Homeಮುಖಪುಟರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ...

ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

- Advertisement -
- Advertisement -

ಭಾರತೀಯ ರೈಲ್ವೇ ಕ್ಷೇತ್ರವನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರದ ಈ ಪ್ರಕ್ರಿಯೆಯ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇದಕ್ಕೆ ಸಮ್ಮತಿಯಿರುವವರು ತಮ್ಮ ಹೆಸರು ಮತ್ತು ಸಂಪರ್ಕ ಸಂಖ್ಯೆಯನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ದೇಶದ ಪ್ರಮುಖ ಸಾರ್ವಜನಿಕ ಸಾರಿಗೆ ಒಡೆತನವಾದ ಭಾರತೀಯ ರೈಲ್ವೆಯಲ್ಲಿ ಖಾಸಗಿ ಹೂಡಿಕೆಗೆ ಕೇಂದ್ರ ಸರ್ಕಾರ ಅವಕಾಶ ನೀಡಿರುವ ನಿರ್ಧಾರವು ಅತ್ಯಂತ ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿಯಾದದ್ದು. ಜನಸಾಮಾನ್ಯರ ತೆರಿಗೆ ಮೊತ್ತ ಹಾಗೂ ರೈಲ್ವೆ ಕಾರ್ಮಿಕರು ಸುರಿಸಿದ ರಕ್ತ ಮತ್ತು ಬೆವರಿನ ಶ್ರಮದಿಂದ ಸ್ಥಾಪಿತವಾದ ಮತ್ತು ಅಭಿವೃದ್ಧಿಗೊಂಡ ಭಾರತಿಯ ರೈಲ್ವೆಗೆ ಸೇರಿದ ರೈಲ್ವೆ ಮಾರ್ಗಗಳನ್ನು, ನಿಲ್ದಾಣಗಳನ್ನು, ರೈಲ್ವೆ ಕೈಗಾರಿಕೆಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಬರೀ ಪುಡಿಗಾಸಿಗೆ ನೀಡಲಾಗುತ್ತಿದ್ದು, ಆ ಮೂಲಕ ಸಾಮಾನ್ಯ ಜನರನ್ನು ಲೂಟಿ ಮಾಡಲು ಖಾಸಗೀಯವರಿಗೆ ಅವಕಾಶ ನೀಡುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಜುಲೈ 1 ರಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ 109 ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸೇವೆಗಳ ಮಾರ್ಗಗಳಲ್ಲಿ ಸರ್ಕಾರದ ಜೊತೆಗೆ ಭಾಗವಹಿಸಲು ಇಚ್ಚಿಸುವ ಅರ್ಹ ಖಾಸಗಿ ಕಂಪೆನಿಗಳಿಗೆ ರೈಲ್ವೆ ಇಲಾಖೆಯಲ್ಲಿ ಹೂಡಿಕೆ ಮಾಡಲು ಮುಕ್ತ ಆಹ್ವಾನ ನೀಡಿದೆ. ಅಲ್ಲದೆ, 30,000 ಕೋಟಿ ರೂ. ವರೆಗೆ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಐತಿಹಾಸಿಕ ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಲು ಹೊರಟಿದೆ.

ಇದನ್ನೂ ಓದಿ: ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಬೆಂಕಿಯಿಂದ ಬಾಣಲೆಗೆ;

ಈಗಾಗಲೇ ಖಾಸಗೀ ಶಾಲೆಗಳು, ಖಾಸಗೀ ಆಸ್ಪತ್ರೆಗಳು, ಖಾಸಗೀ ವಿಮಾನಗಳು ಹೀಗೆ ಖಾಸಗಿಕರಣದಿಂದ ಬಳಲಿಹೋಗಿರುವ ಜನಕ್ಕೆ ಸರ್ಕಾರ ಮತ್ತೊಂದು ಹೊಡೆತ ನೀಡಿದೆ.

ಭಾರತೀಯ ರೈಲ್ವೆಯಿಂದ ಸುಮಾರು 12 ಲಕ್ಷ ರೈಲ್ವೆ ಸಿಬ್ಬಂದಿ ಜೀವನ ರೂಪಿಸಿಕೊಂಡಿದ್ದಾರೆ. ಇದೀಗ ಖಾಸಗಿ ರೈಲುಗಳ ಸಂಚಾರದಿಂದ ಮುಂದಿನ ವರ್ಷಗಳಲ್ಲಿ ಈ 12 ಲಕ್ಷ ನೌಕರರ ಜೀವನೋಪಾಯದ ಪ್ರಶ್ನೆ ಎದುರಾಗುತ್ತದೆ. ಹಲವು ವಲಯಗಳಲ್ಲಿ ಖಾಸಗೀಕರಣದಿಂದ ಸಾವಿರಾರು ಸರ್ಕಾರಿ ಉದ್ಯೋಗ ನಷ್ಟ ಆದ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇವೆ. ಇನ್ನು ಖಾಸಗಿ ಪ್ಯಾಸೆಂಜರ್ ರೈಲು ಓಡುವುದರಿಂದ ಮಾಸಿಕ ಪಾಸ್ ಸೇರಿದಂತೆ ಸರ್ಕಾರ ನೀಡುತ್ತಿದ್ದ ರಿಯಾಯ್ತಿ ಟಿಕೆಟ್‍ಗಳಿಗೆ ಕೂಡ ಕುತ್ತು ಬೀಳಲಿದೆ.

ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಲಿರುವ ಖಾಸಗಿ ರೈಲು ಸಂಚಾರ, ತದನಂತರ ರೈಲ್ವೆ ಇಲಾಖೆಯ ರೈಲುಗಳು ಸರಿಯಾದ ಸಮಯಕ್ಕೆ ದೊರಕದಿರುವುದು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಲಿದ್ದು (ಈಗ ಇರುವ ಸಣ್ಣ ಸಮಸ್ಯೆಗಳನ್ನು ಮಾಧ್ಯಮಗಳ ಮೂಲಕ ಬೃಹತ್ತಾಗಿ ಬಿಂಬಿಸಿ) ಪ್ರಯಾಣಿಕರು ಖಾಸಗಿ ರೈಲುಗಳಲ್ಲಿ ಸಂಚಾರ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಮಾಡಲಾಗುತ್ತದೆ. ಬಹುತೇಕ ಮಾರ್ಗಗಳಿಗೆ ಕೇವಲ ಖಾಸಗಿ ರೈಲುಗಳನ್ನು ಬಿಡುವ ಮೂಲಕ, ಪ್ರಯಾಣಿಕರಿಗೆ ಹೊರೆಯಾದರೂ ಖಾಸಗಿ ಬಂಡವಾಳದಾರರಿಗೆ ಅನುಕೂಲ ಮಾಡಿಕೊಡುವ ಸಂದರ್ಭ ಬರಬಹುದು. ಟಿಕೆಟ್ ದರ ನಿಗದಿ ಮಾಡಲು ಸರ್ವಸ್ವತಂತ್ರರು ಎಂದು ಈಗಾಗಲೇ ತಿಳಿಸಲಾಗಿದೆ. ಅಂದರೆ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಒಮ್ಮೆ ಜ್ಞಾಪಕ ಮಾಡಿಕೊಂಡರೆ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ ಎನ್ನುವ ಲೆಕ್ಕಾಚಾರ ಕಣ್ಣ ಮುಂದೆ ಹಾದು ಹೋಗುತ್ತದೆ.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ರೈಲು, ಬಡವರ ಸಂಚಾರಕ್ಕೆ ಹೇಳಿ ಮಾಡಿಸಿದ್ದ ಸಂಚಾರ ವ್ಯವಸ್ಥೆ. ಆದರೆ ಮುಂದಿನ ದಿನಗಳಲ್ಲಿ ಮಾಸಿಕ ಪಾಸ್ ಅಷ್ಟೇ ಅಲ್ಲ, ಬೇರೆ ಎಲ್ಲಾ ಸೌಲಭ್ಯಗಳಿಗೂ ಕತ್ತರಿ ಬೀಳಲಿದೆ. ಜೊತೆಗ ಖಾಸಗಿ ಬಸ್ ಲಾಬಿ ನಡೆಯುವ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಖಾಸಗಿ ರೈಲು ಕಂಪನಿಗಳ ಲಾಬಿ ನಡೆಯಲಿದೆ. 30 ವರ್ಷದ ತನಕ ಹೆದ್ದಾರಿಯನ್ನು ನಿರ್ವಹಣೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಂಡು ಜೀವನ ಪರ್ಯಂತ ಟೋಲ್ ಸಂಗ್ರಹಿಸುವ ಖಾಸಗಿ ಕಂಪನಿಗಳಂತೆಯೇ ಸುಲಿಗೆ ಮಾಡುವುದು ಶತಸಿದ್ಧ ಎನ್ನಬಹುದು.

ಇನ್ನು, ಕಡಿಮೆ ನಿರ್ವಹಣೆ, ಕಡಿಮೆ ಸಾಗಣೆ ಸಮಯ, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು, ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುವ ಸಲುವಾಗಿ ಖಾಸಗಿ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತ ಬಳಗದ ಉದ್ಯಮಿಗಳೇ ಸರ್ಕಾರ ಘೋಷಿಸಿರುವ ಈ ಬಿಡ್ಡಿಂಗ್ ಪಡೆಯುವ ಎಲ್ಲಾ ಸಾಧ್ಯತೆಗಳಿವೆ ಅಥವಾ ಆ ಬಿಡ್ಡಿಂಗ್‍ನಲ್ಲಿ ಬಿಜೆಪಿಗೆ ಆಪ್ತರಾಗಿರುವ ಉದ್ಯಮಿಗಳು ಷೇರು ಪಡೆಯುವ ಸಾಧ್ಯತೆಯೂ ಇದೆ. ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ವಿಶ್ವದರ್ಜೆ ರೈಲಿನಲ್ಲಿ ಸಂಚಾರ ಮಾಡಬಹುದು ಎಂದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಾಮಾನ್ಯ ಜನರ ಬದುಕು ಈಗಾಗಲೇ ಇರುವ ಸಮಸ್ಯೆಗಳೊಟ್ಟಿಗೆ ಇದೂ ಸೇರಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಬದುಕು ದುಬಾರಿಯಾಗುತ್ತದೆ.

ಇದನ್ನೂ ಓದಿ:ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಯಾವ ಕಾಲದಲ್ಲೂ ಪ್ರಭುತ್ವಗಳಿಗೆ ಜನಸಾಮಾನ್ಯರ ಚಿಂತೆ ಇದ್ದಂತಿಲ್ಲ. ಹಾಗಾಗಿಯೇ ತಾವು ವಿರೋಧ ಪಕ್ಷದಲ್ಲಿದ್ದಾಗ ಆಡಳಿತ ಪಕ್ಷ ಜಾರಿಗೆ ತರುವ ಕಾನೂನು-ಕಾಯ್ದೆಗಳ ಬಗ್ಗೆ ಅಸಹಕಾರ ತೋರಿ, ಪ್ರತಿಭಟಿಸುತ್ತಿದ್ದವರು, ತಾವು ಅಧಿಕಾರಕ್ಕೆ ಬಂದ ನಂತರ ಅದೇ ಕೆಲಸವನ್ನ ಇನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ. 15 ವರ್ಷಗಳ ಹಿಂದೆಯೇ ರೈಲ್ವೇ ಖಾಸಗೀಕರಣದ ಕೆಲಸ ನಡೆದಾಗ ಇದೇ ಬಿಜೆಪಿ ಪಕ್ಷ ವಿರೋಧಿಸಿತ್ತು. ಆದರೆ ಈಗ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದು ಗಾಯದ ಮೇಲೆ ಬರೆ ಎಳೆಯುತ್ತಿದೆ. ಅದರಲ್ಲೂ 2014 ರಿಂದ ಈಚೆಗೆ ಸರ್ಕಾರಿ ಒಡೆತನದ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಹೆಚ್ಚಾಗುತ್ತಲೇ ಇದೆ. ಇನ್ನೂ ಕಳವಳಕಾರಿಯಾದ ವಿಷಯವೆಂದರೆ ರೈಲ್ವೇ ಇಲಾಖೆಯಲ್ಲಿ ಈಗಾಗಲೇ ದುಡಿಯುತ್ತಿರುವವರಿಗೆ ಇದರ ಪರಿವೆಯೇ ಇಲ್ಲದಿರುವುದು. ಇಷ್ಟು ದೊಡ್ಡ ಮತ್ತು ಲಾಭದಾಯಕ ರೈಲ್ವೇ ಸೇವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವಾದರೂ ಏನು? ಇದರ ವಿರುದ್ಧ ಸಾಕಷ್ಟು ಹೋರಾಟಗಳೂ ನಡೆದಿವೆಯಾದರೂ ಅವು ದೇಶದಾದ್ಯಂತ ಸಂಘಟಿತವಾಗಿ ಆಗಿಲ್ಲ. ಎಲ್ಲಿಯವರೆಗೆ ದೇಶದ ಮತ್ತು ಸಾಮಾನ್ಯ ಜನರ ಸಮಸ್ಯೆ ನಮ್ಮದಲ್ಲ ಎಂದು ಈ ನಾಗರಿಕ ಸಮಾಜ ಸುಮ್ಮನಿರುತ್ತದೆಯೋ ಅಲ್ಲಿಯವರೆಗೂ ಇಂತಹ ದಬ್ಬಾಳಿಕೆಗಳಿಗೆ ಕೊನೆಯಿಲ್ಲ.

ಹಾಗಾಗಿ, ರೈಲ್ವೇ ಖಾಸಗೀಕರಣದ ವಿರುದ್ಧದ ಅಭಿಯಾನ ಸಮಿತಿಯೊಂದು ರಚನೆಯಾಗಿದ್ದು, ಆನ್‌ಲೈನ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ನಿಮ್ಮ ಸಮ್ಮತಿಯಿದ್ದರೆ, ನೀವೂ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬಹುದು.

ಇದರಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...