Homeಮುಖಪುಟಕೇರಳದಲ್ಲೀಗ ಕೇವಲ 16 ಕೊರೊನಾ ಸೋಂಕಿತರು: ಸಚಿವ ಥಾಮಸ್ ಐಸಾಕ್

ಕೇರಳದಲ್ಲೀಗ ಕೇವಲ 16 ಕೊರೊನಾ ಸೋಂಕಿತರು: ಸಚಿವ ಥಾಮಸ್ ಐಸಾಕ್

- Advertisement -
- Advertisement -

100 ದಿನಗಳ ನಂತರ ಕೇರಳವು ಕೊರೊನಾ ವೈರಸ್ ರೇಖೆ ಚಪ್ಪಟೆಯಾಗಿ ಹೋಗುತ್ತಿದೆ ಎಂದು ಕೇರಳ ರಾಜ್ಯ ಹಣಕಾಸು ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ. ಕೇರಳದಾದ್ಯಂತ ಆಸ್ಪತ್ರೆಗಳಲ್ಲಿ ಕೇವಲ 16 ಸಕ್ರಿಯ ಕೊರೊನಾ ಪ್ರಕರಣಗಳು ಮಾತ್ರ ಇದೆ ಎಂದು ಅವರು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ವಿಶೇಷ ಕೊರೊನಾ ರಾಯಭಾರಿ ಡಾ. ಡೇವಿಡ್ ನಬರೋ ಜುಲೈ ಅಂತ್ಯದ ವೇಳೆಗೆ ಭಾರತದಲ್ಲಿ ಕೊರೊನಾ ವಕ್ರರೇಖೆ ಸಮತಟ್ಟಾಗುತ್ತದೆ ಎಂದು ಹೇಳಿದ ಕೆಲವೇ ಗಂಟೆಗಳ ಅಂರದಲ್ಲಿ ಕೇರಳ ಸಚಿವರು ಟ್ವೀಟ್ ಬಂದಿದೆ.

ಭಾರತದಲ್ಲಿ ಮೊದಲ ಮೂರು ಕೊರೊನಾ ವೈರಸ್ ಪ್ರಕರಣಗಳು ಕೇರಳದಿಂದ ವರದಿಯಾಗಿತ್ತು. ಕೇರಳದಿಂದ ಇದುವರೆಗೂ 503  ಪ್ರಕರಣಗಳನ್ನು ವರದಿಯಾಗಿದೆ, ಅದರಲ್ಲಿ 484 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೇವಲ ನಾಲ್ಕು ಸಾವುಗಳು ದಾಖಲಾಗಿವೆ.

ವಿಷೇಷವೆಂದರೆ ಈ ತಿಂಗಳ ಮೊದಲ ವಾರದಲ್ಲಿ ಕೇರಳದಲ್ಲಿ ಕೇವಲ ಐದು ಹೊಸ ಪ್ರಕರಣಗಳು ವರದಿಯಾಗಿದೆ.

ಸಚಿವ ಥಾಮಸ್ ಐಸಾಕ್ ಹಂಚಿಕೊಂಡ ಲೈನ್ ಗ್ರಾಫ್‌ನಲ್ಲಿ, ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಹಳದಿ ಬಣ್ಣದಲ್ಲಿ ತೋರಿಸಲಾಗಿದೆ ಮತ್ತು ಈ ರೇಖೆಯು ಏಪ್ರಿಲ್ 9 ರಿಂದ ಕೆಳಕ್ಕೆ ಇಳಿಯುತ್ತಿದೆ ಎಂದು ತೋರಿಸಲಾಗಿದೆ.

keralaflatteningcurve

ಇದಕ್ಕೆ ತದ್ವಿರುದ್ಧವಾಗಿ, ವೈರಸ್‌ನಿಂದ ಚೇತರಿಸಿಕೊಂಡ ಜನರನ್ನು ಪ್ರತಿನಿಧಿಸುವ ರೇಖೆ (ಹಸಿರು ಬಣ್ಣ) ಅದೇ ದಿನಾಂಕದಿಂದ ಸಮಾನವಾಗಿ ಮೇಲಕ್ಕೆ ಏರುತ್ತದೆ.

ಕೊರೊನಾ ವಿರುದ್ದ ಹೋರಾಡಲು ಕೇರಳವೂ ಶಂಕಿತ ಪ್ರಕರಣಗಳಿಗೆ 28 ​​ದಿನಗಳ ಸಂಪರ್ಕತಡೆಯ ಅವಧಿಯನ್ನು ನಿರ್ಧಾರ ಮಾಡಿತ್ತು; ರಾಷ್ಟ್ರವ್ಯಾಪಿ ಈ ಅವಧಿ 14 ದಿನಗಳಾಗಿದೆ. ಅಲ್ಲದೆ ಕಳೆದ ತಿಂಗಳು ದಕ್ಷಿಣ ಕೊರಿಯಾದಿಂದ ಪ್ರೇರಿತವಾಗಿ ಕೇರಳವು ಸಾಮೂಹಿಕ ಮಾದರಿಗಳನ್ನು ಸಂಗ್ರಹಿಸಲು ವಾಕ್-ಇನ್ ಕಿಯೋಸ್ಕ್ಗಳನ್ನು ಬಳಸಿದ ಮೊದಲ ರಾಜ್ಯವಾಗಿತ್ತು.

ದೇಶಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ 60,000 ಕ್ಕೆ ತಲುಪಿದ್ದು, ಸುಮಾರು 2,000 ಜನರು ಸಾವಿಗೀಡಾಗಿದ್ದಾರೆ. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಂತೆ ಕಳೆದ 24 ಗಂಟೆಗಳಲ್ಲಿ 3,320 ಹೊಸ ಪ್ರಕರಣಗಳು ಮತ್ತು 95 ಸಾವುಗಳು ವರದಿಯಾಗಿದೆ.


ಇದನ್ನೂ ಓದಿ: ಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ


ವಿಡಿಯೊ ನೋಡಿ: ಕಾರ್ಮಿಕರ ಬವಣೆ – ಮಾಧ್ಯಮಗಳ ಸಂಭ್ರಮ : ಕ್ರೋನಾಲಜಿ ಅರ್ಥ ಮಾಡಿಕೊಳ್ಳೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...