Homeಮುಖಪುಟಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆಗೆ 20 ಜನರಿಗಷ್ಟೇ ಅವಕಾಶ: ಕೇಂದ್ರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆಗೆ 20 ಜನರಿಗಷ್ಟೇ ಅವಕಾಶ: ಕೇಂದ್ರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ರಂಜಾನ್ ಸಮಯದಲ್ಲಿ ದೆಹಲಿಯ ನಿಜಾಮುದ್ದೀನ್ ಮರ್ಕಾಜ್‌ನಲ್ಲಿ ಪ್ರಾರ್ಥನೆಗೆ (ನಮಾಜ್) ಅವಕಾಶ ನೀಡಲು ಒಪ್ಪಿದ ಒಂದು ದಿನದ ನಂತರ ಕೇಂದ್ರ ಸರ್ಕಾರವು, ರಾಜಧಾನಿಯಲ್ಲಿ ಹೊಸ ವಿಪತ್ತು ನಿರ್ವಹಣಾ ನಿಯಮಗಳ ಅಡಿಯಲ್ಲಿ ಎಲ್ಲಾ ಧಾರ್ಮಿಕ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣವು ದಕ್ಷಿಣ ದೆಹಲಿಯ ನಿಜಾಮುದ್ದೀನ್‌ನಲ್ಲಿರುವ ಮಸೀದಿ ಬಂಗ್ಲೆ ವಾಲಿಯನ್ನು ಒಳಗೊಂಡಿದೆ. ಕಳೆದ ವರ್ಷ ಭಾರತದಲ್ಲಿ ಕೊವಿಡ್ ಪ್ರಕರಣಗಳು ದಾಖಲಾಗಲು ಪ್ರಾರಂಭವಾದ ಸಮಯದಲ್ಲಿ ನಡೆದ ತಬ್ಲಿಘಿ ಜಮಾಅತ್ ಪಂಥದ ಸಮಾವೇಶದ ವಿರುದ್ಧ ಪ್ರಕರಣ ದಾಖಲಾದ ನಂತರ ಕಳೆದ ಮಾರ್ಚ್‌ನಿಂದ ಇದನ್ನು ಮುಚ್ಚಲಾಗಿದೆ.

ಮರ್ಕಾಜ್ ಒಳಗೆ ಜನರು ಪ್ರಾರ್ಥನೆ ಮಾಡಲು ಅವಕಾಶ ನೀಡುವಂತೆ ನಿರ್ಬಂಧಗಳನ್ನು ಸರಾಗಗೊಳಿಸುವಂತೆ ಕೋರಿ ದೆಹಲಿ ವಕ್ಫ್ ಮಂಡಳಿಯು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.
ಪೊಲೀಸರು ಪರಿಶೀಲಿಸಿದ 200 ಜನರ ಪಟ್ಟಿಯಿಂದ ಒಂದು ಬಾರಿಗೆ ಕೇವಲ 20 ಜನರಿಗೆ ಮಾತ್ರ ಪ್ರಾರ್ಥನೆಗೆ ಅವಕಾಶ ನೀಡಬಹುದು ಎಂಬ ಕೇಂದ್ರದ ಹೇಳಿಕೆಗೆ ಸೋಮವಾರ ನ್ಯಾಯಾಲಯ ತೀವ್ರವಾಗಿ ಪ್ರತಿಕ್ರಿಯಿಸಿತ್ತು.

ಹರಿದ್ವಾರದ ಕುಂಭಮೇಳದಲ್ಲಿ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಲಕ್ಷಾಂತರ ಜನರು ಸೇರಿರುವುದನ್ನು ಪ್ರಸ್ತಾಪಿಸಿದ ಹೈಕೋರ್ಟ್, “ನಿಮ್ಮ ಅಧಿಸೂಚನೆಗಳಲ್ಲಿ, ಧಾರ್ಮಿಕ ಸ್ಥಳ ಕುರಿತಂತೆ ಒಂದು ಬಾರಿಗೆ 20 ಜನರಿಗೆ ಮೊಟಕುಗೊಳಿಸಿದ್ದೀರಾ” ಎಂದು ಇಂದು ಪ್ರಶ್ನಿಸಿದೆ.

ಎಲ್ಲಾ ಧಾರ್ಮಿಕ, ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಮತ್ತು ಕ್ರೀಡಾಕೂಟಗಳನ್ನು ನಿಷೇಧಿಸುವ ಹೊಸ ನಿಲುವನ್ನು ಅಫಿಡವಿಟ್‌ನಲ್ಲಿ ತಿಳಿಸಲು ನ್ಯಾಯಾಲಯ ಕೇಂದ್ರವನ್ನು ಕೇಳಿದೆ.

200 ಜನರ ಪಟ್ಟಿಯನ್ನು ರೂಪಿಸುವುದು ಕಷ್ಟ ಎಂದು ದೆಹಲಿ ವಕ್ಫ್ ಮಂಡಳಿ ನ್ಯಾಯಾಲಯಕ್ಕೆ ತಿಳಿಸಿತ್ತು.
ಬೇರೆ ಯಾವುದೇ ಧಾರ್ಮಿಕ ಪೂಜಾ ಸ್ಥಳಗಳಿಗೆ ನಿರ್ಬಂಧ ಇಲ್ಲದಿರುವಾಗ ಮಸೀದಿಗೆ ಇಷ್ಟೇ ಜನ ಪ್ರವೇಶ ಮಾಡಬೇಕು ಎಂದು ನಿಗದಿ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನಿನ್ನೆ, ಕೇಂದ್ರವು ತನ್ನ ವಾದವನ್ನು ಬದಲಾಯಿಸಿ ಯು-ಟರ್ನ್ ತೆಗೆದುಕೊಂಡಿತ್ತು ಮತ್ತು ಎಲ್ಲಾ ಧಾರ್ಮಿಕ ಸಭೆಗಳನ್ನು ನಿಲ್ಲಿಸುವ ದೆಹಲಿ ವಿಪತ್ತು ನಿರ್ವಹಣಾ ಕಾಯ್ದೆಯ ಮಾರ್ಗಸೂಚಿಗಳನ್ನು ಉಲ್ಲೇಖಿಸಿತ್ತು. ಈ ನಿಯಮಗಳು ದೆಹಲಿಗೆ ಮಾತ್ರ ಅನ್ವಯಿಸುತ್ತವೆ.


ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...