Homeಮುಖಪುಟಕೇರಳದಲ್ಲೀಗ ಕೇವಲ 16 ಕೊರೊನಾ ಸೋಂಕಿತರು: ಸಚಿವ ಥಾಮಸ್ ಐಸಾಕ್

ಕೇರಳದಲ್ಲೀಗ ಕೇವಲ 16 ಕೊರೊನಾ ಸೋಂಕಿತರು: ಸಚಿವ ಥಾಮಸ್ ಐಸಾಕ್

- Advertisement -
- Advertisement -

100 ದಿನಗಳ ನಂತರ ಕೇರಳವು ಕೊರೊನಾ ವೈರಸ್ ರೇಖೆ ಚಪ್ಪಟೆಯಾಗಿ ಹೋಗುತ್ತಿದೆ ಎಂದು ಕೇರಳ ರಾಜ್ಯ ಹಣಕಾಸು ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ. ಕೇರಳದಾದ್ಯಂತ ಆಸ್ಪತ್ರೆಗಳಲ್ಲಿ ಕೇವಲ 16 ಸಕ್ರಿಯ ಕೊರೊನಾ ಪ್ರಕರಣಗಳು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ವಿಶೇಷ ಕೊರೊನಾ ರಾಯಭಾರಿ ಡಾ. ಡೇವಿಡ್ ನಬರೋ ಜುಲೈ ಅಂತ್ಯದ ವೇಳೆಗೆ ಭಾರತದಲ್ಲಿ ಕೊರೊನಾ ವಕ್ರರೇಖೆ ಸಮತಟ್ಟಾಗುತ್ತದೆ ಎಂದು ಹೇಳಿದ ಕೆಲವೇ ಗಂಟೆಗಳ ಅಂರದಲ್ಲಿ ಕೇರಳ ಸಚಿವರು ಟ್ವೀಟ್ ಬಂದಿದೆ.

ಭಾರತದಲ್ಲಿ ಮೊದಲ ಮೂರು ಕೊರೊನಾ ವೈರಸ್ ಪ್ರಕರಣಗಳು ಕೇರಳದಿಂದ ವರದಿಯಾಗಿತ್ತು. ಕೇರಳದಿಂದ ಇದುವರೆಗೂ 503  ಪ್ರಕರಣಗಳನ್ನು ವರದಿಯಾಗಿದೆ, ಅದರಲ್ಲಿ 484 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೇವಲ ನಾಲ್ಕು ಸಾವುಗಳು ದಾಖಲಾಗಿವೆ.

ವಿಷೇಷವೆಂದರೆ ಈ ತಿಂಗಳ ಮೊದಲ ವಾರದಲ್ಲಿ ಕೇರಳದಲ್ಲಿ ಕೇವಲ ಐದು ಹೊಸ ಪ್ರಕರಣಗಳು ವರದಿಯಾಗಿದೆ.

ಸಚಿವ ಥಾಮಸ್ ಐಸಾಕ್ ಹಂಚಿಕೊಂಡ ಲೈನ್ ಗ್ರಾಫ್‌ನಲ್ಲಿ, ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಹಳದಿ ಬಣ್ಣದಲ್ಲಿ ತೋರಿಸಲಾಗಿದೆ ಮತ್ತು ಈ ರೇಖೆಯು ಏಪ್ರಿಲ್ 9 ರಿಂದ ಕೆಳಕ್ಕೆ ಇಳಿಯುತ್ತಿದೆ ಎಂದು ತೋರಿಸಲಾಗಿದೆ.

keralaflatteningcurve

ಇದಕ್ಕೆ ತದ್ವಿರುದ್ಧವಾಗಿ, ವೈರಸ್‌ನಿಂದ ಚೇತರಿಸಿಕೊಂಡ ಜನರನ್ನು ಪ್ರತಿನಿಧಿಸುವ ರೇಖೆ (ಹಸಿರು ಬಣ್ಣ) ಅದೇ ದಿನಾಂಕದಿಂದ ಸಮಾನವಾಗಿ ಮೇಲಕ್ಕೆ ಏರುತ್ತದೆ.

ಕೊರೊನಾ ವಿರುದ್ದ ಹೋರಾಡಲು ಕೇರಳವೂ ಶಂಕಿತ ಪ್ರಕರಣಗಳಿಗೆ 28 ​​ದಿನಗಳ ಸಂಪರ್ಕತಡೆಯ ಅವಧಿಯನ್ನು ನಿರ್ಧಾರ ಮಾಡಿತ್ತು; ರಾಷ್ಟ್ರವ್ಯಾಪಿ ಈ ಅವಧಿ 14 ದಿನಗಳಾಗಿದೆ. ಅಲ್ಲದೆ ಕಳೆದ ತಿಂಗಳು ದಕ್ಷಿಣ ಕೊರಿಯಾದಿಂದ ಪ್ರೇರಿತವಾಗಿ ಕೇರಳವು ಸಾಮೂಹಿಕ ಮಾದರಿಗಳನ್ನು ಸಂಗ್ರಹಿಸಲು ವಾಕ್-ಇನ್ ಕಿಯೋಸ್ಕ್ಗಳನ್ನು ಬಳಸಿದ ಮೊದಲ ರಾಜ್ಯವಾಗಿತ್ತು.

ದೇಶಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ 60,000 ಕ್ಕೆ ತಲುಪಿದ್ದು, ಸುಮಾರು 2,000 ಜನರು ಸಾವಿಗೀಡಾಗಿದ್ದಾರೆ. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಂತೆ ಕಳೆದ 24 ಗಂಟೆಗಳಲ್ಲಿ 3,320 ಹೊಸ ಪ್ರಕರಣಗಳು ಮತ್ತು 95 ಸಾವುಗಳು ವರದಿಯಾಗಿದೆ.


ಇದನ್ನೂ ಓದಿ: ಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ


ವಿಡಿಯೊ ನೋಡಿ: ಕಾರ್ಮಿಕರ ಬವಣೆ – ಮಾಧ್ಯಮಗಳ ಸಂಭ್ರಮ : ಕ್ರೋನಾಲಜಿ ಅರ್ಥ ಮಾಡಿಕೊಳ್ಳೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...