Homeಮುಖಪುಟರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ...

ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

- Advertisement -
- Advertisement -

ಭಾರತೀಯ ರೈಲ್ವೇ ಕ್ಷೇತ್ರವನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರದ ಈ ಪ್ರಕ್ರಿಯೆಯ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇದಕ್ಕೆ ಸಮ್ಮತಿಯಿರುವವರು ತಮ್ಮ ಹೆಸರು ಮತ್ತು ಸಂಪರ್ಕ ಸಂಖ್ಯೆಯನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ದೇಶದ ಪ್ರಮುಖ ಸಾರ್ವಜನಿಕ ಸಾರಿಗೆ ಒಡೆತನವಾದ ಭಾರತೀಯ ರೈಲ್ವೆಯಲ್ಲಿ ಖಾಸಗಿ ಹೂಡಿಕೆಗೆ ಕೇಂದ್ರ ಸರ್ಕಾರ ಅವಕಾಶ ನೀಡಿರುವ ನಿರ್ಧಾರವು ಅತ್ಯಂತ ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿಯಾದದ್ದು. ಜನಸಾಮಾನ್ಯರ ತೆರಿಗೆ ಮೊತ್ತ ಹಾಗೂ ರೈಲ್ವೆ ಕಾರ್ಮಿಕರು ಸುರಿಸಿದ ರಕ್ತ ಮತ್ತು ಬೆವರಿನ ಶ್ರಮದಿಂದ ಸ್ಥಾಪಿತವಾದ ಮತ್ತು ಅಭಿವೃದ್ಧಿಗೊಂಡ ಭಾರತಿಯ ರೈಲ್ವೆಗೆ ಸೇರಿದ ರೈಲ್ವೆ ಮಾರ್ಗಗಳನ್ನು, ನಿಲ್ದಾಣಗಳನ್ನು, ರೈಲ್ವೆ ಕೈಗಾರಿಕೆಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಬರೀ ಪುಡಿಗಾಸಿಗೆ ನೀಡಲಾಗುತ್ತಿದ್ದು, ಆ ಮೂಲಕ ಸಾಮಾನ್ಯ ಜನರನ್ನು ಲೂಟಿ ಮಾಡಲು ಖಾಸಗೀಯವರಿಗೆ ಅವಕಾಶ ನೀಡುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಜುಲೈ 1 ರಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ 109 ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸೇವೆಗಳ ಮಾರ್ಗಗಳಲ್ಲಿ ಸರ್ಕಾರದ ಜೊತೆಗೆ ಭಾಗವಹಿಸಲು ಇಚ್ಚಿಸುವ ಅರ್ಹ ಖಾಸಗಿ ಕಂಪೆನಿಗಳಿಗೆ ರೈಲ್ವೆ ಇಲಾಖೆಯಲ್ಲಿ ಹೂಡಿಕೆ ಮಾಡಲು ಮುಕ್ತ ಆಹ್ವಾನ ನೀಡಿದೆ. ಅಲ್ಲದೆ, 30,000 ಕೋಟಿ ರೂ. ವರೆಗೆ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಐತಿಹಾಸಿಕ ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಲು ಹೊರಟಿದೆ.

ಇದನ್ನೂ ಓದಿ: ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಬೆಂಕಿಯಿಂದ ಬಾಣಲೆಗೆ;

ಈಗಾಗಲೇ ಖಾಸಗೀ ಶಾಲೆಗಳು, ಖಾಸಗೀ ಆಸ್ಪತ್ರೆಗಳು, ಖಾಸಗೀ ವಿಮಾನಗಳು ಹೀಗೆ ಖಾಸಗಿಕರಣದಿಂದ ಬಳಲಿಹೋಗಿರುವ ಜನಕ್ಕೆ ಸರ್ಕಾರ ಮತ್ತೊಂದು ಹೊಡೆತ ನೀಡಿದೆ.

ಭಾರತೀಯ ರೈಲ್ವೆಯಿಂದ ಸುಮಾರು 12 ಲಕ್ಷ ರೈಲ್ವೆ ಸಿಬ್ಬಂದಿ ಜೀವನ ರೂಪಿಸಿಕೊಂಡಿದ್ದಾರೆ. ಇದೀಗ ಖಾಸಗಿ ರೈಲುಗಳ ಸಂಚಾರದಿಂದ ಮುಂದಿನ ವರ್ಷಗಳಲ್ಲಿ ಈ 12 ಲಕ್ಷ ನೌಕರರ ಜೀವನೋಪಾಯದ ಪ್ರಶ್ನೆ ಎದುರಾಗುತ್ತದೆ. ಹಲವು ವಲಯಗಳಲ್ಲಿ ಖಾಸಗೀಕರಣದಿಂದ ಸಾವಿರಾರು ಸರ್ಕಾರಿ ಉದ್ಯೋಗ ನಷ್ಟ ಆದ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇವೆ. ಇನ್ನು ಖಾಸಗಿ ಪ್ಯಾಸೆಂಜರ್ ರೈಲು ಓಡುವುದರಿಂದ ಮಾಸಿಕ ಪಾಸ್ ಸೇರಿದಂತೆ ಸರ್ಕಾರ ನೀಡುತ್ತಿದ್ದ ರಿಯಾಯ್ತಿ ಟಿಕೆಟ್‍ಗಳಿಗೆ ಕೂಡ ಕುತ್ತು ಬೀಳಲಿದೆ.

ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಲಿರುವ ಖಾಸಗಿ ರೈಲು ಸಂಚಾರ, ತದನಂತರ ರೈಲ್ವೆ ಇಲಾಖೆಯ ರೈಲುಗಳು ಸರಿಯಾದ ಸಮಯಕ್ಕೆ ದೊರಕದಿರುವುದು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಲಿದ್ದು (ಈಗ ಇರುವ ಸಣ್ಣ ಸಮಸ್ಯೆಗಳನ್ನು ಮಾಧ್ಯಮಗಳ ಮೂಲಕ ಬೃಹತ್ತಾಗಿ ಬಿಂಬಿಸಿ) ಪ್ರಯಾಣಿಕರು ಖಾಸಗಿ ರೈಲುಗಳಲ್ಲಿ ಸಂಚಾರ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಮಾಡಲಾಗುತ್ತದೆ. ಬಹುತೇಕ ಮಾರ್ಗಗಳಿಗೆ ಕೇವಲ ಖಾಸಗಿ ರೈಲುಗಳನ್ನು ಬಿಡುವ ಮೂಲಕ, ಪ್ರಯಾಣಿಕರಿಗೆ ಹೊರೆಯಾದರೂ ಖಾಸಗಿ ಬಂಡವಾಳದಾರರಿಗೆ ಅನುಕೂಲ ಮಾಡಿಕೊಡುವ ಸಂದರ್ಭ ಬರಬಹುದು. ಟಿಕೆಟ್ ದರ ನಿಗದಿ ಮಾಡಲು ಸರ್ವಸ್ವತಂತ್ರರು ಎಂದು ಈಗಾಗಲೇ ತಿಳಿಸಲಾಗಿದೆ. ಅಂದರೆ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಒಮ್ಮೆ ಜ್ಞಾಪಕ ಮಾಡಿಕೊಂಡರೆ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ ಎನ್ನುವ ಲೆಕ್ಕಾಚಾರ ಕಣ್ಣ ಮುಂದೆ ಹಾದು ಹೋಗುತ್ತದೆ.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ರೈಲು, ಬಡವರ ಸಂಚಾರಕ್ಕೆ ಹೇಳಿ ಮಾಡಿಸಿದ್ದ ಸಂಚಾರ ವ್ಯವಸ್ಥೆ. ಆದರೆ ಮುಂದಿನ ದಿನಗಳಲ್ಲಿ ಮಾಸಿಕ ಪಾಸ್ ಅಷ್ಟೇ ಅಲ್ಲ, ಬೇರೆ ಎಲ್ಲಾ ಸೌಲಭ್ಯಗಳಿಗೂ ಕತ್ತರಿ ಬೀಳಲಿದೆ. ಜೊತೆಗ ಖಾಸಗಿ ಬಸ್ ಲಾಬಿ ನಡೆಯುವ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಖಾಸಗಿ ರೈಲು ಕಂಪನಿಗಳ ಲಾಬಿ ನಡೆಯಲಿದೆ. 30 ವರ್ಷದ ತನಕ ಹೆದ್ದಾರಿಯನ್ನು ನಿರ್ವಹಣೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಂಡು ಜೀವನ ಪರ್ಯಂತ ಟೋಲ್ ಸಂಗ್ರಹಿಸುವ ಖಾಸಗಿ ಕಂಪನಿಗಳಂತೆಯೇ ಸುಲಿಗೆ ಮಾಡುವುದು ಶತಸಿದ್ಧ ಎನ್ನಬಹುದು.

ಇನ್ನು, ಕಡಿಮೆ ನಿರ್ವಹಣೆ, ಕಡಿಮೆ ಸಾಗಣೆ ಸಮಯ, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು, ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುವ ಸಲುವಾಗಿ ಖಾಸಗಿ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತ ಬಳಗದ ಉದ್ಯಮಿಗಳೇ ಸರ್ಕಾರ ಘೋಷಿಸಿರುವ ಈ ಬಿಡ್ಡಿಂಗ್ ಪಡೆಯುವ ಎಲ್ಲಾ ಸಾಧ್ಯತೆಗಳಿವೆ ಅಥವಾ ಆ ಬಿಡ್ಡಿಂಗ್‍ನಲ್ಲಿ ಬಿಜೆಪಿಗೆ ಆಪ್ತರಾಗಿರುವ ಉದ್ಯಮಿಗಳು ಷೇರು ಪಡೆಯುವ ಸಾಧ್ಯತೆಯೂ ಇದೆ. ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ವಿಶ್ವದರ್ಜೆ ರೈಲಿನಲ್ಲಿ ಸಂಚಾರ ಮಾಡಬಹುದು ಎಂದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಾಮಾನ್ಯ ಜನರ ಬದುಕು ಈಗಾಗಲೇ ಇರುವ ಸಮಸ್ಯೆಗಳೊಟ್ಟಿಗೆ ಇದೂ ಸೇರಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಬದುಕು ದುಬಾರಿಯಾಗುತ್ತದೆ.

ಇದನ್ನೂ ಓದಿ:ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಯಾವ ಕಾಲದಲ್ಲೂ ಪ್ರಭುತ್ವಗಳಿಗೆ ಜನಸಾಮಾನ್ಯರ ಚಿಂತೆ ಇದ್ದಂತಿಲ್ಲ. ಹಾಗಾಗಿಯೇ ತಾವು ವಿರೋಧ ಪಕ್ಷದಲ್ಲಿದ್ದಾಗ ಆಡಳಿತ ಪಕ್ಷ ಜಾರಿಗೆ ತರುವ ಕಾನೂನು-ಕಾಯ್ದೆಗಳ ಬಗ್ಗೆ ಅಸಹಕಾರ ತೋರಿ, ಪ್ರತಿಭಟಿಸುತ್ತಿದ್ದವರು, ತಾವು ಅಧಿಕಾರಕ್ಕೆ ಬಂದ ನಂತರ ಅದೇ ಕೆಲಸವನ್ನ ಇನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ. 15 ವರ್ಷಗಳ ಹಿಂದೆಯೇ ರೈಲ್ವೇ ಖಾಸಗೀಕರಣದ ಕೆಲಸ ನಡೆದಾಗ ಇದೇ ಬಿಜೆಪಿ ಪಕ್ಷ ವಿರೋಧಿಸಿತ್ತು. ಆದರೆ ಈಗ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದು ಗಾಯದ ಮೇಲೆ ಬರೆ ಎಳೆಯುತ್ತಿದೆ. ಅದರಲ್ಲೂ 2014 ರಿಂದ ಈಚೆಗೆ ಸರ್ಕಾರಿ ಒಡೆತನದ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಹೆಚ್ಚಾಗುತ್ತಲೇ ಇದೆ. ಇನ್ನೂ ಕಳವಳಕಾರಿಯಾದ ವಿಷಯವೆಂದರೆ ರೈಲ್ವೇ ಇಲಾಖೆಯಲ್ಲಿ ಈಗಾಗಲೇ ದುಡಿಯುತ್ತಿರುವವರಿಗೆ ಇದರ ಪರಿವೆಯೇ ಇಲ್ಲದಿರುವುದು. ಇಷ್ಟು ದೊಡ್ಡ ಮತ್ತು ಲಾಭದಾಯಕ ರೈಲ್ವೇ ಸೇವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವಾದರೂ ಏನು? ಇದರ ವಿರುದ್ಧ ಸಾಕಷ್ಟು ಹೋರಾಟಗಳೂ ನಡೆದಿವೆಯಾದರೂ ಅವು ದೇಶದಾದ್ಯಂತ ಸಂಘಟಿತವಾಗಿ ಆಗಿಲ್ಲ. ಎಲ್ಲಿಯವರೆಗೆ ದೇಶದ ಮತ್ತು ಸಾಮಾನ್ಯ ಜನರ ಸಮಸ್ಯೆ ನಮ್ಮದಲ್ಲ ಎಂದು ಈ ನಾಗರಿಕ ಸಮಾಜ ಸುಮ್ಮನಿರುತ್ತದೆಯೋ ಅಲ್ಲಿಯವರೆಗೂ ಇಂತಹ ದಬ್ಬಾಳಿಕೆಗಳಿಗೆ ಕೊನೆಯಿಲ್ಲ.

ಹಾಗಾಗಿ, ರೈಲ್ವೇ ಖಾಸಗೀಕರಣದ ವಿರುದ್ಧದ ಅಭಿಯಾನ ಸಮಿತಿಯೊಂದು ರಚನೆಯಾಗಿದ್ದು, ಆನ್‌ಲೈನ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ನಿಮ್ಮ ಸಮ್ಮತಿಯಿದ್ದರೆ, ನೀವೂ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬಹುದು.

ಇದರಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...