Homeಮುಖಪುಟಕೆಂಪುಕೋಟೆ: ಸ್ವಾತಂತ್ರೋತ್ಸವಕ್ಕೆ 250 ಗಣ್ಯರಿಗೆ ಮಾತ್ರ ಅವಕಾಶ

ಕೆಂಪುಕೋಟೆ: ಸ್ವಾತಂತ್ರೋತ್ಸವಕ್ಕೆ 250 ಗಣ್ಯರಿಗೆ ಮಾತ್ರ ಅವಕಾಶ

ಕೊರೊನಾ ಸಾಂಕ್ರಮಿಕದಿಂದಾಗಿ ಹಲವು ನಿಬಂಧನೆಗಳ ಮೇರೆಗೆ 74 ನೇ ಸ್ವಾತಂತ್ರೋತ್ಸವ ನಡೆಯಲಿದೆ.

- Advertisement -
- Advertisement -

ಕೆಂಪು ಕೋಟೆಯಲ್ಲಿ ನಡೆಯುವ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೇವಲ 250 ಗಣ್ಯರಿಗೆ ಮಾತ್ರ ಭಾಗವಹಿಸಿವ ಅವಕಾಶವಿದ್ದು, ಇದುವರೆಗೆ ಆಹ್ವಾನಿತರ ಪಟ್ಟಿಯಲ್ಲಿ 900-1,000 ಜನ ಇರುತ್ತಿದ್ದರು.

ಕೊರೊನಾ ಸಾಂಕ್ರಾಮಿಕದಿಂದಾಗಿ ಈ ಬದಲಾವಣೆಯಾಗಿದೆ ಎನ್ನಲಾಗಿದೆ.

ಇಂತಹ ಹಲವು ನಿಬಂಧನೆಗಳ ಮೇರೆಗೆ 74 ನೇ ಸ್ವಾತಂತ್ರೋತ್ಸವ ನಡೆಯಲಿದೆ. ಜಗತ್ತಿಗೆ ಆವರಿಸಿರುವ ಕೊರೊನ ಸಾಂಕ್ರಾಮಿಕವೇ ಇದಕ್ಕೆ ಪ್ರಮುಖ ಕಾರಣವಾಗಿದ್ದು. ಹಾಗಾಗಿ ಈ ಉತ್ಸವದಲ್ಲಿ ಶಾಲಾಮಕ್ಕಳು ಭಾಗವಹಿಸಲು ಅವಕಾಶವಿಲ್ಲ. ಪೋಲೀಸ್ ಮತ್ತು ಇತರೆ ಸಿಬ್ಬಂದಿಗಳು ಪಿಪಿಇ ಧರಿಸಿರಬೇಕು. ಅಲ್ಲದೆ ಗಣ್ಯರು ಕೂರುವ ಆಸನಗಳನ್ನು ಸಾಮಾಜಿಕ ಅಂತರದೊಟ್ಟಿಗೆ ಬೇರೆ ಬೇರೆ ಸ್ಥಳಗಳಲ್ಲಿ ಹಾಕಲು ನಿಯೋಜಿಸಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಭೆಯಲ್ಲಿ, ಆಚರಣೆಗೆ ಕೊರೊನಾ ವಾರಿಯರ್‍ಸ್ ಗಳನ್ನು ಗಮನದಲ್ಲಿಟ್ಟುಕೊಂಡು, ಅವರನ್ನೇ ಅತಿಥಿಗಳಾಗಿ ಆಹ್ವಾನಿಸುವ ಸಾದ್ಯತೆಯಿದೆ ಎಂದು ತಿಳಿದು ಬಂದಿದೆ.

ಪ್ರತಿ ವರ್ಷವೂ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡುವಾಗ 900-1,000 ಜನ ಇರುತ್ತಿದ್ದರು. ಆದರೆ ಈ ವರ್ಷ ಕೇವಲ 250 ಜನರಷ್ಟೇ ಇರಲಿದ್ದಾರೆ ಎಂದು ಭಾರತೀಯ ಪುರಾತತ್ವ ಇಲಾಖೆ ಹೇಳಿದೆ. ಹಾಗೆಯೇ ಈ ವರ್ಷದ ಅತಿಥಿಗಳ ಪಟ್ಟಿಯನ್ನು ರಕ್ಷಣಾ ಸಚಿವಾಲಯ ಸಿದ್ಧಪಡಿಸುತ್ತದೆ ಎಂದು ತಿಳಿಸಿದರು.

“ಈ ವರ್ಷ, ಎನ್‌ಸಿಸಿ ಕೆಡೆಟ್‌ಗಳನ್ನು ಹೊರತುಪಡಿಸಿ ಮಕ್ಕಳು ಭಾಗವಹಿಸುವುದಿಲ್ಲ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗುವುದು. ಸಿಬ್ಬಂದಿಗಳು ಪಿಪಿಇ ಕಿಟ್‌ಗಳಲ್ಲಿರುತ್ತಾರೆ. ಹಾಗೆಯೇ ಹಲವಾರು ನೈರ್ಮಲ್ಯೀಕರಣ ಕೇಂದ್ರಗಳು ಇರುತ್ತವೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಮೋನಿಕಾ ಭರದ್ವಾಜ್ ಹೇಳಿದರು.

ಇದರ ಕಾರ್ಯರೂಪವನ್ನು ಅಂತಿಮಗೊಳಿಸಲಾಗುವುದು. ಆದರೆ ಇದು ಆಗಸ್ಟ್ ಮಧ್ಯದಲ್ಲಿ ಕೊರೊನಾ ಮತ್ತು ಸ್ಥಳದ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ.

ದಿನಾಚರಣೆಯ ಕಾರಣದಿಂದ ಆಗಸ್ಟ್ 1 ರಿಂದ ಕೆಂಪು ಕೋಟೆಯನ್ನು ಸಾರ್ವಜನಿಕರಿಗೆ ನಿರ್ಭಂದಿಸಲಾಗುತ್ತದೆ. ಇದಕ್ಕೂ ಮೊದಲು ಆಗಸ್ಟ್ 7 ರವರೆಗೆ ಇದು ತೆರೆದಿರುತ್ತಿತ್ತು ಎಂದು ಸಭೆಯಲ್ಲಿ ಭಾಗಿಯಾಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: ಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...