Homeಚಳವಳಿಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

ಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

- Advertisement -
- Advertisement -

ಸನ್ಮಾನ್ಯ ಸಜ್ಜನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ,

ನೀವು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಿರಿ. ಆನ್ ಲೈನ್ ಶಿಕ್ಷಣ ಮುಂದುವರಿಸುವುದಾಗಿ ಹೇಳಿದಿರಿ. ಆನ್ ಲೈನ್ ಕುರಿತು ಎರಡು ಭಿನ್ನ ಅಭಿಪ್ರಾಯಗಳು ಇವೆ. ಆನ್ ಲೈನ್ ಮಾಡಬೇಕು-ಮಾಡಬಾರದೆಂಬ ಎರಡೂ ವಾದಗಳು ಇವೆ. ಇದು ಗೊಂದಲಕ್ಕೆ ಕಾರಣ ಎಂದು ಹೇಳಿದಿರಿ. ಆದರೆ ನೀವು ಸ್ಪಷ್ಟನಿರ್ಧಾರಕ್ಕೆ ಬರಲು ಕ್ರಮ ವಹಿಸಿದಂತೆ ಕಾಣುತ್ತಿಲ್ಲ.

ಆನ್ ಲೈನ್ ಶಿಕ್ಷಣ ಮುಂದುವರಿಸುವ ತೀರ್ಮಾನ ಏಕೆ ಮಾಡಿದ್ದೀರಿ ಎಂಬುದೇ ತಿಳಿಯುತ್ತಿಲ್ಲ. ಸಾಮಾಜಿಕ ಅಂತರದಂತೆ ಶಿಕ್ಷಣದ ಅಂತರ, ತಾರತಮ್ಯ ಹೆಚ್ಚುತ್ತದೆ. ಹೀಗೆ ಸೃಷ್ಟಿಯಾಗುವ ಕಂದಕವನ್ನು ಮುಚ್ಚಲು ಕಷ್ಟಸಾಧ್ಯ. ನಗರ ಮತ್ತು ಗ್ರಾಮೀಣ ಭಾಗದ ನಡುವಿನ ವಿದ್ಯಾರ್ಥಿಗಳ ಜ್ಞಾನ ವಿಸ್ತರಣೆಯಲ್ಲಿ ಸಾಕಷ್ಟು ಅಂತರ ಉಂಟಾಗುತ್ತದೆ ಎಂಬ ಬಗ್ಗೆ ನೀವು ಯಾಕೆ ಯೋಚಿಸುತ್ತಿಲ್ಲ?

ಆನ್ ಲೈನ್ ಶಿಕ್ಷಣ ನೀಡುವುದನ್ನು ಮುಂದುವರಿಸಿದರೆ ಎಲ್ಲರ ಬಳಿ ಮೊಬೈಲ್ ಇರಬೇಕು ಅಲ್ಲವೇ? ಈಗ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದ ಮಕ್ಕಳು ಮತ್ತು ಪೋಷಕರ ಬಳಿ ಎಷ್ಟು ಆಂಡ್ರಾಯಿಡ್ ಮೊಬೈಲ್ ಗಳು ಇವೆ? ಎಲ್ಲರೂ ಮೊಬೈಲ್ ಹೊಂದಿದ್ದಾರೆಯೇ? ಈ ಬಗ್ಗೆ ಸರ್ವೇ ನಡೆಸಿದ್ದೀರಾ?

ಗ್ರಾಮೀಣ ಭಾಗದಲ್ಲಿ ಶಾಲೆಗೆ ಮಕ್ಕಳು ಬರುವುದೇ ದುಸ್ಥರ. ಪರಿಸ್ಥಿತಿ ಹೀಗಿದ್ದಾಗ ಆ ಮಕ್ಕಳು ಮತ್ತು ಪೋಷಕರು ಮೊಬೈಲ್ ಗಳನ್ನು ಎಲ್ಲಿಂದ ಖರೀದಿಸಬೇಕು. ನಿಮ್ಮದೇ ಪಕ್ಷದ ಸರ್ಕಾರವೇ ಮಾಡಿದ ಅವೈಜ್ಞಾನಿಕ ನೀತಿಗಳು ಗ್ರಾಮೀಣ ಜನರು ಹಣಕ್ಕೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಥದ್ದರಲ್ಲಿ ತಮ್ಮ ಮಕ್ಕಳಿಗೆ ಕನಿಷ್ಟ ಏಳೆಂಟು ಸಾವಿರ ರೂಪಾಯಿ ಮೌಲ್ಯದ ಅಂಡ್ರಾಯಿಡ್ ಮೊಬೈಲ್ ಕೊಡಿಸುವ ಶಕ್ತಿ ಎಲ್ಲಿಂದ ಬರುತ್ತದೆ. ಹೋಗಲಿ ಕೆಲವರ ಬಳಿ ಮೊಬೈಲ್ ಗಳು ಇವೆ ಎಂದರೂ ಅದಕ್ಕೆ ಡೇಟಾ, ನೆಟ್ ವರ್ಕ್ ಸಿಗಬೇಕು ಅಲ್ಲವೇ? 5ಜಿ ಯತ್ತ ದೇಶ ಮುಖ ಮಾಡಿದ್ದರೂ ಗ್ರಾಮೀಣ ಭಾಗ ಸಿಗ್ನಲ್, ನೆಟ್ ವೆರ್ಕ್ ಸಿಗದೆ ಬಳಲುತ್ತಿದೆ.
ಸಿಗ್ನಲ್ ಅಥವಾ ನೆಟ್ ವರ್ಕ್ ಸಿಗಬೇಕು ಅಂದರೆ ಮರಗಳನ್ನು ಹತ್ತಿ ಕುಳಿತುಕೊಳ್ಳಬೇಕು. ಮಕ್ಕಳು ಆ ಕೆಲಸವನ್ನು ಮಾಡಬಹುದು. ಅಲ್ಲಿ ಅನಾಹುತ ಸಂಭವಿಸಿದರೆ ಜೀವಹಾನಿ ಆಗುತ್ತದೆ. ಅದಕ್ಕೆ ಹೊಣೆ ಯಾರು? ಆನ್ ಲೈನ್ ಶಿಕ್ಷಣ ಬಡ ವಿದ್ಯಾರ್ಥಿಗಳಿಗೆ ಸುಲಭವಾಗಿ ದೊರೆಯುವುದಿಲ್ಲ. ದುಡ್ಡಿದ್ದವರು ದುಭಾರಿ ಬೆಲೆಯ ಮೊಬೈಲ್ ಖರೀದಿ ಮಾಡಿ ಆನ್ ಲೈನ್ ಶಿಕ್ಷಣಕ್ಕೆ ಹೊಂದಿಕೊಳ್ಳಬಹುದು.

ಆನ್ ಲೈನ್ ಶಿಕ್ಷಣ ಅಂದರೆ ಖಾಸಗಿ ಶಾಲೆಗಳು ದುಡ್ಡು ಸುಲಿಯಲು ಹೆಚ್ಚು ಅವಕಾಶ ಮಾಡಿಕೊಡುತ್ತದೆ. ಮನೆ ಪಾಠದ ನೆಪದಲ್ಲಿ ಕ್ಯಾಪಿಟೇಶನ್ ಶುಲ್ಕ ವಸೂಲಿಗೂ ಅವಕಾಶ ಮಾಡಿಕೊಡುವ ಖಾಸಗಿ ಆಡಳಿತ ಮಂಡಳಿಗಳ ಜೊತೆಗೆ ನೀವು ಶಾಮೀಲಾಗಿದ್ದೀರಿ ಎಂಬ ಅನುಮಾನ ಮೂಡುತ್ತದೆ.

ಗ್ರಾಮೀಣ ಭಾಗದಲ್ಲಿರುವ ಖಾಸಗಿ ಮತ್ತು ಸರ್ಕಾರಿ ಪ್ರೌಢಶಿಕ್ಷಣ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಬಡವರೇ ಆಗಿರುತ್ತಾರೆ. ಆ ಮಕ್ಕಳು ಸರ್ಕಾರ ವಿಧಿಸಿರುವ ಶುಲ್ಕ ಕಟ್ಟಲು ಕೂಡ ಕಷ್ಟಪಡುತ್ತಾರೆ. ಇದೇ ಕಾರಣಕ್ಕಾಗಿಯೇ ಗ್ರಾಮಾಂತರ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ ಲೈನ್ ಶಿಕ್ಷಣ ಬೇಡವೆಂದು ಮನವಿಗಳ ಮೇಲೆ ಮನವಿಗಳನ್ನು ಸಲ್ಲಿಸಿದವು. ನಮ್ಮ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಕೊಡಲು ಸಾಧ್ಯವಿಲ್ಲ. ನಮ್ಮ ವಿದ್ಯಾರ್ಥಿಗಳು ಮೊಬೈಲ್ ಕೊಳ್ಳುವಷ್ಟು ಶಕ್ತಿ ಇಲ್ಲ. ಹಾಗಾಗಿ ಆನ್ ಲೈನ್ ಶಿಕ್ಷಣ ಕಡಾಖಂಡಿತವಾಗಿ ಬೇಡವೆಂದರು. ಈ ಮನವಿಗಳು ಸಜ್ಜನ ಶಿಕ್ಷಣ ಸಚಿವರ ಕಿವಿಗೆ ಹೋಗಲೇ ಇಲ್ಲ ಅನ್ನಿಸುತ್ತದೆ.
ನಗರ ಪ್ರದೇಶದಲ್ಲಿ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಎಲ್ಲ ಮಕ್ಕಳ ಬಳಿಯೂ ಮೊಬೈಲ್ ಇದೆ ಎಂದು ಭಾವಿಸುವುದೂ ಕೂಡ ತಪ್ಪು. ಯಾಕೆಂದರೆ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಬಂದ ಬಡ ಕುಟುಂಬಗಳು ಮನೆ ಬಾಡಿಗೆ, ಕುಟುಂಬ ನಿರ್ವಹಣೆ ಮಾಡುವುದು ದುಸ್ಥರ. ಬಡ ತಂದೆತಾಯಿಗಳು ತಮ್ಮ ಮಕ್ಕಳನ್ನು ಹಗಲಿರುಳು ದುಡಿದು ಗುಣಮಟ್ಟದ ಶಿಕ್ಷಣ ಕೊಡಿಸುವುದಕ್ಕೆ ಪಡಿಪಾಟಲು ಬೀಳುತ್ತಿರುವುದು ಶಿಕ್ಷಣ ಸಚಿವರಿಗೆ ತಿಳಿದಿಲ್ಲವೇ?

ನಿಮ್ಮ ನಿಲುವುಗಳು ಯಾರ ಪರವಾಗಿವೆ ಎಂಬುದು ಆನ್ ಲೈನ್ ಶಿಕ್ಷಣ ಮುಂದುವರಿಸುವುದರಿಂದಲೇ ಗೊತ್ತಾಗುತ್ತದೆ. ನೇರ ಶಿಕ್ಷಣ ಕೊಡುವಾಗಲೇ ಕಲಿಕೆಯಲ್ಲಿ ಹಿಂದೆ ಬೀಳುವ ಮಕ್ಕಳು ಇರುವಾಗ, ತರಗತಿಯಲ್ಲಿ ಕುಳಿತ ಮಕ್ಕಳೇ ಪಾಠ ಮಾಡುವುದನ್ನು ಗಮನ ಕೊಟ್ಟು ಆಲಿಸದೇ ಇರುವಾಗ ಪದೇ ಪದೇ ಮಕ್ಕಳನ್ನು ಪಾಠದ ಕಡೆ ಗಮನ ಸೆಳಯಲು ಉಪ ಕತೆಗಳನ್ನು ಹೇಳುವುದು ನೇರ ಬೋಧನೆಯಲ್ಲಿ ನಾವು ಕಾಣಬಹುದು. ಆದರೂ ಹಲ ಮಕ್ಕಳ ಮನಸ್ಸು ಮರ್ಕಟನಂತೆ. ಹೀಗಿದ್ದಾಗ ಎಲ್ಲೋ ಕುಳಿತು ಪಾಠ ಮಾಡುವ ಶಿಕ್ಷಕರು ಮಕ್ಕಳ ಮನಸ್ಸನ್ನು ಕೇಂದ್ರೀಕರಿಸುವಂತೆ ಮಾಡಲು ಹೇಗೆ ಸಾಧ್ಯ? ಮನೆಯಲ್ಲಿ ಯಾರ ಅಂಕೆಯೂ ಇಲ್ಲದೆ ಒಂದೆಡೆ ಕೂರದ ಸದಾ ಓಡಾಡುತ್ತಲೇ ಇರುವ ಮಕ್ಕಳನ್ನು ಒಂದೆಡೆ ಕೂರಿಸಿ ಪಾಠ ಕೇಳುವಂತೆ ಮಾಡುವುದು ಕಷ್ಟದ ಕೆಲಸ. ತಂದೆತಾಯಿಗಳ ಭಯಕ್ಕೆ ಮೊಬೈಲ್ ನಲ್ಲಿ ಆನ್ ಲೈನ್ ತರಗತಿಗಳನ್ನು ಕೇಳಿದರೂ ಮಕ್ಕಳು ಪಾಠವನ್ನು ಸರಿಯಾಗಿ ಗ್ರಹಿಸಿದ್ದಾರೆಂಬುದನ್ನು ಹೇಗೆ ಹೇಳಲು ಸಾಧ್ಯ.

ಪೋಷಕರು ಮತ್ತು ವಿದ್ಯಾರ್ಥಿಗಳ ಸಂಕಟವನ್ನು ಅರ್ಥ ಮಾಡಿಕೊಳ್ಳದ ಪ್ರಾಥಮಿಕ ಶಿಕ್ಷಣ ಸಚಿವರು ಯಾರೋ ಪ್ರಚಾರಕ್ಕಾಗಿ ಒಬ್ಬ ತರಕಾರಿ, ಹಣ್ಣು ಮಾರುತ್ತಿದ್ದ ವಿದ್ಯಾರ್ಥಿನಿಗೆ ಮೊಬೈಲ್ ಕೊಡಿಸಿದ್ದಾರೆ. ಅದು ಪತ್ರಿಕೆಯಲ್ಲಿ ಬಂದಿದೆ ಎಂದು ಹೆಮ್ಮೆಯಿಂದ ಹೇಳಿದರೆ ಲಕ್ಷಾಂತರ ತಂದೆತಾಯಿಗಳು ಇನ್ನೂ ಬೇಸಿಕ್ ಸೆಟ್ ಗಳನ್ನು ಇಟ್ಟುಕೊಂಡು 50 ರೂಪಾಯಿ ಕರೆನ್ಸಿ ಹಾಕಿಸಿ ತಿಂಗಳವರೆಗೆ ದಿನದೂಡುತ್ತಿರುವುದು ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ?

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...