Homeಚಳವಳಿಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

ಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

- Advertisement -
- Advertisement -

ಸನ್ಮಾನ್ಯ ಸಜ್ಜನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ,

ನೀವು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಿರಿ. ಆನ್ ಲೈನ್ ಶಿಕ್ಷಣ ಮುಂದುವರಿಸುವುದಾಗಿ ಹೇಳಿದಿರಿ. ಆನ್ ಲೈನ್ ಕುರಿತು ಎರಡು ಭಿನ್ನ ಅಭಿಪ್ರಾಯಗಳು ಇವೆ. ಆನ್ ಲೈನ್ ಮಾಡಬೇಕು-ಮಾಡಬಾರದೆಂಬ ಎರಡೂ ವಾದಗಳು ಇವೆ. ಇದು ಗೊಂದಲಕ್ಕೆ ಕಾರಣ ಎಂದು ಹೇಳಿದಿರಿ. ಆದರೆ ನೀವು ಸ್ಪಷ್ಟನಿರ್ಧಾರಕ್ಕೆ ಬರಲು ಕ್ರಮ ವಹಿಸಿದಂತೆ ಕಾಣುತ್ತಿಲ್ಲ.

ಆನ್ ಲೈನ್ ಶಿಕ್ಷಣ ಮುಂದುವರಿಸುವ ತೀರ್ಮಾನ ಏಕೆ ಮಾಡಿದ್ದೀರಿ ಎಂಬುದೇ ತಿಳಿಯುತ್ತಿಲ್ಲ. ಸಾಮಾಜಿಕ ಅಂತರದಂತೆ ಶಿಕ್ಷಣದ ಅಂತರ, ತಾರತಮ್ಯ ಹೆಚ್ಚುತ್ತದೆ. ಹೀಗೆ ಸೃಷ್ಟಿಯಾಗುವ ಕಂದಕವನ್ನು ಮುಚ್ಚಲು ಕಷ್ಟಸಾಧ್ಯ. ನಗರ ಮತ್ತು ಗ್ರಾಮೀಣ ಭಾಗದ ನಡುವಿನ ವಿದ್ಯಾರ್ಥಿಗಳ ಜ್ಞಾನ ವಿಸ್ತರಣೆಯಲ್ಲಿ ಸಾಕಷ್ಟು ಅಂತರ ಉಂಟಾಗುತ್ತದೆ ಎಂಬ ಬಗ್ಗೆ ನೀವು ಯಾಕೆ ಯೋಚಿಸುತ್ತಿಲ್ಲ?

ಆನ್ ಲೈನ್ ಶಿಕ್ಷಣ ನೀಡುವುದನ್ನು ಮುಂದುವರಿಸಿದರೆ ಎಲ್ಲರ ಬಳಿ ಮೊಬೈಲ್ ಇರಬೇಕು ಅಲ್ಲವೇ? ಈಗ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದ ಮಕ್ಕಳು ಮತ್ತು ಪೋಷಕರ ಬಳಿ ಎಷ್ಟು ಆಂಡ್ರಾಯಿಡ್ ಮೊಬೈಲ್ ಗಳು ಇವೆ? ಎಲ್ಲರೂ ಮೊಬೈಲ್ ಹೊಂದಿದ್ದಾರೆಯೇ? ಈ ಬಗ್ಗೆ ಸರ್ವೇ ನಡೆಸಿದ್ದೀರಾ?

ಗ್ರಾಮೀಣ ಭಾಗದಲ್ಲಿ ಶಾಲೆಗೆ ಮಕ್ಕಳು ಬರುವುದೇ ದುಸ್ಥರ. ಪರಿಸ್ಥಿತಿ ಹೀಗಿದ್ದಾಗ ಆ ಮಕ್ಕಳು ಮತ್ತು ಪೋಷಕರು ಮೊಬೈಲ್ ಗಳನ್ನು ಎಲ್ಲಿಂದ ಖರೀದಿಸಬೇಕು. ನಿಮ್ಮದೇ ಪಕ್ಷದ ಸರ್ಕಾರವೇ ಮಾಡಿದ ಅವೈಜ್ಞಾನಿಕ ನೀತಿಗಳು ಗ್ರಾಮೀಣ ಜನರು ಹಣಕ್ಕೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಥದ್ದರಲ್ಲಿ ತಮ್ಮ ಮಕ್ಕಳಿಗೆ ಕನಿಷ್ಟ ಏಳೆಂಟು ಸಾವಿರ ರೂಪಾಯಿ ಮೌಲ್ಯದ ಅಂಡ್ರಾಯಿಡ್ ಮೊಬೈಲ್ ಕೊಡಿಸುವ ಶಕ್ತಿ ಎಲ್ಲಿಂದ ಬರುತ್ತದೆ. ಹೋಗಲಿ ಕೆಲವರ ಬಳಿ ಮೊಬೈಲ್ ಗಳು ಇವೆ ಎಂದರೂ ಅದಕ್ಕೆ ಡೇಟಾ, ನೆಟ್ ವರ್ಕ್ ಸಿಗಬೇಕು ಅಲ್ಲವೇ? 5ಜಿ ಯತ್ತ ದೇಶ ಮುಖ ಮಾಡಿದ್ದರೂ ಗ್ರಾಮೀಣ ಭಾಗ ಸಿಗ್ನಲ್, ನೆಟ್ ವೆರ್ಕ್ ಸಿಗದೆ ಬಳಲುತ್ತಿದೆ.
ಸಿಗ್ನಲ್ ಅಥವಾ ನೆಟ್ ವರ್ಕ್ ಸಿಗಬೇಕು ಅಂದರೆ ಮರಗಳನ್ನು ಹತ್ತಿ ಕುಳಿತುಕೊಳ್ಳಬೇಕು. ಮಕ್ಕಳು ಆ ಕೆಲಸವನ್ನು ಮಾಡಬಹುದು. ಅಲ್ಲಿ ಅನಾಹುತ ಸಂಭವಿಸಿದರೆ ಜೀವಹಾನಿ ಆಗುತ್ತದೆ. ಅದಕ್ಕೆ ಹೊಣೆ ಯಾರು? ಆನ್ ಲೈನ್ ಶಿಕ್ಷಣ ಬಡ ವಿದ್ಯಾರ್ಥಿಗಳಿಗೆ ಸುಲಭವಾಗಿ ದೊರೆಯುವುದಿಲ್ಲ. ದುಡ್ಡಿದ್ದವರು ದುಭಾರಿ ಬೆಲೆಯ ಮೊಬೈಲ್ ಖರೀದಿ ಮಾಡಿ ಆನ್ ಲೈನ್ ಶಿಕ್ಷಣಕ್ಕೆ ಹೊಂದಿಕೊಳ್ಳಬಹುದು.

ಆನ್ ಲೈನ್ ಶಿಕ್ಷಣ ಅಂದರೆ ಖಾಸಗಿ ಶಾಲೆಗಳು ದುಡ್ಡು ಸುಲಿಯಲು ಹೆಚ್ಚು ಅವಕಾಶ ಮಾಡಿಕೊಡುತ್ತದೆ. ಮನೆ ಪಾಠದ ನೆಪದಲ್ಲಿ ಕ್ಯಾಪಿಟೇಶನ್ ಶುಲ್ಕ ವಸೂಲಿಗೂ ಅವಕಾಶ ಮಾಡಿಕೊಡುವ ಖಾಸಗಿ ಆಡಳಿತ ಮಂಡಳಿಗಳ ಜೊತೆಗೆ ನೀವು ಶಾಮೀಲಾಗಿದ್ದೀರಿ ಎಂಬ ಅನುಮಾನ ಮೂಡುತ್ತದೆ.

ಗ್ರಾಮೀಣ ಭಾಗದಲ್ಲಿರುವ ಖಾಸಗಿ ಮತ್ತು ಸರ್ಕಾರಿ ಪ್ರೌಢಶಿಕ್ಷಣ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಬಡವರೇ ಆಗಿರುತ್ತಾರೆ. ಆ ಮಕ್ಕಳು ಸರ್ಕಾರ ವಿಧಿಸಿರುವ ಶುಲ್ಕ ಕಟ್ಟಲು ಕೂಡ ಕಷ್ಟಪಡುತ್ತಾರೆ. ಇದೇ ಕಾರಣಕ್ಕಾಗಿಯೇ ಗ್ರಾಮಾಂತರ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ ಲೈನ್ ಶಿಕ್ಷಣ ಬೇಡವೆಂದು ಮನವಿಗಳ ಮೇಲೆ ಮನವಿಗಳನ್ನು ಸಲ್ಲಿಸಿದವು. ನಮ್ಮ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಕೊಡಲು ಸಾಧ್ಯವಿಲ್ಲ. ನಮ್ಮ ವಿದ್ಯಾರ್ಥಿಗಳು ಮೊಬೈಲ್ ಕೊಳ್ಳುವಷ್ಟು ಶಕ್ತಿ ಇಲ್ಲ. ಹಾಗಾಗಿ ಆನ್ ಲೈನ್ ಶಿಕ್ಷಣ ಕಡಾಖಂಡಿತವಾಗಿ ಬೇಡವೆಂದರು. ಈ ಮನವಿಗಳು ಸಜ್ಜನ ಶಿಕ್ಷಣ ಸಚಿವರ ಕಿವಿಗೆ ಹೋಗಲೇ ಇಲ್ಲ ಅನ್ನಿಸುತ್ತದೆ.
ನಗರ ಪ್ರದೇಶದಲ್ಲಿ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಎಲ್ಲ ಮಕ್ಕಳ ಬಳಿಯೂ ಮೊಬೈಲ್ ಇದೆ ಎಂದು ಭಾವಿಸುವುದೂ ಕೂಡ ತಪ್ಪು. ಯಾಕೆಂದರೆ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಬಂದ ಬಡ ಕುಟುಂಬಗಳು ಮನೆ ಬಾಡಿಗೆ, ಕುಟುಂಬ ನಿರ್ವಹಣೆ ಮಾಡುವುದು ದುಸ್ಥರ. ಬಡ ತಂದೆತಾಯಿಗಳು ತಮ್ಮ ಮಕ್ಕಳನ್ನು ಹಗಲಿರುಳು ದುಡಿದು ಗುಣಮಟ್ಟದ ಶಿಕ್ಷಣ ಕೊಡಿಸುವುದಕ್ಕೆ ಪಡಿಪಾಟಲು ಬೀಳುತ್ತಿರುವುದು ಶಿಕ್ಷಣ ಸಚಿವರಿಗೆ ತಿಳಿದಿಲ್ಲವೇ?

ನಿಮ್ಮ ನಿಲುವುಗಳು ಯಾರ ಪರವಾಗಿವೆ ಎಂಬುದು ಆನ್ ಲೈನ್ ಶಿಕ್ಷಣ ಮುಂದುವರಿಸುವುದರಿಂದಲೇ ಗೊತ್ತಾಗುತ್ತದೆ. ನೇರ ಶಿಕ್ಷಣ ಕೊಡುವಾಗಲೇ ಕಲಿಕೆಯಲ್ಲಿ ಹಿಂದೆ ಬೀಳುವ ಮಕ್ಕಳು ಇರುವಾಗ, ತರಗತಿಯಲ್ಲಿ ಕುಳಿತ ಮಕ್ಕಳೇ ಪಾಠ ಮಾಡುವುದನ್ನು ಗಮನ ಕೊಟ್ಟು ಆಲಿಸದೇ ಇರುವಾಗ ಪದೇ ಪದೇ ಮಕ್ಕಳನ್ನು ಪಾಠದ ಕಡೆ ಗಮನ ಸೆಳಯಲು ಉಪ ಕತೆಗಳನ್ನು ಹೇಳುವುದು ನೇರ ಬೋಧನೆಯಲ್ಲಿ ನಾವು ಕಾಣಬಹುದು. ಆದರೂ ಹಲ ಮಕ್ಕಳ ಮನಸ್ಸು ಮರ್ಕಟನಂತೆ. ಹೀಗಿದ್ದಾಗ ಎಲ್ಲೋ ಕುಳಿತು ಪಾಠ ಮಾಡುವ ಶಿಕ್ಷಕರು ಮಕ್ಕಳ ಮನಸ್ಸನ್ನು ಕೇಂದ್ರೀಕರಿಸುವಂತೆ ಮಾಡಲು ಹೇಗೆ ಸಾಧ್ಯ? ಮನೆಯಲ್ಲಿ ಯಾರ ಅಂಕೆಯೂ ಇಲ್ಲದೆ ಒಂದೆಡೆ ಕೂರದ ಸದಾ ಓಡಾಡುತ್ತಲೇ ಇರುವ ಮಕ್ಕಳನ್ನು ಒಂದೆಡೆ ಕೂರಿಸಿ ಪಾಠ ಕೇಳುವಂತೆ ಮಾಡುವುದು ಕಷ್ಟದ ಕೆಲಸ. ತಂದೆತಾಯಿಗಳ ಭಯಕ್ಕೆ ಮೊಬೈಲ್ ನಲ್ಲಿ ಆನ್ ಲೈನ್ ತರಗತಿಗಳನ್ನು ಕೇಳಿದರೂ ಮಕ್ಕಳು ಪಾಠವನ್ನು ಸರಿಯಾಗಿ ಗ್ರಹಿಸಿದ್ದಾರೆಂಬುದನ್ನು ಹೇಗೆ ಹೇಳಲು ಸಾಧ್ಯ.

ಪೋಷಕರು ಮತ್ತು ವಿದ್ಯಾರ್ಥಿಗಳ ಸಂಕಟವನ್ನು ಅರ್ಥ ಮಾಡಿಕೊಳ್ಳದ ಪ್ರಾಥಮಿಕ ಶಿಕ್ಷಣ ಸಚಿವರು ಯಾರೋ ಪ್ರಚಾರಕ್ಕಾಗಿ ಒಬ್ಬ ತರಕಾರಿ, ಹಣ್ಣು ಮಾರುತ್ತಿದ್ದ ವಿದ್ಯಾರ್ಥಿನಿಗೆ ಮೊಬೈಲ್ ಕೊಡಿಸಿದ್ದಾರೆ. ಅದು ಪತ್ರಿಕೆಯಲ್ಲಿ ಬಂದಿದೆ ಎಂದು ಹೆಮ್ಮೆಯಿಂದ ಹೇಳಿದರೆ ಲಕ್ಷಾಂತರ ತಂದೆತಾಯಿಗಳು ಇನ್ನೂ ಬೇಸಿಕ್ ಸೆಟ್ ಗಳನ್ನು ಇಟ್ಟುಕೊಂಡು 50 ರೂಪಾಯಿ ಕರೆನ್ಸಿ ಹಾಕಿಸಿ ತಿಂಗಳವರೆಗೆ ದಿನದೂಡುತ್ತಿರುವುದು ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ?

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...