Homeಮುಖಪುಟರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ...

ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

- Advertisement -
- Advertisement -

ಭಾರತೀಯ ರೈಲ್ವೇ ಕ್ಷೇತ್ರವನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರದ ಈ ಪ್ರಕ್ರಿಯೆಯ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇದಕ್ಕೆ ಸಮ್ಮತಿಯಿರುವವರು ತಮ್ಮ ಹೆಸರು ಮತ್ತು ಸಂಪರ್ಕ ಸಂಖ್ಯೆಯನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ದೇಶದ ಪ್ರಮುಖ ಸಾರ್ವಜನಿಕ ಸಾರಿಗೆ ಒಡೆತನವಾದ ಭಾರತೀಯ ರೈಲ್ವೆಯಲ್ಲಿ ಖಾಸಗಿ ಹೂಡಿಕೆಗೆ ಕೇಂದ್ರ ಸರ್ಕಾರ ಅವಕಾಶ ನೀಡಿರುವ ನಿರ್ಧಾರವು ಅತ್ಯಂತ ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿಯಾದದ್ದು. ಜನಸಾಮಾನ್ಯರ ತೆರಿಗೆ ಮೊತ್ತ ಹಾಗೂ ರೈಲ್ವೆ ಕಾರ್ಮಿಕರು ಸುರಿಸಿದ ರಕ್ತ ಮತ್ತು ಬೆವರಿನ ಶ್ರಮದಿಂದ ಸ್ಥಾಪಿತವಾದ ಮತ್ತು ಅಭಿವೃದ್ಧಿಗೊಂಡ ಭಾರತಿಯ ರೈಲ್ವೆಗೆ ಸೇರಿದ ರೈಲ್ವೆ ಮಾರ್ಗಗಳನ್ನು, ನಿಲ್ದಾಣಗಳನ್ನು, ರೈಲ್ವೆ ಕೈಗಾರಿಕೆಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಬರೀ ಪುಡಿಗಾಸಿಗೆ ನೀಡಲಾಗುತ್ತಿದ್ದು, ಆ ಮೂಲಕ ಸಾಮಾನ್ಯ ಜನರನ್ನು ಲೂಟಿ ಮಾಡಲು ಖಾಸಗೀಯವರಿಗೆ ಅವಕಾಶ ನೀಡುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಜುಲೈ 1 ರಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ 109 ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸೇವೆಗಳ ಮಾರ್ಗಗಳಲ್ಲಿ ಸರ್ಕಾರದ ಜೊತೆಗೆ ಭಾಗವಹಿಸಲು ಇಚ್ಚಿಸುವ ಅರ್ಹ ಖಾಸಗಿ ಕಂಪೆನಿಗಳಿಗೆ ರೈಲ್ವೆ ಇಲಾಖೆಯಲ್ಲಿ ಹೂಡಿಕೆ ಮಾಡಲು ಮುಕ್ತ ಆಹ್ವಾನ ನೀಡಿದೆ. ಅಲ್ಲದೆ, 30,000 ಕೋಟಿ ರೂ. ವರೆಗೆ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಐತಿಹಾಸಿಕ ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಲು ಹೊರಟಿದೆ.

ಇದನ್ನೂ ಓದಿ: ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಬೆಂಕಿಯಿಂದ ಬಾಣಲೆಗೆ;

ಈಗಾಗಲೇ ಖಾಸಗೀ ಶಾಲೆಗಳು, ಖಾಸಗೀ ಆಸ್ಪತ್ರೆಗಳು, ಖಾಸಗೀ ವಿಮಾನಗಳು ಹೀಗೆ ಖಾಸಗಿಕರಣದಿಂದ ಬಳಲಿಹೋಗಿರುವ ಜನಕ್ಕೆ ಸರ್ಕಾರ ಮತ್ತೊಂದು ಹೊಡೆತ ನೀಡಿದೆ.

ಭಾರತೀಯ ರೈಲ್ವೆಯಿಂದ ಸುಮಾರು 12 ಲಕ್ಷ ರೈಲ್ವೆ ಸಿಬ್ಬಂದಿ ಜೀವನ ರೂಪಿಸಿಕೊಂಡಿದ್ದಾರೆ. ಇದೀಗ ಖಾಸಗಿ ರೈಲುಗಳ ಸಂಚಾರದಿಂದ ಮುಂದಿನ ವರ್ಷಗಳಲ್ಲಿ ಈ 12 ಲಕ್ಷ ನೌಕರರ ಜೀವನೋಪಾಯದ ಪ್ರಶ್ನೆ ಎದುರಾಗುತ್ತದೆ. ಹಲವು ವಲಯಗಳಲ್ಲಿ ಖಾಸಗೀಕರಣದಿಂದ ಸಾವಿರಾರು ಸರ್ಕಾರಿ ಉದ್ಯೋಗ ನಷ್ಟ ಆದ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇವೆ. ಇನ್ನು ಖಾಸಗಿ ಪ್ಯಾಸೆಂಜರ್ ರೈಲು ಓಡುವುದರಿಂದ ಮಾಸಿಕ ಪಾಸ್ ಸೇರಿದಂತೆ ಸರ್ಕಾರ ನೀಡುತ್ತಿದ್ದ ರಿಯಾಯ್ತಿ ಟಿಕೆಟ್‍ಗಳಿಗೆ ಕೂಡ ಕುತ್ತು ಬೀಳಲಿದೆ.

ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಲಿರುವ ಖಾಸಗಿ ರೈಲು ಸಂಚಾರ, ತದನಂತರ ರೈಲ್ವೆ ಇಲಾಖೆಯ ರೈಲುಗಳು ಸರಿಯಾದ ಸಮಯಕ್ಕೆ ದೊರಕದಿರುವುದು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಲಿದ್ದು (ಈಗ ಇರುವ ಸಣ್ಣ ಸಮಸ್ಯೆಗಳನ್ನು ಮಾಧ್ಯಮಗಳ ಮೂಲಕ ಬೃಹತ್ತಾಗಿ ಬಿಂಬಿಸಿ) ಪ್ರಯಾಣಿಕರು ಖಾಸಗಿ ರೈಲುಗಳಲ್ಲಿ ಸಂಚಾರ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಮಾಡಲಾಗುತ್ತದೆ. ಬಹುತೇಕ ಮಾರ್ಗಗಳಿಗೆ ಕೇವಲ ಖಾಸಗಿ ರೈಲುಗಳನ್ನು ಬಿಡುವ ಮೂಲಕ, ಪ್ರಯಾಣಿಕರಿಗೆ ಹೊರೆಯಾದರೂ ಖಾಸಗಿ ಬಂಡವಾಳದಾರರಿಗೆ ಅನುಕೂಲ ಮಾಡಿಕೊಡುವ ಸಂದರ್ಭ ಬರಬಹುದು. ಟಿಕೆಟ್ ದರ ನಿಗದಿ ಮಾಡಲು ಸರ್ವಸ್ವತಂತ್ರರು ಎಂದು ಈಗಾಗಲೇ ತಿಳಿಸಲಾಗಿದೆ. ಅಂದರೆ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಒಮ್ಮೆ ಜ್ಞಾಪಕ ಮಾಡಿಕೊಂಡರೆ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ ಎನ್ನುವ ಲೆಕ್ಕಾಚಾರ ಕಣ್ಣ ಮುಂದೆ ಹಾದು ಹೋಗುತ್ತದೆ.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ರೈಲು, ಬಡವರ ಸಂಚಾರಕ್ಕೆ ಹೇಳಿ ಮಾಡಿಸಿದ್ದ ಸಂಚಾರ ವ್ಯವಸ್ಥೆ. ಆದರೆ ಮುಂದಿನ ದಿನಗಳಲ್ಲಿ ಮಾಸಿಕ ಪಾಸ್ ಅಷ್ಟೇ ಅಲ್ಲ, ಬೇರೆ ಎಲ್ಲಾ ಸೌಲಭ್ಯಗಳಿಗೂ ಕತ್ತರಿ ಬೀಳಲಿದೆ. ಜೊತೆಗ ಖಾಸಗಿ ಬಸ್ ಲಾಬಿ ನಡೆಯುವ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಖಾಸಗಿ ರೈಲು ಕಂಪನಿಗಳ ಲಾಬಿ ನಡೆಯಲಿದೆ. 30 ವರ್ಷದ ತನಕ ಹೆದ್ದಾರಿಯನ್ನು ನಿರ್ವಹಣೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಂಡು ಜೀವನ ಪರ್ಯಂತ ಟೋಲ್ ಸಂಗ್ರಹಿಸುವ ಖಾಸಗಿ ಕಂಪನಿಗಳಂತೆಯೇ ಸುಲಿಗೆ ಮಾಡುವುದು ಶತಸಿದ್ಧ ಎನ್ನಬಹುದು.

ಇನ್ನು, ಕಡಿಮೆ ನಿರ್ವಹಣೆ, ಕಡಿಮೆ ಸಾಗಣೆ ಸಮಯ, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು, ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುವ ಸಲುವಾಗಿ ಖಾಸಗಿ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತ ಬಳಗದ ಉದ್ಯಮಿಗಳೇ ಸರ್ಕಾರ ಘೋಷಿಸಿರುವ ಈ ಬಿಡ್ಡಿಂಗ್ ಪಡೆಯುವ ಎಲ್ಲಾ ಸಾಧ್ಯತೆಗಳಿವೆ ಅಥವಾ ಆ ಬಿಡ್ಡಿಂಗ್‍ನಲ್ಲಿ ಬಿಜೆಪಿಗೆ ಆಪ್ತರಾಗಿರುವ ಉದ್ಯಮಿಗಳು ಷೇರು ಪಡೆಯುವ ಸಾಧ್ಯತೆಯೂ ಇದೆ. ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ವಿಶ್ವದರ್ಜೆ ರೈಲಿನಲ್ಲಿ ಸಂಚಾರ ಮಾಡಬಹುದು ಎಂದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಾಮಾನ್ಯ ಜನರ ಬದುಕು ಈಗಾಗಲೇ ಇರುವ ಸಮಸ್ಯೆಗಳೊಟ್ಟಿಗೆ ಇದೂ ಸೇರಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಬದುಕು ದುಬಾರಿಯಾಗುತ್ತದೆ.

ಇದನ್ನೂ ಓದಿ:ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಯಾವ ಕಾಲದಲ್ಲೂ ಪ್ರಭುತ್ವಗಳಿಗೆ ಜನಸಾಮಾನ್ಯರ ಚಿಂತೆ ಇದ್ದಂತಿಲ್ಲ. ಹಾಗಾಗಿಯೇ ತಾವು ವಿರೋಧ ಪಕ್ಷದಲ್ಲಿದ್ದಾಗ ಆಡಳಿತ ಪಕ್ಷ ಜಾರಿಗೆ ತರುವ ಕಾನೂನು-ಕಾಯ್ದೆಗಳ ಬಗ್ಗೆ ಅಸಹಕಾರ ತೋರಿ, ಪ್ರತಿಭಟಿಸುತ್ತಿದ್ದವರು, ತಾವು ಅಧಿಕಾರಕ್ಕೆ ಬಂದ ನಂತರ ಅದೇ ಕೆಲಸವನ್ನ ಇನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ. 15 ವರ್ಷಗಳ ಹಿಂದೆಯೇ ರೈಲ್ವೇ ಖಾಸಗೀಕರಣದ ಕೆಲಸ ನಡೆದಾಗ ಇದೇ ಬಿಜೆಪಿ ಪಕ್ಷ ವಿರೋಧಿಸಿತ್ತು. ಆದರೆ ಈಗ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದು ಗಾಯದ ಮೇಲೆ ಬರೆ ಎಳೆಯುತ್ತಿದೆ. ಅದರಲ್ಲೂ 2014 ರಿಂದ ಈಚೆಗೆ ಸರ್ಕಾರಿ ಒಡೆತನದ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಹೆಚ್ಚಾಗುತ್ತಲೇ ಇದೆ. ಇನ್ನೂ ಕಳವಳಕಾರಿಯಾದ ವಿಷಯವೆಂದರೆ ರೈಲ್ವೇ ಇಲಾಖೆಯಲ್ಲಿ ಈಗಾಗಲೇ ದುಡಿಯುತ್ತಿರುವವರಿಗೆ ಇದರ ಪರಿವೆಯೇ ಇಲ್ಲದಿರುವುದು. ಇಷ್ಟು ದೊಡ್ಡ ಮತ್ತು ಲಾಭದಾಯಕ ರೈಲ್ವೇ ಸೇವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವಾದರೂ ಏನು? ಇದರ ವಿರುದ್ಧ ಸಾಕಷ್ಟು ಹೋರಾಟಗಳೂ ನಡೆದಿವೆಯಾದರೂ ಅವು ದೇಶದಾದ್ಯಂತ ಸಂಘಟಿತವಾಗಿ ಆಗಿಲ್ಲ. ಎಲ್ಲಿಯವರೆಗೆ ದೇಶದ ಮತ್ತು ಸಾಮಾನ್ಯ ಜನರ ಸಮಸ್ಯೆ ನಮ್ಮದಲ್ಲ ಎಂದು ಈ ನಾಗರಿಕ ಸಮಾಜ ಸುಮ್ಮನಿರುತ್ತದೆಯೋ ಅಲ್ಲಿಯವರೆಗೂ ಇಂತಹ ದಬ್ಬಾಳಿಕೆಗಳಿಗೆ ಕೊನೆಯಿಲ್ಲ.

ಹಾಗಾಗಿ, ರೈಲ್ವೇ ಖಾಸಗೀಕರಣದ ವಿರುದ್ಧದ ಅಭಿಯಾನ ಸಮಿತಿಯೊಂದು ರಚನೆಯಾಗಿದ್ದು, ಆನ್‌ಲೈನ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ನಿಮ್ಮ ಸಮ್ಮತಿಯಿದ್ದರೆ, ನೀವೂ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬಹುದು.

ಇದರಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...