Homeಮುಖಪುಟರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ...

ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

- Advertisement -
- Advertisement -

ಭಾರತೀಯ ರೈಲ್ವೇ ಕ್ಷೇತ್ರವನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರದ ಈ ಪ್ರಕ್ರಿಯೆಯ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇದಕ್ಕೆ ಸಮ್ಮತಿಯಿರುವವರು ತಮ್ಮ ಹೆಸರು ಮತ್ತು ಸಂಪರ್ಕ ಸಂಖ್ಯೆಯನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ದೇಶದ ಪ್ರಮುಖ ಸಾರ್ವಜನಿಕ ಸಾರಿಗೆ ಒಡೆತನವಾದ ಭಾರತೀಯ ರೈಲ್ವೆಯಲ್ಲಿ ಖಾಸಗಿ ಹೂಡಿಕೆಗೆ ಕೇಂದ್ರ ಸರ್ಕಾರ ಅವಕಾಶ ನೀಡಿರುವ ನಿರ್ಧಾರವು ಅತ್ಯಂತ ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿಯಾದದ್ದು. ಜನಸಾಮಾನ್ಯರ ತೆರಿಗೆ ಮೊತ್ತ ಹಾಗೂ ರೈಲ್ವೆ ಕಾರ್ಮಿಕರು ಸುರಿಸಿದ ರಕ್ತ ಮತ್ತು ಬೆವರಿನ ಶ್ರಮದಿಂದ ಸ್ಥಾಪಿತವಾದ ಮತ್ತು ಅಭಿವೃದ್ಧಿಗೊಂಡ ಭಾರತಿಯ ರೈಲ್ವೆಗೆ ಸೇರಿದ ರೈಲ್ವೆ ಮಾರ್ಗಗಳನ್ನು, ನಿಲ್ದಾಣಗಳನ್ನು, ರೈಲ್ವೆ ಕೈಗಾರಿಕೆಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಬರೀ ಪುಡಿಗಾಸಿಗೆ ನೀಡಲಾಗುತ್ತಿದ್ದು, ಆ ಮೂಲಕ ಸಾಮಾನ್ಯ ಜನರನ್ನು ಲೂಟಿ ಮಾಡಲು ಖಾಸಗೀಯವರಿಗೆ ಅವಕಾಶ ನೀಡುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಜುಲೈ 1 ರಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ 109 ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸೇವೆಗಳ ಮಾರ್ಗಗಳಲ್ಲಿ ಸರ್ಕಾರದ ಜೊತೆಗೆ ಭಾಗವಹಿಸಲು ಇಚ್ಚಿಸುವ ಅರ್ಹ ಖಾಸಗಿ ಕಂಪೆನಿಗಳಿಗೆ ರೈಲ್ವೆ ಇಲಾಖೆಯಲ್ಲಿ ಹೂಡಿಕೆ ಮಾಡಲು ಮುಕ್ತ ಆಹ್ವಾನ ನೀಡಿದೆ. ಅಲ್ಲದೆ, 30,000 ಕೋಟಿ ರೂ. ವರೆಗೆ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಐತಿಹಾಸಿಕ ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಲು ಹೊರಟಿದೆ.

ಇದನ್ನೂ ಓದಿ: ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಬೆಂಕಿಯಿಂದ ಬಾಣಲೆಗೆ;

ಈಗಾಗಲೇ ಖಾಸಗೀ ಶಾಲೆಗಳು, ಖಾಸಗೀ ಆಸ್ಪತ್ರೆಗಳು, ಖಾಸಗೀ ವಿಮಾನಗಳು ಹೀಗೆ ಖಾಸಗಿಕರಣದಿಂದ ಬಳಲಿಹೋಗಿರುವ ಜನಕ್ಕೆ ಸರ್ಕಾರ ಮತ್ತೊಂದು ಹೊಡೆತ ನೀಡಿದೆ.

ಭಾರತೀಯ ರೈಲ್ವೆಯಿಂದ ಸುಮಾರು 12 ಲಕ್ಷ ರೈಲ್ವೆ ಸಿಬ್ಬಂದಿ ಜೀವನ ರೂಪಿಸಿಕೊಂಡಿದ್ದಾರೆ. ಇದೀಗ ಖಾಸಗಿ ರೈಲುಗಳ ಸಂಚಾರದಿಂದ ಮುಂದಿನ ವರ್ಷಗಳಲ್ಲಿ ಈ 12 ಲಕ್ಷ ನೌಕರರ ಜೀವನೋಪಾಯದ ಪ್ರಶ್ನೆ ಎದುರಾಗುತ್ತದೆ. ಹಲವು ವಲಯಗಳಲ್ಲಿ ಖಾಸಗೀಕರಣದಿಂದ ಸಾವಿರಾರು ಸರ್ಕಾರಿ ಉದ್ಯೋಗ ನಷ್ಟ ಆದ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇವೆ. ಇನ್ನು ಖಾಸಗಿ ಪ್ಯಾಸೆಂಜರ್ ರೈಲು ಓಡುವುದರಿಂದ ಮಾಸಿಕ ಪಾಸ್ ಸೇರಿದಂತೆ ಸರ್ಕಾರ ನೀಡುತ್ತಿದ್ದ ರಿಯಾಯ್ತಿ ಟಿಕೆಟ್‍ಗಳಿಗೆ ಕೂಡ ಕುತ್ತು ಬೀಳಲಿದೆ.

ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಲಿರುವ ಖಾಸಗಿ ರೈಲು ಸಂಚಾರ, ತದನಂತರ ರೈಲ್ವೆ ಇಲಾಖೆಯ ರೈಲುಗಳು ಸರಿಯಾದ ಸಮಯಕ್ಕೆ ದೊರಕದಿರುವುದು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಲಿದ್ದು (ಈಗ ಇರುವ ಸಣ್ಣ ಸಮಸ್ಯೆಗಳನ್ನು ಮಾಧ್ಯಮಗಳ ಮೂಲಕ ಬೃಹತ್ತಾಗಿ ಬಿಂಬಿಸಿ) ಪ್ರಯಾಣಿಕರು ಖಾಸಗಿ ರೈಲುಗಳಲ್ಲಿ ಸಂಚಾರ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಮಾಡಲಾಗುತ್ತದೆ. ಬಹುತೇಕ ಮಾರ್ಗಗಳಿಗೆ ಕೇವಲ ಖಾಸಗಿ ರೈಲುಗಳನ್ನು ಬಿಡುವ ಮೂಲಕ, ಪ್ರಯಾಣಿಕರಿಗೆ ಹೊರೆಯಾದರೂ ಖಾಸಗಿ ಬಂಡವಾಳದಾರರಿಗೆ ಅನುಕೂಲ ಮಾಡಿಕೊಡುವ ಸಂದರ್ಭ ಬರಬಹುದು. ಟಿಕೆಟ್ ದರ ನಿಗದಿ ಮಾಡಲು ಸರ್ವಸ್ವತಂತ್ರರು ಎಂದು ಈಗಾಗಲೇ ತಿಳಿಸಲಾಗಿದೆ. ಅಂದರೆ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಒಮ್ಮೆ ಜ್ಞಾಪಕ ಮಾಡಿಕೊಂಡರೆ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ ಎನ್ನುವ ಲೆಕ್ಕಾಚಾರ ಕಣ್ಣ ಮುಂದೆ ಹಾದು ಹೋಗುತ್ತದೆ.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ರೈಲು, ಬಡವರ ಸಂಚಾರಕ್ಕೆ ಹೇಳಿ ಮಾಡಿಸಿದ್ದ ಸಂಚಾರ ವ್ಯವಸ್ಥೆ. ಆದರೆ ಮುಂದಿನ ದಿನಗಳಲ್ಲಿ ಮಾಸಿಕ ಪಾಸ್ ಅಷ್ಟೇ ಅಲ್ಲ, ಬೇರೆ ಎಲ್ಲಾ ಸೌಲಭ್ಯಗಳಿಗೂ ಕತ್ತರಿ ಬೀಳಲಿದೆ. ಜೊತೆಗ ಖಾಸಗಿ ಬಸ್ ಲಾಬಿ ನಡೆಯುವ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಖಾಸಗಿ ರೈಲು ಕಂಪನಿಗಳ ಲಾಬಿ ನಡೆಯಲಿದೆ. 30 ವರ್ಷದ ತನಕ ಹೆದ್ದಾರಿಯನ್ನು ನಿರ್ವಹಣೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಂಡು ಜೀವನ ಪರ್ಯಂತ ಟೋಲ್ ಸಂಗ್ರಹಿಸುವ ಖಾಸಗಿ ಕಂಪನಿಗಳಂತೆಯೇ ಸುಲಿಗೆ ಮಾಡುವುದು ಶತಸಿದ್ಧ ಎನ್ನಬಹುದು.

ಇನ್ನು, ಕಡಿಮೆ ನಿರ್ವಹಣೆ, ಕಡಿಮೆ ಸಾಗಣೆ ಸಮಯ, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು, ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುವ ಸಲುವಾಗಿ ಖಾಸಗಿ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತ ಬಳಗದ ಉದ್ಯಮಿಗಳೇ ಸರ್ಕಾರ ಘೋಷಿಸಿರುವ ಈ ಬಿಡ್ಡಿಂಗ್ ಪಡೆಯುವ ಎಲ್ಲಾ ಸಾಧ್ಯತೆಗಳಿವೆ ಅಥವಾ ಆ ಬಿಡ್ಡಿಂಗ್‍ನಲ್ಲಿ ಬಿಜೆಪಿಗೆ ಆಪ್ತರಾಗಿರುವ ಉದ್ಯಮಿಗಳು ಷೇರು ಪಡೆಯುವ ಸಾಧ್ಯತೆಯೂ ಇದೆ. ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ವಿಶ್ವದರ್ಜೆ ರೈಲಿನಲ್ಲಿ ಸಂಚಾರ ಮಾಡಬಹುದು ಎಂದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಾಮಾನ್ಯ ಜನರ ಬದುಕು ಈಗಾಗಲೇ ಇರುವ ಸಮಸ್ಯೆಗಳೊಟ್ಟಿಗೆ ಇದೂ ಸೇರಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಬದುಕು ದುಬಾರಿಯಾಗುತ್ತದೆ.

ಇದನ್ನೂ ಓದಿ:ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಯಾವ ಕಾಲದಲ್ಲೂ ಪ್ರಭುತ್ವಗಳಿಗೆ ಜನಸಾಮಾನ್ಯರ ಚಿಂತೆ ಇದ್ದಂತಿಲ್ಲ. ಹಾಗಾಗಿಯೇ ತಾವು ವಿರೋಧ ಪಕ್ಷದಲ್ಲಿದ್ದಾಗ ಆಡಳಿತ ಪಕ್ಷ ಜಾರಿಗೆ ತರುವ ಕಾನೂನು-ಕಾಯ್ದೆಗಳ ಬಗ್ಗೆ ಅಸಹಕಾರ ತೋರಿ, ಪ್ರತಿಭಟಿಸುತ್ತಿದ್ದವರು, ತಾವು ಅಧಿಕಾರಕ್ಕೆ ಬಂದ ನಂತರ ಅದೇ ಕೆಲಸವನ್ನ ಇನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ. 15 ವರ್ಷಗಳ ಹಿಂದೆಯೇ ರೈಲ್ವೇ ಖಾಸಗೀಕರಣದ ಕೆಲಸ ನಡೆದಾಗ ಇದೇ ಬಿಜೆಪಿ ಪಕ್ಷ ವಿರೋಧಿಸಿತ್ತು. ಆದರೆ ಈಗ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದು ಗಾಯದ ಮೇಲೆ ಬರೆ ಎಳೆಯುತ್ತಿದೆ. ಅದರಲ್ಲೂ 2014 ರಿಂದ ಈಚೆಗೆ ಸರ್ಕಾರಿ ಒಡೆತನದ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಹೆಚ್ಚಾಗುತ್ತಲೇ ಇದೆ. ಇನ್ನೂ ಕಳವಳಕಾರಿಯಾದ ವಿಷಯವೆಂದರೆ ರೈಲ್ವೇ ಇಲಾಖೆಯಲ್ಲಿ ಈಗಾಗಲೇ ದುಡಿಯುತ್ತಿರುವವರಿಗೆ ಇದರ ಪರಿವೆಯೇ ಇಲ್ಲದಿರುವುದು. ಇಷ್ಟು ದೊಡ್ಡ ಮತ್ತು ಲಾಭದಾಯಕ ರೈಲ್ವೇ ಸೇವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವಾದರೂ ಏನು? ಇದರ ವಿರುದ್ಧ ಸಾಕಷ್ಟು ಹೋರಾಟಗಳೂ ನಡೆದಿವೆಯಾದರೂ ಅವು ದೇಶದಾದ್ಯಂತ ಸಂಘಟಿತವಾಗಿ ಆಗಿಲ್ಲ. ಎಲ್ಲಿಯವರೆಗೆ ದೇಶದ ಮತ್ತು ಸಾಮಾನ್ಯ ಜನರ ಸಮಸ್ಯೆ ನಮ್ಮದಲ್ಲ ಎಂದು ಈ ನಾಗರಿಕ ಸಮಾಜ ಸುಮ್ಮನಿರುತ್ತದೆಯೋ ಅಲ್ಲಿಯವರೆಗೂ ಇಂತಹ ದಬ್ಬಾಳಿಕೆಗಳಿಗೆ ಕೊನೆಯಿಲ್ಲ.

ಹಾಗಾಗಿ, ರೈಲ್ವೇ ಖಾಸಗೀಕರಣದ ವಿರುದ್ಧದ ಅಭಿಯಾನ ಸಮಿತಿಯೊಂದು ರಚನೆಯಾಗಿದ್ದು, ಆನ್‌ಲೈನ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ನಿಮ್ಮ ಸಮ್ಮತಿಯಿದ್ದರೆ, ನೀವೂ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬಹುದು.

ಇದರಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...