Homeಚಳವಳಿಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

ಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

- Advertisement -
- Advertisement -

ಸನ್ಮಾನ್ಯ ಸಜ್ಜನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ,

ನೀವು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಿರಿ. ಆನ್ ಲೈನ್ ಶಿಕ್ಷಣ ಮುಂದುವರಿಸುವುದಾಗಿ ಹೇಳಿದಿರಿ. ಆನ್ ಲೈನ್ ಕುರಿತು ಎರಡು ಭಿನ್ನ ಅಭಿಪ್ರಾಯಗಳು ಇವೆ. ಆನ್ ಲೈನ್ ಮಾಡಬೇಕು-ಮಾಡಬಾರದೆಂಬ ಎರಡೂ ವಾದಗಳು ಇವೆ. ಇದು ಗೊಂದಲಕ್ಕೆ ಕಾರಣ ಎಂದು ಹೇಳಿದಿರಿ. ಆದರೆ ನೀವು ಸ್ಪಷ್ಟನಿರ್ಧಾರಕ್ಕೆ ಬರಲು ಕ್ರಮ ವಹಿಸಿದಂತೆ ಕಾಣುತ್ತಿಲ್ಲ.

ಆನ್ ಲೈನ್ ಶಿಕ್ಷಣ ಮುಂದುವರಿಸುವ ತೀರ್ಮಾನ ಏಕೆ ಮಾಡಿದ್ದೀರಿ ಎಂಬುದೇ ತಿಳಿಯುತ್ತಿಲ್ಲ. ಸಾಮಾಜಿಕ ಅಂತರದಂತೆ ಶಿಕ್ಷಣದ ಅಂತರ, ತಾರತಮ್ಯ ಹೆಚ್ಚುತ್ತದೆ. ಹೀಗೆ ಸೃಷ್ಟಿಯಾಗುವ ಕಂದಕವನ್ನು ಮುಚ್ಚಲು ಕಷ್ಟಸಾಧ್ಯ. ನಗರ ಮತ್ತು ಗ್ರಾಮೀಣ ಭಾಗದ ನಡುವಿನ ವಿದ್ಯಾರ್ಥಿಗಳ ಜ್ಞಾನ ವಿಸ್ತರಣೆಯಲ್ಲಿ ಸಾಕಷ್ಟು ಅಂತರ ಉಂಟಾಗುತ್ತದೆ ಎಂಬ ಬಗ್ಗೆ ನೀವು ಯಾಕೆ ಯೋಚಿಸುತ್ತಿಲ್ಲ?

ಆನ್ ಲೈನ್ ಶಿಕ್ಷಣ ನೀಡುವುದನ್ನು ಮುಂದುವರಿಸಿದರೆ ಎಲ್ಲರ ಬಳಿ ಮೊಬೈಲ್ ಇರಬೇಕು ಅಲ್ಲವೇ? ಈಗ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದ ಮಕ್ಕಳು ಮತ್ತು ಪೋಷಕರ ಬಳಿ ಎಷ್ಟು ಆಂಡ್ರಾಯಿಡ್ ಮೊಬೈಲ್ ಗಳು ಇವೆ? ಎಲ್ಲರೂ ಮೊಬೈಲ್ ಹೊಂದಿದ್ದಾರೆಯೇ? ಈ ಬಗ್ಗೆ ಸರ್ವೇ ನಡೆಸಿದ್ದೀರಾ?

ಗ್ರಾಮೀಣ ಭಾಗದಲ್ಲಿ ಶಾಲೆಗೆ ಮಕ್ಕಳು ಬರುವುದೇ ದುಸ್ಥರ. ಪರಿಸ್ಥಿತಿ ಹೀಗಿದ್ದಾಗ ಆ ಮಕ್ಕಳು ಮತ್ತು ಪೋಷಕರು ಮೊಬೈಲ್ ಗಳನ್ನು ಎಲ್ಲಿಂದ ಖರೀದಿಸಬೇಕು. ನಿಮ್ಮದೇ ಪಕ್ಷದ ಸರ್ಕಾರವೇ ಮಾಡಿದ ಅವೈಜ್ಞಾನಿಕ ನೀತಿಗಳು ಗ್ರಾಮೀಣ ಜನರು ಹಣಕ್ಕೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಥದ್ದರಲ್ಲಿ ತಮ್ಮ ಮಕ್ಕಳಿಗೆ ಕನಿಷ್ಟ ಏಳೆಂಟು ಸಾವಿರ ರೂಪಾಯಿ ಮೌಲ್ಯದ ಅಂಡ್ರಾಯಿಡ್ ಮೊಬೈಲ್ ಕೊಡಿಸುವ ಶಕ್ತಿ ಎಲ್ಲಿಂದ ಬರುತ್ತದೆ. ಹೋಗಲಿ ಕೆಲವರ ಬಳಿ ಮೊಬೈಲ್ ಗಳು ಇವೆ ಎಂದರೂ ಅದಕ್ಕೆ ಡೇಟಾ, ನೆಟ್ ವರ್ಕ್ ಸಿಗಬೇಕು ಅಲ್ಲವೇ? 5ಜಿ ಯತ್ತ ದೇಶ ಮುಖ ಮಾಡಿದ್ದರೂ ಗ್ರಾಮೀಣ ಭಾಗ ಸಿಗ್ನಲ್, ನೆಟ್ ವೆರ್ಕ್ ಸಿಗದೆ ಬಳಲುತ್ತಿದೆ.
ಸಿಗ್ನಲ್ ಅಥವಾ ನೆಟ್ ವರ್ಕ್ ಸಿಗಬೇಕು ಅಂದರೆ ಮರಗಳನ್ನು ಹತ್ತಿ ಕುಳಿತುಕೊಳ್ಳಬೇಕು. ಮಕ್ಕಳು ಆ ಕೆಲಸವನ್ನು ಮಾಡಬಹುದು. ಅಲ್ಲಿ ಅನಾಹುತ ಸಂಭವಿಸಿದರೆ ಜೀವಹಾನಿ ಆಗುತ್ತದೆ. ಅದಕ್ಕೆ ಹೊಣೆ ಯಾರು? ಆನ್ ಲೈನ್ ಶಿಕ್ಷಣ ಬಡ ವಿದ್ಯಾರ್ಥಿಗಳಿಗೆ ಸುಲಭವಾಗಿ ದೊರೆಯುವುದಿಲ್ಲ. ದುಡ್ಡಿದ್ದವರು ದುಭಾರಿ ಬೆಲೆಯ ಮೊಬೈಲ್ ಖರೀದಿ ಮಾಡಿ ಆನ್ ಲೈನ್ ಶಿಕ್ಷಣಕ್ಕೆ ಹೊಂದಿಕೊಳ್ಳಬಹುದು.

ಆನ್ ಲೈನ್ ಶಿಕ್ಷಣ ಅಂದರೆ ಖಾಸಗಿ ಶಾಲೆಗಳು ದುಡ್ಡು ಸುಲಿಯಲು ಹೆಚ್ಚು ಅವಕಾಶ ಮಾಡಿಕೊಡುತ್ತದೆ. ಮನೆ ಪಾಠದ ನೆಪದಲ್ಲಿ ಕ್ಯಾಪಿಟೇಶನ್ ಶುಲ್ಕ ವಸೂಲಿಗೂ ಅವಕಾಶ ಮಾಡಿಕೊಡುವ ಖಾಸಗಿ ಆಡಳಿತ ಮಂಡಳಿಗಳ ಜೊತೆಗೆ ನೀವು ಶಾಮೀಲಾಗಿದ್ದೀರಿ ಎಂಬ ಅನುಮಾನ ಮೂಡುತ್ತದೆ.

ಗ್ರಾಮೀಣ ಭಾಗದಲ್ಲಿರುವ ಖಾಸಗಿ ಮತ್ತು ಸರ್ಕಾರಿ ಪ್ರೌಢಶಿಕ್ಷಣ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಬಡವರೇ ಆಗಿರುತ್ತಾರೆ. ಆ ಮಕ್ಕಳು ಸರ್ಕಾರ ವಿಧಿಸಿರುವ ಶುಲ್ಕ ಕಟ್ಟಲು ಕೂಡ ಕಷ್ಟಪಡುತ್ತಾರೆ. ಇದೇ ಕಾರಣಕ್ಕಾಗಿಯೇ ಗ್ರಾಮಾಂತರ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ ಲೈನ್ ಶಿಕ್ಷಣ ಬೇಡವೆಂದು ಮನವಿಗಳ ಮೇಲೆ ಮನವಿಗಳನ್ನು ಸಲ್ಲಿಸಿದವು. ನಮ್ಮ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಕೊಡಲು ಸಾಧ್ಯವಿಲ್ಲ. ನಮ್ಮ ವಿದ್ಯಾರ್ಥಿಗಳು ಮೊಬೈಲ್ ಕೊಳ್ಳುವಷ್ಟು ಶಕ್ತಿ ಇಲ್ಲ. ಹಾಗಾಗಿ ಆನ್ ಲೈನ್ ಶಿಕ್ಷಣ ಕಡಾಖಂಡಿತವಾಗಿ ಬೇಡವೆಂದರು. ಈ ಮನವಿಗಳು ಸಜ್ಜನ ಶಿಕ್ಷಣ ಸಚಿವರ ಕಿವಿಗೆ ಹೋಗಲೇ ಇಲ್ಲ ಅನ್ನಿಸುತ್ತದೆ.
ನಗರ ಪ್ರದೇಶದಲ್ಲಿ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಎಲ್ಲ ಮಕ್ಕಳ ಬಳಿಯೂ ಮೊಬೈಲ್ ಇದೆ ಎಂದು ಭಾವಿಸುವುದೂ ಕೂಡ ತಪ್ಪು. ಯಾಕೆಂದರೆ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಬಂದ ಬಡ ಕುಟುಂಬಗಳು ಮನೆ ಬಾಡಿಗೆ, ಕುಟುಂಬ ನಿರ್ವಹಣೆ ಮಾಡುವುದು ದುಸ್ಥರ. ಬಡ ತಂದೆತಾಯಿಗಳು ತಮ್ಮ ಮಕ್ಕಳನ್ನು ಹಗಲಿರುಳು ದುಡಿದು ಗುಣಮಟ್ಟದ ಶಿಕ್ಷಣ ಕೊಡಿಸುವುದಕ್ಕೆ ಪಡಿಪಾಟಲು ಬೀಳುತ್ತಿರುವುದು ಶಿಕ್ಷಣ ಸಚಿವರಿಗೆ ತಿಳಿದಿಲ್ಲವೇ?

ನಿಮ್ಮ ನಿಲುವುಗಳು ಯಾರ ಪರವಾಗಿವೆ ಎಂಬುದು ಆನ್ ಲೈನ್ ಶಿಕ್ಷಣ ಮುಂದುವರಿಸುವುದರಿಂದಲೇ ಗೊತ್ತಾಗುತ್ತದೆ. ನೇರ ಶಿಕ್ಷಣ ಕೊಡುವಾಗಲೇ ಕಲಿಕೆಯಲ್ಲಿ ಹಿಂದೆ ಬೀಳುವ ಮಕ್ಕಳು ಇರುವಾಗ, ತರಗತಿಯಲ್ಲಿ ಕುಳಿತ ಮಕ್ಕಳೇ ಪಾಠ ಮಾಡುವುದನ್ನು ಗಮನ ಕೊಟ್ಟು ಆಲಿಸದೇ ಇರುವಾಗ ಪದೇ ಪದೇ ಮಕ್ಕಳನ್ನು ಪಾಠದ ಕಡೆ ಗಮನ ಸೆಳಯಲು ಉಪ ಕತೆಗಳನ್ನು ಹೇಳುವುದು ನೇರ ಬೋಧನೆಯಲ್ಲಿ ನಾವು ಕಾಣಬಹುದು. ಆದರೂ ಹಲ ಮಕ್ಕಳ ಮನಸ್ಸು ಮರ್ಕಟನಂತೆ. ಹೀಗಿದ್ದಾಗ ಎಲ್ಲೋ ಕುಳಿತು ಪಾಠ ಮಾಡುವ ಶಿಕ್ಷಕರು ಮಕ್ಕಳ ಮನಸ್ಸನ್ನು ಕೇಂದ್ರೀಕರಿಸುವಂತೆ ಮಾಡಲು ಹೇಗೆ ಸಾಧ್ಯ? ಮನೆಯಲ್ಲಿ ಯಾರ ಅಂಕೆಯೂ ಇಲ್ಲದೆ ಒಂದೆಡೆ ಕೂರದ ಸದಾ ಓಡಾಡುತ್ತಲೇ ಇರುವ ಮಕ್ಕಳನ್ನು ಒಂದೆಡೆ ಕೂರಿಸಿ ಪಾಠ ಕೇಳುವಂತೆ ಮಾಡುವುದು ಕಷ್ಟದ ಕೆಲಸ. ತಂದೆತಾಯಿಗಳ ಭಯಕ್ಕೆ ಮೊಬೈಲ್ ನಲ್ಲಿ ಆನ್ ಲೈನ್ ತರಗತಿಗಳನ್ನು ಕೇಳಿದರೂ ಮಕ್ಕಳು ಪಾಠವನ್ನು ಸರಿಯಾಗಿ ಗ್ರಹಿಸಿದ್ದಾರೆಂಬುದನ್ನು ಹೇಗೆ ಹೇಳಲು ಸಾಧ್ಯ.

ಪೋಷಕರು ಮತ್ತು ವಿದ್ಯಾರ್ಥಿಗಳ ಸಂಕಟವನ್ನು ಅರ್ಥ ಮಾಡಿಕೊಳ್ಳದ ಪ್ರಾಥಮಿಕ ಶಿಕ್ಷಣ ಸಚಿವರು ಯಾರೋ ಪ್ರಚಾರಕ್ಕಾಗಿ ಒಬ್ಬ ತರಕಾರಿ, ಹಣ್ಣು ಮಾರುತ್ತಿದ್ದ ವಿದ್ಯಾರ್ಥಿನಿಗೆ ಮೊಬೈಲ್ ಕೊಡಿಸಿದ್ದಾರೆ. ಅದು ಪತ್ರಿಕೆಯಲ್ಲಿ ಬಂದಿದೆ ಎಂದು ಹೆಮ್ಮೆಯಿಂದ ಹೇಳಿದರೆ ಲಕ್ಷಾಂತರ ತಂದೆತಾಯಿಗಳು ಇನ್ನೂ ಬೇಸಿಕ್ ಸೆಟ್ ಗಳನ್ನು ಇಟ್ಟುಕೊಂಡು 50 ರೂಪಾಯಿ ಕರೆನ್ಸಿ ಹಾಕಿಸಿ ತಿಂಗಳವರೆಗೆ ದಿನದೂಡುತ್ತಿರುವುದು ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ?

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...