Homeಕರ್ನಾಟಕಆನ್‌ಲೈನ್‌‌ ಜೂಜಾಟ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ತರಾಟೆ

ಆನ್‌ಲೈನ್‌‌ ಜೂಜಾಟ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ತರಾಟೆ

- Advertisement -
- Advertisement -

ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ. ಆನ್‌ಲೈನ್ ಬೆಟ್ಟಿಂಗ್ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತನ್ನ ನಿಲುವನ್ನು ದಾಖಲಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ 2020 ರ ನವೆಂಬರ್ 30 ರಂದು ನೋಟಿಸ್ ನೀಡಲಾಗಿದ್ದು, ಆರು ವಾರಗಳಲ್ಲಿ ಹೇಳಿಕೆ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿತ್ತು. 2021 ರ ಏಪ್ರಿಲ್ ಎರಡನೇ ವಾರದವರೆಗೆ ಕೊರೊನಾ ಎರಡನೇ ಅಲೆಯ ವಿನಾಯಿತಿಯು ರಾಜ್ಯಕ್ಕೆ ಸಂಬಂಧಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಆನ್‌ಲೈನ್ ರಮ್ಮಿ ಗೇಮಿಂಗ್ ನಿಷೇಧಿಸಿ ಸುಗ್ರಿವಾಜ್ಞೆ ಹೊರಡಿಸಿದ ತಮಿಳುನಾಡು ಸರ್ಕಾರ!

ಜನವರಿ 12, 2021 ರಂದು ಕರ್ನಾಟಕ ರಾಜ್ಯ ಸರ್ಕಾರವು ಮೂರು ವಾರಗಳಲ್ಲಿ ಆಕ್ಷೇಪಣೆಗಳ ಹೇಳಿಕೆ ನೀಡಲಾಗುವುದು ಎಂದು ಹೈಕೋರ್ಟ್‌ಗೆ ಭರವಸೆ ನೀಡಿತ್ತು. ಆದಾಗ್ಯೂ ರಾಜ್ಯ ಸರ್ಕಾರ ಇದನ್ನು ಅನುಸರಿಸಲಿಲ್ಲ.

ಆನ್‌ಲೈನ್‌ ಜೂಜಾಟದ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಕ್ಯಾಬಿನೆಟ್ ನಿರ್ಧಾರವನ್ನು ಮಂಡಿಸಿಲ್ಲ, ಜೊತೆಗೆ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸಲಿಲ್ಲ ಎಂದು ನ್ಯಾಯಪೀಠ ಟೀಕಿಸಿದೆ.ನ್ಯಾಯಾಲಯಕ್ಕೆ ನೀಡಿದ ಆಶ್ವಾಸನೆ ಮತ್ತು ಕಾಲಕಾಲಕ್ಕೆ ಹೊರಡಿಸಿದ ನಿರ್ದೇಶನಗಳನ್ನು ಪಾಲಿಸಲು ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಆನ್‌ಲೈನ್ ಜೂಜಾಟ ನಿಷೇಧಿಸುವ ಬಗ್ಗೆ ನ್ಯಾಯಾಲಯಕ್ಕೆ ನೀಡಿದ ಆಶ್ವಾಸನೆಗಳನ್ನು ಯಾಕೆ ಪಾಲಿಸಲಿಲ್ಲ ಎಂಬುದಕ್ಕೆ ರಾಜ್ಯ ಸರ್ಕಾರ ಕಾರಣಗಳನ್ನು ನೀಡುವ ನಿರೀಕ್ಷೆಯಿದೆ. ಅಫಿಡವಿಟ್ ಕ್ರಮ ತೆಗೆದುಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಲೈವ್ ಲಾ ವರದಿ ತಿಳಿಸಿದೆ.

ಇದನ್ನೂ ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ಎಲ್ಲಾ ಆನ್‌ಲೈನ್ ಜೂಜಾಟವನ್ನು ನಿಷೇಧಿಸುವಂತೆ ಕಾನೂನು ಕೋರಿ ಶರದಾ ಡಿ.ಆರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಸಾಂಕ್ರಾಮಿಕ ರೋಗದ ಮಧ್ಯೆ ಸಮಾಜದ ಅಸಹಾಯಕ ವರ್ಗ ಮತ್ತು ವಿಶೇಷವಾಗಿ ಯುವಕರು ಆನ್‌ಲೈನ್ ಜೂಜಾಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕೇರಳ ಸರ್ಕಾರ ಇತ್ತೀಚೆಗೆ ಆನ್‌ಲೈನ್ ಜೂಜಾಟವನ್ನು ಕಾನೂನು ಬಾಹಿರಗೊಳಿಸಿದೆ. ಮದ್ರಾಸ್ ಹೈಕೋರ್ಟ್ ಕೂಡ ಇತ್ತೀಚೆಗೆ ಇದೇ ರೀತಿಯ ಆದೇಶ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಗುಜರಾತ್ ಹೈಕೋರ್ಟ್ ಕೂಡ ಇದೇ ರೀತಿಯ ಆದೇಶವನ್ನು ನೀಡಿದೆ.

ಆನ್‌ಲೈನ್ ಜೂಜಾಟದ ವಿರುದ್ಧ ದಾಖಲಾಗುವ ಯಾವುದೇ ಅರ್ಜಿಯನ್ನು ಪ್ರಾತಿನಿಧ್ಯವೆಂದು ಪರಿಗಣಿಸುವಂತೆ ದೆಹಲಿ ಹೈಕೋರ್ಟ್ ಭಾರತ ಮತ್ತು ದೆಹಲಿ ಸರ್ಕಾರಕ್ಕೆ ಆದೇಶಿಸಿತ್ತು.

ಇದನ್ನೂ ಓದಿ: ವಿಲಕ್ಷಣ ಘಟನೆ: ಹೆಂಡತಿಯನ್ನೇ ಪಣಕ್ಕಿಟ್ಟು ಜೂಜು – ಆಸಿಡ್ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...