Homeಮುಖಪುಟರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ...

ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

- Advertisement -
- Advertisement -

ಭಾರತೀಯ ರೈಲ್ವೇ ಕ್ಷೇತ್ರವನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರದ ಈ ಪ್ರಕ್ರಿಯೆಯ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇದಕ್ಕೆ ಸಮ್ಮತಿಯಿರುವವರು ತಮ್ಮ ಹೆಸರು ಮತ್ತು ಸಂಪರ್ಕ ಸಂಖ್ಯೆಯನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ದೇಶದ ಪ್ರಮುಖ ಸಾರ್ವಜನಿಕ ಸಾರಿಗೆ ಒಡೆತನವಾದ ಭಾರತೀಯ ರೈಲ್ವೆಯಲ್ಲಿ ಖಾಸಗಿ ಹೂಡಿಕೆಗೆ ಕೇಂದ್ರ ಸರ್ಕಾರ ಅವಕಾಶ ನೀಡಿರುವ ನಿರ್ಧಾರವು ಅತ್ಯಂತ ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿಯಾದದ್ದು. ಜನಸಾಮಾನ್ಯರ ತೆರಿಗೆ ಮೊತ್ತ ಹಾಗೂ ರೈಲ್ವೆ ಕಾರ್ಮಿಕರು ಸುರಿಸಿದ ರಕ್ತ ಮತ್ತು ಬೆವರಿನ ಶ್ರಮದಿಂದ ಸ್ಥಾಪಿತವಾದ ಮತ್ತು ಅಭಿವೃದ್ಧಿಗೊಂಡ ಭಾರತಿಯ ರೈಲ್ವೆಗೆ ಸೇರಿದ ರೈಲ್ವೆ ಮಾರ್ಗಗಳನ್ನು, ನಿಲ್ದಾಣಗಳನ್ನು, ರೈಲ್ವೆ ಕೈಗಾರಿಕೆಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಬರೀ ಪುಡಿಗಾಸಿಗೆ ನೀಡಲಾಗುತ್ತಿದ್ದು, ಆ ಮೂಲಕ ಸಾಮಾನ್ಯ ಜನರನ್ನು ಲೂಟಿ ಮಾಡಲು ಖಾಸಗೀಯವರಿಗೆ ಅವಕಾಶ ನೀಡುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಜುಲೈ 1 ರಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ 109 ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸೇವೆಗಳ ಮಾರ್ಗಗಳಲ್ಲಿ ಸರ್ಕಾರದ ಜೊತೆಗೆ ಭಾಗವಹಿಸಲು ಇಚ್ಚಿಸುವ ಅರ್ಹ ಖಾಸಗಿ ಕಂಪೆನಿಗಳಿಗೆ ರೈಲ್ವೆ ಇಲಾಖೆಯಲ್ಲಿ ಹೂಡಿಕೆ ಮಾಡಲು ಮುಕ್ತ ಆಹ್ವಾನ ನೀಡಿದೆ. ಅಲ್ಲದೆ, 30,000 ಕೋಟಿ ರೂ. ವರೆಗೆ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಐತಿಹಾಸಿಕ ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಲು ಹೊರಟಿದೆ.

ಇದನ್ನೂ ಓದಿ: ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಬೆಂಕಿಯಿಂದ ಬಾಣಲೆಗೆ;

ಈಗಾಗಲೇ ಖಾಸಗೀ ಶಾಲೆಗಳು, ಖಾಸಗೀ ಆಸ್ಪತ್ರೆಗಳು, ಖಾಸಗೀ ವಿಮಾನಗಳು ಹೀಗೆ ಖಾಸಗಿಕರಣದಿಂದ ಬಳಲಿಹೋಗಿರುವ ಜನಕ್ಕೆ ಸರ್ಕಾರ ಮತ್ತೊಂದು ಹೊಡೆತ ನೀಡಿದೆ.

ಭಾರತೀಯ ರೈಲ್ವೆಯಿಂದ ಸುಮಾರು 12 ಲಕ್ಷ ರೈಲ್ವೆ ಸಿಬ್ಬಂದಿ ಜೀವನ ರೂಪಿಸಿಕೊಂಡಿದ್ದಾರೆ. ಇದೀಗ ಖಾಸಗಿ ರೈಲುಗಳ ಸಂಚಾರದಿಂದ ಮುಂದಿನ ವರ್ಷಗಳಲ್ಲಿ ಈ 12 ಲಕ್ಷ ನೌಕರರ ಜೀವನೋಪಾಯದ ಪ್ರಶ್ನೆ ಎದುರಾಗುತ್ತದೆ. ಹಲವು ವಲಯಗಳಲ್ಲಿ ಖಾಸಗೀಕರಣದಿಂದ ಸಾವಿರಾರು ಸರ್ಕಾರಿ ಉದ್ಯೋಗ ನಷ್ಟ ಆದ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇವೆ. ಇನ್ನು ಖಾಸಗಿ ಪ್ಯಾಸೆಂಜರ್ ರೈಲು ಓಡುವುದರಿಂದ ಮಾಸಿಕ ಪಾಸ್ ಸೇರಿದಂತೆ ಸರ್ಕಾರ ನೀಡುತ್ತಿದ್ದ ರಿಯಾಯ್ತಿ ಟಿಕೆಟ್‍ಗಳಿಗೆ ಕೂಡ ಕುತ್ತು ಬೀಳಲಿದೆ.

ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಲಿರುವ ಖಾಸಗಿ ರೈಲು ಸಂಚಾರ, ತದನಂತರ ರೈಲ್ವೆ ಇಲಾಖೆಯ ರೈಲುಗಳು ಸರಿಯಾದ ಸಮಯಕ್ಕೆ ದೊರಕದಿರುವುದು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಲಿದ್ದು (ಈಗ ಇರುವ ಸಣ್ಣ ಸಮಸ್ಯೆಗಳನ್ನು ಮಾಧ್ಯಮಗಳ ಮೂಲಕ ಬೃಹತ್ತಾಗಿ ಬಿಂಬಿಸಿ) ಪ್ರಯಾಣಿಕರು ಖಾಸಗಿ ರೈಲುಗಳಲ್ಲಿ ಸಂಚಾರ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಮಾಡಲಾಗುತ್ತದೆ. ಬಹುತೇಕ ಮಾರ್ಗಗಳಿಗೆ ಕೇವಲ ಖಾಸಗಿ ರೈಲುಗಳನ್ನು ಬಿಡುವ ಮೂಲಕ, ಪ್ರಯಾಣಿಕರಿಗೆ ಹೊರೆಯಾದರೂ ಖಾಸಗಿ ಬಂಡವಾಳದಾರರಿಗೆ ಅನುಕೂಲ ಮಾಡಿಕೊಡುವ ಸಂದರ್ಭ ಬರಬಹುದು. ಟಿಕೆಟ್ ದರ ನಿಗದಿ ಮಾಡಲು ಸರ್ವಸ್ವತಂತ್ರರು ಎಂದು ಈಗಾಗಲೇ ತಿಳಿಸಲಾಗಿದೆ. ಅಂದರೆ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಒಮ್ಮೆ ಜ್ಞಾಪಕ ಮಾಡಿಕೊಂಡರೆ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ ಎನ್ನುವ ಲೆಕ್ಕಾಚಾರ ಕಣ್ಣ ಮುಂದೆ ಹಾದು ಹೋಗುತ್ತದೆ.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ರೈಲು, ಬಡವರ ಸಂಚಾರಕ್ಕೆ ಹೇಳಿ ಮಾಡಿಸಿದ್ದ ಸಂಚಾರ ವ್ಯವಸ್ಥೆ. ಆದರೆ ಮುಂದಿನ ದಿನಗಳಲ್ಲಿ ಮಾಸಿಕ ಪಾಸ್ ಅಷ್ಟೇ ಅಲ್ಲ, ಬೇರೆ ಎಲ್ಲಾ ಸೌಲಭ್ಯಗಳಿಗೂ ಕತ್ತರಿ ಬೀಳಲಿದೆ. ಜೊತೆಗ ಖಾಸಗಿ ಬಸ್ ಲಾಬಿ ನಡೆಯುವ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಖಾಸಗಿ ರೈಲು ಕಂಪನಿಗಳ ಲಾಬಿ ನಡೆಯಲಿದೆ. 30 ವರ್ಷದ ತನಕ ಹೆದ್ದಾರಿಯನ್ನು ನಿರ್ವಹಣೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಂಡು ಜೀವನ ಪರ್ಯಂತ ಟೋಲ್ ಸಂಗ್ರಹಿಸುವ ಖಾಸಗಿ ಕಂಪನಿಗಳಂತೆಯೇ ಸುಲಿಗೆ ಮಾಡುವುದು ಶತಸಿದ್ಧ ಎನ್ನಬಹುದು.

ಇನ್ನು, ಕಡಿಮೆ ನಿರ್ವಹಣೆ, ಕಡಿಮೆ ಸಾಗಣೆ ಸಮಯ, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು, ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುವ ಸಲುವಾಗಿ ಖಾಸಗಿ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತ ಬಳಗದ ಉದ್ಯಮಿಗಳೇ ಸರ್ಕಾರ ಘೋಷಿಸಿರುವ ಈ ಬಿಡ್ಡಿಂಗ್ ಪಡೆಯುವ ಎಲ್ಲಾ ಸಾಧ್ಯತೆಗಳಿವೆ ಅಥವಾ ಆ ಬಿಡ್ಡಿಂಗ್‍ನಲ್ಲಿ ಬಿಜೆಪಿಗೆ ಆಪ್ತರಾಗಿರುವ ಉದ್ಯಮಿಗಳು ಷೇರು ಪಡೆಯುವ ಸಾಧ್ಯತೆಯೂ ಇದೆ. ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ವಿಶ್ವದರ್ಜೆ ರೈಲಿನಲ್ಲಿ ಸಂಚಾರ ಮಾಡಬಹುದು ಎಂದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಾಮಾನ್ಯ ಜನರ ಬದುಕು ಈಗಾಗಲೇ ಇರುವ ಸಮಸ್ಯೆಗಳೊಟ್ಟಿಗೆ ಇದೂ ಸೇರಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಬದುಕು ದುಬಾರಿಯಾಗುತ್ತದೆ.

ಇದನ್ನೂ ಓದಿ:ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಯಾವ ಕಾಲದಲ್ಲೂ ಪ್ರಭುತ್ವಗಳಿಗೆ ಜನಸಾಮಾನ್ಯರ ಚಿಂತೆ ಇದ್ದಂತಿಲ್ಲ. ಹಾಗಾಗಿಯೇ ತಾವು ವಿರೋಧ ಪಕ್ಷದಲ್ಲಿದ್ದಾಗ ಆಡಳಿತ ಪಕ್ಷ ಜಾರಿಗೆ ತರುವ ಕಾನೂನು-ಕಾಯ್ದೆಗಳ ಬಗ್ಗೆ ಅಸಹಕಾರ ತೋರಿ, ಪ್ರತಿಭಟಿಸುತ್ತಿದ್ದವರು, ತಾವು ಅಧಿಕಾರಕ್ಕೆ ಬಂದ ನಂತರ ಅದೇ ಕೆಲಸವನ್ನ ಇನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ. 15 ವರ್ಷಗಳ ಹಿಂದೆಯೇ ರೈಲ್ವೇ ಖಾಸಗೀಕರಣದ ಕೆಲಸ ನಡೆದಾಗ ಇದೇ ಬಿಜೆಪಿ ಪಕ್ಷ ವಿರೋಧಿಸಿತ್ತು. ಆದರೆ ಈಗ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದು ಗಾಯದ ಮೇಲೆ ಬರೆ ಎಳೆಯುತ್ತಿದೆ. ಅದರಲ್ಲೂ 2014 ರಿಂದ ಈಚೆಗೆ ಸರ್ಕಾರಿ ಒಡೆತನದ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಹೆಚ್ಚಾಗುತ್ತಲೇ ಇದೆ. ಇನ್ನೂ ಕಳವಳಕಾರಿಯಾದ ವಿಷಯವೆಂದರೆ ರೈಲ್ವೇ ಇಲಾಖೆಯಲ್ಲಿ ಈಗಾಗಲೇ ದುಡಿಯುತ್ತಿರುವವರಿಗೆ ಇದರ ಪರಿವೆಯೇ ಇಲ್ಲದಿರುವುದು. ಇಷ್ಟು ದೊಡ್ಡ ಮತ್ತು ಲಾಭದಾಯಕ ರೈಲ್ವೇ ಸೇವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವಾದರೂ ಏನು? ಇದರ ವಿರುದ್ಧ ಸಾಕಷ್ಟು ಹೋರಾಟಗಳೂ ನಡೆದಿವೆಯಾದರೂ ಅವು ದೇಶದಾದ್ಯಂತ ಸಂಘಟಿತವಾಗಿ ಆಗಿಲ್ಲ. ಎಲ್ಲಿಯವರೆಗೆ ದೇಶದ ಮತ್ತು ಸಾಮಾನ್ಯ ಜನರ ಸಮಸ್ಯೆ ನಮ್ಮದಲ್ಲ ಎಂದು ಈ ನಾಗರಿಕ ಸಮಾಜ ಸುಮ್ಮನಿರುತ್ತದೆಯೋ ಅಲ್ಲಿಯವರೆಗೂ ಇಂತಹ ದಬ್ಬಾಳಿಕೆಗಳಿಗೆ ಕೊನೆಯಿಲ್ಲ.

ಹಾಗಾಗಿ, ರೈಲ್ವೇ ಖಾಸಗೀಕರಣದ ವಿರುದ್ಧದ ಅಭಿಯಾನ ಸಮಿತಿಯೊಂದು ರಚನೆಯಾಗಿದ್ದು, ಆನ್‌ಲೈನ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ನಿಮ್ಮ ಸಮ್ಮತಿಯಿದ್ದರೆ, ನೀವೂ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬಹುದು.

ಇದರಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...