Homeಕರ್ನಾಟಕಆನ್‌ಲೈನ್‌‌ ಜೂಜಾಟ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ತರಾಟೆ

ಆನ್‌ಲೈನ್‌‌ ಜೂಜಾಟ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ತರಾಟೆ

- Advertisement -
- Advertisement -

ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ. ಆನ್‌ಲೈನ್ ಬೆಟ್ಟಿಂಗ್ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತನ್ನ ನಿಲುವನ್ನು ದಾಖಲಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ 2020 ರ ನವೆಂಬರ್ 30 ರಂದು ನೋಟಿಸ್ ನೀಡಲಾಗಿದ್ದು, ಆರು ವಾರಗಳಲ್ಲಿ ಹೇಳಿಕೆ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿತ್ತು. 2021 ರ ಏಪ್ರಿಲ್ ಎರಡನೇ ವಾರದವರೆಗೆ ಕೊರೊನಾ ಎರಡನೇ ಅಲೆಯ ವಿನಾಯಿತಿಯು ರಾಜ್ಯಕ್ಕೆ ಸಂಬಂಧಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಆನ್‌ಲೈನ್ ರಮ್ಮಿ ಗೇಮಿಂಗ್ ನಿಷೇಧಿಸಿ ಸುಗ್ರಿವಾಜ್ಞೆ ಹೊರಡಿಸಿದ ತಮಿಳುನಾಡು ಸರ್ಕಾರ!

ಜನವರಿ 12, 2021 ರಂದು ಕರ್ನಾಟಕ ರಾಜ್ಯ ಸರ್ಕಾರವು ಮೂರು ವಾರಗಳಲ್ಲಿ ಆಕ್ಷೇಪಣೆಗಳ ಹೇಳಿಕೆ ನೀಡಲಾಗುವುದು ಎಂದು ಹೈಕೋರ್ಟ್‌ಗೆ ಭರವಸೆ ನೀಡಿತ್ತು. ಆದಾಗ್ಯೂ ರಾಜ್ಯ ಸರ್ಕಾರ ಇದನ್ನು ಅನುಸರಿಸಲಿಲ್ಲ.

ಆನ್‌ಲೈನ್‌ ಜೂಜಾಟದ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಕ್ಯಾಬಿನೆಟ್ ನಿರ್ಧಾರವನ್ನು ಮಂಡಿಸಿಲ್ಲ, ಜೊತೆಗೆ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸಲಿಲ್ಲ ಎಂದು ನ್ಯಾಯಪೀಠ ಟೀಕಿಸಿದೆ.ನ್ಯಾಯಾಲಯಕ್ಕೆ ನೀಡಿದ ಆಶ್ವಾಸನೆ ಮತ್ತು ಕಾಲಕಾಲಕ್ಕೆ ಹೊರಡಿಸಿದ ನಿರ್ದೇಶನಗಳನ್ನು ಪಾಲಿಸಲು ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಆನ್‌ಲೈನ್ ಜೂಜಾಟ ನಿಷೇಧಿಸುವ ಬಗ್ಗೆ ನ್ಯಾಯಾಲಯಕ್ಕೆ ನೀಡಿದ ಆಶ್ವಾಸನೆಗಳನ್ನು ಯಾಕೆ ಪಾಲಿಸಲಿಲ್ಲ ಎಂಬುದಕ್ಕೆ ರಾಜ್ಯ ಸರ್ಕಾರ ಕಾರಣಗಳನ್ನು ನೀಡುವ ನಿರೀಕ್ಷೆಯಿದೆ. ಅಫಿಡವಿಟ್ ಕ್ರಮ ತೆಗೆದುಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಲೈವ್ ಲಾ ವರದಿ ತಿಳಿಸಿದೆ.

ಇದನ್ನೂ ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ಎಲ್ಲಾ ಆನ್‌ಲೈನ್ ಜೂಜಾಟವನ್ನು ನಿಷೇಧಿಸುವಂತೆ ಕಾನೂನು ಕೋರಿ ಶರದಾ ಡಿ.ಆರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಸಾಂಕ್ರಾಮಿಕ ರೋಗದ ಮಧ್ಯೆ ಸಮಾಜದ ಅಸಹಾಯಕ ವರ್ಗ ಮತ್ತು ವಿಶೇಷವಾಗಿ ಯುವಕರು ಆನ್‌ಲೈನ್ ಜೂಜಾಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕೇರಳ ಸರ್ಕಾರ ಇತ್ತೀಚೆಗೆ ಆನ್‌ಲೈನ್ ಜೂಜಾಟವನ್ನು ಕಾನೂನು ಬಾಹಿರಗೊಳಿಸಿದೆ. ಮದ್ರಾಸ್ ಹೈಕೋರ್ಟ್ ಕೂಡ ಇತ್ತೀಚೆಗೆ ಇದೇ ರೀತಿಯ ಆದೇಶ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಗುಜರಾತ್ ಹೈಕೋರ್ಟ್ ಕೂಡ ಇದೇ ರೀತಿಯ ಆದೇಶವನ್ನು ನೀಡಿದೆ.

ಆನ್‌ಲೈನ್ ಜೂಜಾಟದ ವಿರುದ್ಧ ದಾಖಲಾಗುವ ಯಾವುದೇ ಅರ್ಜಿಯನ್ನು ಪ್ರಾತಿನಿಧ್ಯವೆಂದು ಪರಿಗಣಿಸುವಂತೆ ದೆಹಲಿ ಹೈಕೋರ್ಟ್ ಭಾರತ ಮತ್ತು ದೆಹಲಿ ಸರ್ಕಾರಕ್ಕೆ ಆದೇಶಿಸಿತ್ತು.

ಇದನ್ನೂ ಓದಿ: ವಿಲಕ್ಷಣ ಘಟನೆ: ಹೆಂಡತಿಯನ್ನೇ ಪಣಕ್ಕಿಟ್ಟು ಜೂಜು – ಆಸಿಡ್ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...