Homeಮುಖಪುಟಕೇರಳದಲ್ಲೀಗ ಕೇವಲ 16 ಕೊರೊನಾ ಸೋಂಕಿತರು: ಸಚಿವ ಥಾಮಸ್ ಐಸಾಕ್

ಕೇರಳದಲ್ಲೀಗ ಕೇವಲ 16 ಕೊರೊನಾ ಸೋಂಕಿತರು: ಸಚಿವ ಥಾಮಸ್ ಐಸಾಕ್

- Advertisement -
- Advertisement -

100 ದಿನಗಳ ನಂತರ ಕೇರಳವು ಕೊರೊನಾ ವೈರಸ್ ರೇಖೆ ಚಪ್ಪಟೆಯಾಗಿ ಹೋಗುತ್ತಿದೆ ಎಂದು ಕೇರಳ ರಾಜ್ಯ ಹಣಕಾಸು ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ. ಕೇರಳದಾದ್ಯಂತ ಆಸ್ಪತ್ರೆಗಳಲ್ಲಿ ಕೇವಲ 16 ಸಕ್ರಿಯ ಕೊರೊನಾ ಪ್ರಕರಣಗಳು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ವಿಶೇಷ ಕೊರೊನಾ ರಾಯಭಾರಿ ಡಾ. ಡೇವಿಡ್ ನಬರೋ ಜುಲೈ ಅಂತ್ಯದ ವೇಳೆಗೆ ಭಾರತದಲ್ಲಿ ಕೊರೊನಾ ವಕ್ರರೇಖೆ ಸಮತಟ್ಟಾಗುತ್ತದೆ ಎಂದು ಹೇಳಿದ ಕೆಲವೇ ಗಂಟೆಗಳ ಅಂರದಲ್ಲಿ ಕೇರಳ ಸಚಿವರು ಟ್ವೀಟ್ ಬಂದಿದೆ.

ಭಾರತದಲ್ಲಿ ಮೊದಲ ಮೂರು ಕೊರೊನಾ ವೈರಸ್ ಪ್ರಕರಣಗಳು ಕೇರಳದಿಂದ ವರದಿಯಾಗಿತ್ತು. ಕೇರಳದಿಂದ ಇದುವರೆಗೂ 503  ಪ್ರಕರಣಗಳನ್ನು ವರದಿಯಾಗಿದೆ, ಅದರಲ್ಲಿ 484 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೇವಲ ನಾಲ್ಕು ಸಾವುಗಳು ದಾಖಲಾಗಿವೆ.

ವಿಷೇಷವೆಂದರೆ ಈ ತಿಂಗಳ ಮೊದಲ ವಾರದಲ್ಲಿ ಕೇರಳದಲ್ಲಿ ಕೇವಲ ಐದು ಹೊಸ ಪ್ರಕರಣಗಳು ವರದಿಯಾಗಿದೆ.

ಸಚಿವ ಥಾಮಸ್ ಐಸಾಕ್ ಹಂಚಿಕೊಂಡ ಲೈನ್ ಗ್ರಾಫ್‌ನಲ್ಲಿ, ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಹಳದಿ ಬಣ್ಣದಲ್ಲಿ ತೋರಿಸಲಾಗಿದೆ ಮತ್ತು ಈ ರೇಖೆಯು ಏಪ್ರಿಲ್ 9 ರಿಂದ ಕೆಳಕ್ಕೆ ಇಳಿಯುತ್ತಿದೆ ಎಂದು ತೋರಿಸಲಾಗಿದೆ.

keralaflatteningcurve

ಇದಕ್ಕೆ ತದ್ವಿರುದ್ಧವಾಗಿ, ವೈರಸ್‌ನಿಂದ ಚೇತರಿಸಿಕೊಂಡ ಜನರನ್ನು ಪ್ರತಿನಿಧಿಸುವ ರೇಖೆ (ಹಸಿರು ಬಣ್ಣ) ಅದೇ ದಿನಾಂಕದಿಂದ ಸಮಾನವಾಗಿ ಮೇಲಕ್ಕೆ ಏರುತ್ತದೆ.

ಕೊರೊನಾ ವಿರುದ್ದ ಹೋರಾಡಲು ಕೇರಳವೂ ಶಂಕಿತ ಪ್ರಕರಣಗಳಿಗೆ 28 ​​ದಿನಗಳ ಸಂಪರ್ಕತಡೆಯ ಅವಧಿಯನ್ನು ನಿರ್ಧಾರ ಮಾಡಿತ್ತು; ರಾಷ್ಟ್ರವ್ಯಾಪಿ ಈ ಅವಧಿ 14 ದಿನಗಳಾಗಿದೆ. ಅಲ್ಲದೆ ಕಳೆದ ತಿಂಗಳು ದಕ್ಷಿಣ ಕೊರಿಯಾದಿಂದ ಪ್ರೇರಿತವಾಗಿ ಕೇರಳವು ಸಾಮೂಹಿಕ ಮಾದರಿಗಳನ್ನು ಸಂಗ್ರಹಿಸಲು ವಾಕ್-ಇನ್ ಕಿಯೋಸ್ಕ್ಗಳನ್ನು ಬಳಸಿದ ಮೊದಲ ರಾಜ್ಯವಾಗಿತ್ತು.

ದೇಶಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ 60,000 ಕ್ಕೆ ತಲುಪಿದ್ದು, ಸುಮಾರು 2,000 ಜನರು ಸಾವಿಗೀಡಾಗಿದ್ದಾರೆ. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಂತೆ ಕಳೆದ 24 ಗಂಟೆಗಳಲ್ಲಿ 3,320 ಹೊಸ ಪ್ರಕರಣಗಳು ಮತ್ತು 95 ಸಾವುಗಳು ವರದಿಯಾಗಿದೆ.


ಇದನ್ನೂ ಓದಿ: ಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ


ವಿಡಿಯೊ ನೋಡಿ: ಕಾರ್ಮಿಕರ ಬವಣೆ – ಮಾಧ್ಯಮಗಳ ಸಂಭ್ರಮ : ಕ್ರೋನಾಲಜಿ ಅರ್ಥ ಮಾಡಿಕೊಳ್ಳೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...