Homeಕರ್ನಾಟಕಆನ್‌ಲೈನ್‌‌ ಜೂಜಾಟ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ತರಾಟೆ

ಆನ್‌ಲೈನ್‌‌ ಜೂಜಾಟ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ತರಾಟೆ

- Advertisement -
- Advertisement -

ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ. ಆನ್‌ಲೈನ್ ಬೆಟ್ಟಿಂಗ್ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತನ್ನ ನಿಲುವನ್ನು ದಾಖಲಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ 2020 ರ ನವೆಂಬರ್ 30 ರಂದು ನೋಟಿಸ್ ನೀಡಲಾಗಿದ್ದು, ಆರು ವಾರಗಳಲ್ಲಿ ಹೇಳಿಕೆ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿತ್ತು. 2021 ರ ಏಪ್ರಿಲ್ ಎರಡನೇ ವಾರದವರೆಗೆ ಕೊರೊನಾ ಎರಡನೇ ಅಲೆಯ ವಿನಾಯಿತಿಯು ರಾಜ್ಯಕ್ಕೆ ಸಂಬಂಧಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಆನ್‌ಲೈನ್ ರಮ್ಮಿ ಗೇಮಿಂಗ್ ನಿಷೇಧಿಸಿ ಸುಗ್ರಿವಾಜ್ಞೆ ಹೊರಡಿಸಿದ ತಮಿಳುನಾಡು ಸರ್ಕಾರ!

ಜನವರಿ 12, 2021 ರಂದು ಕರ್ನಾಟಕ ರಾಜ್ಯ ಸರ್ಕಾರವು ಮೂರು ವಾರಗಳಲ್ಲಿ ಆಕ್ಷೇಪಣೆಗಳ ಹೇಳಿಕೆ ನೀಡಲಾಗುವುದು ಎಂದು ಹೈಕೋರ್ಟ್‌ಗೆ ಭರವಸೆ ನೀಡಿತ್ತು. ಆದಾಗ್ಯೂ ರಾಜ್ಯ ಸರ್ಕಾರ ಇದನ್ನು ಅನುಸರಿಸಲಿಲ್ಲ.

ಆನ್‌ಲೈನ್‌ ಜೂಜಾಟದ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಕ್ಯಾಬಿನೆಟ್ ನಿರ್ಧಾರವನ್ನು ಮಂಡಿಸಿಲ್ಲ, ಜೊತೆಗೆ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸಲಿಲ್ಲ ಎಂದು ನ್ಯಾಯಪೀಠ ಟೀಕಿಸಿದೆ.ನ್ಯಾಯಾಲಯಕ್ಕೆ ನೀಡಿದ ಆಶ್ವಾಸನೆ ಮತ್ತು ಕಾಲಕಾಲಕ್ಕೆ ಹೊರಡಿಸಿದ ನಿರ್ದೇಶನಗಳನ್ನು ಪಾಲಿಸಲು ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಆನ್‌ಲೈನ್ ಜೂಜಾಟ ನಿಷೇಧಿಸುವ ಬಗ್ಗೆ ನ್ಯಾಯಾಲಯಕ್ಕೆ ನೀಡಿದ ಆಶ್ವಾಸನೆಗಳನ್ನು ಯಾಕೆ ಪಾಲಿಸಲಿಲ್ಲ ಎಂಬುದಕ್ಕೆ ರಾಜ್ಯ ಸರ್ಕಾರ ಕಾರಣಗಳನ್ನು ನೀಡುವ ನಿರೀಕ್ಷೆಯಿದೆ. ಅಫಿಡವಿಟ್ ಕ್ರಮ ತೆಗೆದುಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಲೈವ್ ಲಾ ವರದಿ ತಿಳಿಸಿದೆ.

ಇದನ್ನೂ ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ಎಲ್ಲಾ ಆನ್‌ಲೈನ್ ಜೂಜಾಟವನ್ನು ನಿಷೇಧಿಸುವಂತೆ ಕಾನೂನು ಕೋರಿ ಶರದಾ ಡಿ.ಆರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಸಾಂಕ್ರಾಮಿಕ ರೋಗದ ಮಧ್ಯೆ ಸಮಾಜದ ಅಸಹಾಯಕ ವರ್ಗ ಮತ್ತು ವಿಶೇಷವಾಗಿ ಯುವಕರು ಆನ್‌ಲೈನ್ ಜೂಜಾಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕೇರಳ ಸರ್ಕಾರ ಇತ್ತೀಚೆಗೆ ಆನ್‌ಲೈನ್ ಜೂಜಾಟವನ್ನು ಕಾನೂನು ಬಾಹಿರಗೊಳಿಸಿದೆ. ಮದ್ರಾಸ್ ಹೈಕೋರ್ಟ್ ಕೂಡ ಇತ್ತೀಚೆಗೆ ಇದೇ ರೀತಿಯ ಆದೇಶ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಗುಜರಾತ್ ಹೈಕೋರ್ಟ್ ಕೂಡ ಇದೇ ರೀತಿಯ ಆದೇಶವನ್ನು ನೀಡಿದೆ.

ಆನ್‌ಲೈನ್ ಜೂಜಾಟದ ವಿರುದ್ಧ ದಾಖಲಾಗುವ ಯಾವುದೇ ಅರ್ಜಿಯನ್ನು ಪ್ರಾತಿನಿಧ್ಯವೆಂದು ಪರಿಗಣಿಸುವಂತೆ ದೆಹಲಿ ಹೈಕೋರ್ಟ್ ಭಾರತ ಮತ್ತು ದೆಹಲಿ ಸರ್ಕಾರಕ್ಕೆ ಆದೇಶಿಸಿತ್ತು.

ಇದನ್ನೂ ಓದಿ: ವಿಲಕ್ಷಣ ಘಟನೆ: ಹೆಂಡತಿಯನ್ನೇ ಪಣಕ್ಕಿಟ್ಟು ಜೂಜು – ಆಸಿಡ್ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...