳನ್ನು ಹಗಲಿರುಳು ದುಡಿದು ಗುಣಮಟ್ಟದ ಶಿಕ್ಷಣ ಕೊಡಿಸುವುದಕ್ಕೆ ಪಡಿಪಾಟಲು ಬೀಳುತ್ತಿರುವುದು ಶಿಕ್ಷಣ ಸಚಿವರಿಗೆ ತಿಳಿದಿಲ್ಲವೇ?

ನಿಮ್ಮ ನಿಲುವುಗಳು ಯಾರ ಪರವಾಗಿವೆ ಎಂಬುದು ಆನ್ ಲೈನ್ ಶಿಕ್ಷಣ ಮುಂದುವರಿಸುವುದರಿಂದಲೇ ಗೊತ್ತಾಗುತ್ತದೆ. ನೇರ ಶಿಕ್ಷಣ ಕೊಡುವಾಗಲೇ ಕಲಿಕೆಯಲ್ಲಿ ಹಿಂದೆ ಬೀಳುವ ಮಕ್ಕಳು ಇರುವಾಗ, ತರಗತಿಯಲ್ಲಿ ಕುಳಿತ ಮಕ್ಕಳೇ ಪಾಠ ಮಾಡುವುದನ್ನು ಗಮನ ಕೊಟ್ಟು ಆಲಿಸದೇ ಇರುವಾಗ ಪದೇ ಪದೇ ಮಕ್ಕಳನ್ನು ಪಾಠದ ಕಡೆ ಗಮನ ಸೆಳಯಲು ಉಪ ಕತೆಗಳನ್ನು ಹೇಳುವುದು ನೇರ ಬೋಧನೆಯಲ್ಲಿ ನಾವು ಕಾಣಬಹುದು. ಆದರೂ ಹಲ ಮಕ್ಕಳ ಮನಸ್ಸು ಮರ್ಕಟನಂತೆ. ಹೀಗಿದ್ದಾಗ ಎಲ್ಲೋ ಕುಳಿತು ಪಾಠ ಮಾಡುವ ಶಿಕ್ಷಕರು ಮಕ್ಕಳ ಮನಸ್ಸನ್ನು ಕೇಂದ್ರೀಕರಿಸುವಂತೆ ಮಾಡಲು ಹೇಗೆ ಸಾಧ್ಯ? ಮನೆಯಲ್ಲಿ ಯಾರ ಅಂಕೆಯೂ ಇಲ್ಲದೆ ಒಂದೆಡೆ ಕೂರದ ಸದಾ ಓಡಾಡುತ್ತಲೇ ಇರುವ ಮಕ್ಕಳನ್ನು ಒಂದೆಡೆ ಕೂರಿಸಿ ಪಾಠ ಕೇಳುವಂತೆ ಮಾಡುವುದು ಕಷ್ಟದ ಕೆಲಸ. ತಂದೆತಾಯಿಗಳ ಭಯಕ್ಕೆ ಮೊಬೈಲ್ ನಲ್ಲಿ ಆನ್ ಲೈನ್ ತರಗತಿಗಳನ್ನು ಕೇಳಿದರೂ ಮಕ್ಕಳು ಪಾಠವನ್ನು ಸರಿಯಾಗಿ ಗ್ರಹಿಸಿದ್ದಾರೆಂಬುದನ್ನು ಹೇಗೆ ಹೇಳಲು ಸಾಧ್ಯ.

ಪೋಷಕರು ಮತ್ತು ವಿದ್ಯಾರ್ಥಿಗಳ ಸಂಕಟವನ್ನು ಅರ್ಥ ಮಾಡಿಕೊಳ್ಳದ ಪ್ರಾಥಮಿಕ ಶಿಕ್ಷಣ ಸಚಿವರು ಯಾರೋ ಪ್ರಚಾರಕ್ಕಾಗಿ ಒಬ್ಬ ತರಕಾರಿ, ಹಣ್ಣು ಮಾರುತ್ತಿದ್ದ ವಿದ್ಯಾರ್ಥಿನಿಗೆ ಮೊಬೈಲ್ ಕೊಡಿಸಿದ್ದಾರೆ. ಅದು ಪತ್ರಿಕೆಯಲ್ಲಿ ಬಂದಿದೆ ಎಂದು ಹೆಮ್ಮೆಯಿಂದ ಹೇಳಿದರೆ ಲಕ್ಷಾಂತರ ತಂದೆತಾಯಿಗಳು ಇನ್ನೂ ಬೇಸಿಕ್ ಸೆಟ್ ಗಳನ್ನು ಇಟ್ಟುಕೊಂಡು 50 ರೂಪಾಯಿ ಕರೆನ್ಸಿ ಹಾಕಿಸಿ ತಿಂಗಳವರೆಗೆ ದಿನದೂಡುತ್ತಿರುವುದು ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ?

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...