Homeಚಳವಳಿಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

ಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

- Advertisement -
- Advertisement -

ಸನ್ಮಾನ್ಯ ಸಜ್ಜನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ,

ನೀವು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಿರಿ. ಆನ್ ಲೈನ್ ಶಿಕ್ಷಣ ಮುಂದುವರಿಸುವುದಾಗಿ ಹೇಳಿದಿರಿ. ಆನ್ ಲೈನ್ ಕುರಿತು ಎರಡು ಭಿನ್ನ ಅಭಿಪ್ರಾಯಗಳು ಇವೆ. ಆನ್ ಲೈನ್ ಮಾಡಬೇಕು-ಮಾಡಬಾರದೆಂಬ ಎರಡೂ ವಾದಗಳು ಇವೆ. ಇದು ಗೊಂದಲಕ್ಕೆ ಕಾರಣ ಎಂದು ಹೇಳಿದಿರಿ. ಆದರೆ ನೀವು ಸ್ಪಷ್ಟನಿರ್ಧಾರಕ್ಕೆ ಬರಲು ಕ್ರಮ ವಹಿಸಿದಂತೆ ಕಾಣುತ್ತಿಲ್ಲ.

ಆನ್ ಲೈನ್ ಶಿಕ್ಷಣ ಮುಂದುವರಿಸುವ ತೀರ್ಮಾನ ಏಕೆ ಮಾಡಿದ್ದೀರಿ ಎಂಬುದೇ ತಿಳಿಯುತ್ತಿಲ್ಲ. ಸಾಮಾಜಿಕ ಅಂತರದಂತೆ ಶಿಕ್ಷಣದ ಅಂತರ, ತಾರತಮ್ಯ ಹೆಚ್ಚುತ್ತದೆ. ಹೀಗೆ ಸೃಷ್ಟಿಯಾಗುವ ಕಂದಕವನ್ನು ಮುಚ್ಚಲು ಕಷ್ಟಸಾಧ್ಯ. ನಗರ ಮತ್ತು ಗ್ರಾಮೀಣ ಭಾಗದ ನಡುವಿನ ವಿದ್ಯಾರ್ಥಿಗಳ ಜ್ಞಾನ ವಿಸ್ತರಣೆಯಲ್ಲಿ ಸಾಕಷ್ಟು ಅಂತರ ಉಂಟಾಗುತ್ತದೆ ಎಂಬ ಬಗ್ಗೆ ನೀವು ಯಾಕೆ ಯೋಚಿಸುತ್ತಿಲ್ಲ?

ಆನ್ ಲೈನ್ ಶಿಕ್ಷಣ ನೀಡುವುದನ್ನು ಮುಂದುವರಿಸಿದರೆ ಎಲ್ಲರ ಬಳಿ ಮೊಬೈಲ್ ಇರಬೇಕು ಅಲ್ಲವೇ? ಈಗ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದ ಮಕ್ಕಳು ಮತ್ತು ಪೋಷಕರ ಬಳಿ ಎಷ್ಟು ಆಂಡ್ರಾಯಿಡ್ ಮೊಬೈಲ್ ಗಳು ಇವೆ? ಎಲ್ಲರೂ ಮೊಬೈಲ್ ಹೊಂದಿದ್ದಾರೆಯೇ? ಈ ಬಗ್ಗೆ ಸರ್ವೇ ನಡೆಸಿದ್ದೀರಾ?

ಗ್ರಾಮೀಣ ಭಾಗದಲ್ಲಿ ಶಾಲೆಗೆ ಮಕ್ಕಳು ಬರುವುದೇ ದುಸ್ಥರ. ಪರಿಸ್ಥಿತಿ ಹೀಗಿದ್ದಾಗ ಆ ಮಕ್ಕಳು ಮತ್ತು ಪೋಷಕರು ಮೊಬೈಲ್ ಗಳನ್ನು ಎಲ್ಲಿಂದ ಖರೀದಿಸಬೇಕು. ನಿಮ್ಮದೇ ಪಕ್ಷದ ಸರ್ಕಾರವೇ ಮಾಡಿದ ಅವೈಜ್ಞಾನಿಕ ನೀತಿಗಳು ಗ್ರಾಮೀಣ ಜನರು ಹಣಕ್ಕೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಥದ್ದರಲ್ಲಿ ತಮ್ಮ ಮಕ್ಕಳಿಗೆ ಕನಿಷ್ಟ ಏಳೆಂಟು ಸಾವಿರ ರೂಪಾಯಿ ಮೌಲ್ಯದ ಅಂಡ್ರಾಯಿಡ್ ಮೊಬೈಲ್ ಕೊಡಿಸುವ ಶಕ್ತಿ ಎಲ್ಲಿಂದ ಬರುತ್ತದೆ. ಹೋಗಲಿ ಕೆಲವರ ಬಳಿ ಮೊಬೈಲ್ ಗಳು ಇವೆ ಎಂದರೂ ಅದಕ್ಕೆ ಡೇಟಾ, ನೆಟ್ ವರ್ಕ್ ಸಿಗಬೇಕು ಅಲ್ಲವೇ? 5ಜಿ ಯತ್ತ ದೇಶ ಮುಖ ಮಾಡಿದ್ದರೂ ಗ್ರಾಮೀಣ ಭಾಗ ಸಿಗ್ನಲ್, ನೆಟ್ ವೆರ್ಕ್ ಸಿಗದೆ ಬಳಲುತ್ತಿದೆ.
ಸಿಗ್ನಲ್ ಅಥವಾ ನೆಟ್ ವರ್ಕ್ ಸಿಗಬೇಕು ಅಂದರೆ ಮರಗಳನ್ನು ಹತ್ತಿ ಕುಳಿತುಕೊಳ್ಳಬೇಕು. ಮಕ್ಕಳು ಆ ಕೆಲಸವನ್ನು ಮಾಡಬಹುದು. ಅಲ್ಲಿ ಅನಾಹುತ ಸಂಭವಿಸಿದರೆ ಜೀವಹಾನಿ ಆಗುತ್ತದೆ. ಅದಕ್ಕೆ ಹೊಣೆ ಯಾರು? ಆನ್ ಲೈನ್ ಶಿಕ್ಷಣ ಬಡ ವಿದ್ಯಾರ್ಥಿಗಳಿಗೆ ಸುಲಭವಾಗಿ ದೊರೆಯುವುದಿಲ್ಲ. ದುಡ್ಡಿದ್ದವರು ದುಭಾರಿ ಬೆಲೆಯ ಮೊಬೈಲ್ ಖರೀದಿ ಮಾಡಿ ಆನ್ ಲೈನ್ ಶಿಕ್ಷಣಕ್ಕೆ ಹೊಂದಿಕೊಳ್ಳಬಹುದು.

ಆನ್ ಲೈನ್ ಶಿಕ್ಷಣ ಅಂದರೆ ಖಾಸಗಿ ಶಾಲೆಗಳು ದುಡ್ಡು ಸುಲಿಯಲು ಹೆಚ್ಚು ಅವಕಾಶ ಮಾಡಿಕೊಡುತ್ತದೆ. ಮನೆ ಪಾಠದ ನೆಪದಲ್ಲಿ ಕ್ಯಾಪಿಟೇಶನ್ ಶುಲ್ಕ ವಸೂಲಿಗೂ ಅವಕಾಶ ಮಾಡಿಕೊಡುವ ಖಾಸಗಿ ಆಡಳಿತ ಮಂಡಳಿಗಳ ಜೊತೆಗೆ ನೀವು ಶಾಮೀಲಾಗಿದ್ದೀರಿ ಎಂಬ ಅನುಮಾನ ಮೂಡುತ್ತದೆ.

ಗ್ರಾಮೀಣ ಭಾಗದಲ್ಲಿರುವ ಖಾಸಗಿ ಮತ್ತು ಸರ್ಕಾರಿ ಪ್ರೌಢಶಿಕ್ಷಣ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಬಡವರೇ ಆಗಿರುತ್ತಾರೆ. ಆ ಮಕ್ಕಳು ಸರ್ಕಾರ ವಿಧಿಸಿರುವ ಶುಲ್ಕ ಕಟ್ಟಲು ಕೂಡ ಕಷ್ಟಪಡುತ್ತಾರೆ. ಇದೇ ಕಾರಣಕ್ಕಾಗಿಯೇ ಗ್ರಾಮಾಂತರ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ ಲೈನ್ ಶಿಕ್ಷಣ ಬೇಡವೆಂದು ಮನವಿಗಳ ಮೇಲೆ ಮನವಿಗಳನ್ನು ಸಲ್ಲಿಸಿದವು. ನಮ್ಮ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಕೊಡಲು ಸಾಧ್ಯವಿಲ್ಲ. ನಮ್ಮ ವಿದ್ಯಾರ್ಥಿಗಳು ಮೊಬೈಲ್ ಕೊಳ್ಳುವಷ್ಟು ಶಕ್ತಿ ಇಲ್ಲ. ಹಾಗಾಗಿ ಆನ್ ಲೈನ್ ಶಿಕ್ಷಣ ಕಡಾಖಂಡಿತವಾಗಿ ಬೇಡವೆಂದರು. ಈ ಮನವಿಗಳು ಸಜ್ಜನ ಶಿಕ್ಷಣ ಸಚಿವರ ಕಿವಿಗೆ ಹೋಗಲೇ ಇಲ್ಲ ಅನ್ನಿಸುತ್ತದೆ.
ನಗರ ಪ್ರದೇಶದಲ್ಲಿ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಎಲ್ಲ ಮಕ್ಕಳ ಬಳಿಯೂ ಮೊಬೈಲ್ ಇದೆ ಎಂದು ಭಾವಿಸುವುದೂ ಕೂಡ ತಪ್ಪು. ಯಾಕೆಂದರೆ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಬಂದ ಬಡ ಕುಟುಂಬಗಳು ಮನೆ ಬಾಡಿಗೆ, ಕುಟುಂಬ ನಿರ್ವಹಣೆ ಮಾಡುವುದು ದುಸ್ಥರ. ಬಡ ತಂದೆತಾಯಿಗಳು ತಮ್ಮ ಮಕ್ಕಳನ್ನು ಹಗಲಿರುಳು ದುಡಿದು ಗುಣಮಟ್ಟದ ಶಿಕ್ಷಣ ಕೊಡಿಸುವುದಕ್ಕೆ ಪಡಿಪಾಟಲು ಬೀಳುತ್ತಿರುವುದು ಶಿಕ್ಷಣ ಸಚಿವರಿಗೆ ತಿಳಿದಿಲ್ಲವೇ?

ನಿಮ್ಮ ನಿಲುವುಗಳು ಯಾರ ಪರವಾಗಿವೆ ಎಂಬುದು ಆನ್ ಲೈನ್ ಶಿಕ್ಷಣ ಮುಂದುವರಿಸುವುದರಿಂದಲೇ ಗೊತ್ತಾಗುತ್ತದೆ. ನೇರ ಶಿಕ್ಷಣ ಕೊಡುವಾಗಲೇ ಕಲಿಕೆಯಲ್ಲಿ ಹಿಂದೆ ಬೀಳುವ ಮಕ್ಕಳು ಇರುವಾಗ, ತರಗತಿಯಲ್ಲಿ ಕುಳಿತ ಮಕ್ಕಳೇ ಪಾಠ ಮಾಡುವುದನ್ನು ಗಮನ ಕೊಟ್ಟು ಆಲಿಸದೇ ಇರುವಾಗ ಪದೇ ಪದೇ ಮಕ್ಕಳನ್ನು ಪಾಠದ ಕಡೆ ಗಮನ ಸೆಳಯಲು ಉಪ ಕತೆಗಳನ್ನು ಹೇಳುವುದು ನೇರ ಬೋಧನೆಯಲ್ಲಿ ನಾವು ಕಾಣಬಹುದು. ಆದರೂ ಹಲ ಮಕ್ಕಳ ಮನಸ್ಸು ಮರ್ಕಟನಂತೆ. ಹೀಗಿದ್ದಾಗ ಎಲ್ಲೋ ಕುಳಿತು ಪಾಠ ಮಾಡುವ ಶಿಕ್ಷಕರು ಮಕ್ಕಳ ಮನಸ್ಸನ್ನು ಕೇಂದ್ರೀಕರಿಸುವಂತೆ ಮಾಡಲು ಹೇಗೆ ಸಾಧ್ಯ? ಮನೆಯಲ್ಲಿ ಯಾರ ಅಂಕೆಯೂ ಇಲ್ಲದೆ ಒಂದೆಡೆ ಕೂರದ ಸದಾ ಓಡಾಡುತ್ತಲೇ ಇರುವ ಮಕ್ಕಳನ್ನು ಒಂದೆಡೆ ಕೂರಿಸಿ ಪಾಠ ಕೇಳುವಂತೆ ಮಾಡುವುದು ಕಷ್ಟದ ಕೆಲಸ. ತಂದೆತಾಯಿಗಳ ಭಯಕ್ಕೆ ಮೊಬೈಲ್ ನಲ್ಲಿ ಆನ್ ಲೈನ್ ತರಗತಿಗಳನ್ನು ಕೇಳಿದರೂ ಮಕ್ಕಳು ಪಾಠವನ್ನು ಸರಿಯಾಗಿ ಗ್ರಹಿಸಿದ್ದಾರೆಂಬುದನ್ನು ಹೇಗೆ ಹೇಳಲು ಸಾಧ್ಯ.

ಪೋಷಕರು ಮತ್ತು ವಿದ್ಯಾರ್ಥಿಗಳ ಸಂಕಟವನ್ನು ಅರ್ಥ ಮಾಡಿಕೊಳ್ಳದ ಪ್ರಾಥಮಿಕ ಶಿಕ್ಷಣ ಸಚಿವರು ಯಾರೋ ಪ್ರಚಾರಕ್ಕಾಗಿ ಒಬ್ಬ ತರಕಾರಿ, ಹಣ್ಣು ಮಾರುತ್ತಿದ್ದ ವಿದ್ಯಾರ್ಥಿನಿಗೆ ಮೊಬೈಲ್ ಕೊಡಿಸಿದ್ದಾರೆ. ಅದು ಪತ್ರಿಕೆಯಲ್ಲಿ ಬಂದಿದೆ ಎಂದು ಹೆಮ್ಮೆಯಿಂದ ಹೇಳಿದರೆ ಲಕ್ಷಾಂತರ ತಂದೆತಾಯಿಗಳು ಇನ್ನೂ ಬೇಸಿಕ್ ಸೆಟ್ ಗಳನ್ನು ಇಟ್ಟುಕೊಂಡು 50 ರೂಪಾಯಿ ಕರೆನ್ಸಿ ಹಾಕಿಸಿ ತಿಂಗಳವರೆಗೆ ದಿನದೂಡುತ್ತಿರುವುದು ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ?

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...