Homeಮುಖಪುಟಕೆಂಪುಕೋಟೆ: ಸ್ವಾತಂತ್ರೋತ್ಸವಕ್ಕೆ 250 ಗಣ್ಯರಿಗೆ ಮಾತ್ರ ಅವಕಾಶ

ಕೆಂಪುಕೋಟೆ: ಸ್ವಾತಂತ್ರೋತ್ಸವಕ್ಕೆ 250 ಗಣ್ಯರಿಗೆ ಮಾತ್ರ ಅವಕಾಶ

ಕೊರೊನಾ ಸಾಂಕ್ರಮಿಕದಿಂದಾಗಿ ಹಲವು ನಿಬಂಧನೆಗಳ ಮೇರೆಗೆ 74 ನೇ ಸ್ವಾತಂತ್ರೋತ್ಸವ ನಡೆಯಲಿದೆ.

- Advertisement -
- Advertisement -

ಕೆಂಪು ಕೋಟೆಯಲ್ಲಿ ನಡೆಯುವ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೇವಲ 250 ಗಣ್ಯರಿಗೆ ಮಾತ್ರ ಭಾಗವಹಿಸಿವ ಅವಕಾಶವಿದ್ದು, ಇದುವರೆಗೆ ಆಹ್ವಾನಿತರ ಪಟ್ಟಿಯಲ್ಲಿ 900-1,000 ಜನ ಇರುತ್ತಿದ್ದರು.

ಕೊರೊನಾ ಸಾಂಕ್ರಾಮಿಕದಿಂದಾಗಿ ಈ ಬದಲಾವಣೆಯಾಗಿದೆ ಎನ್ನಲಾಗಿದೆ.

ಇಂತಹ ಹಲವು ನಿಬಂಧನೆಗಳ ಮೇರೆಗೆ 74 ನೇ ಸ್ವಾತಂತ್ರೋತ್ಸವ ನಡೆಯಲಿದೆ. ಜಗತ್ತಿಗೆ ಆವರಿಸಿರುವ ಕೊರೊನ ಸಾಂಕ್ರಾಮಿಕವೇ ಇದಕ್ಕೆ ಪ್ರಮುಖ ಕಾರಣವಾಗಿದ್ದು. ಹಾಗಾಗಿ ಈ ಉತ್ಸವದಲ್ಲಿ ಶಾಲಾಮಕ್ಕಳು ಭಾಗವಹಿಸಲು ಅವಕಾಶವಿಲ್ಲ. ಪೋಲೀಸ್ ಮತ್ತು ಇತರೆ ಸಿಬ್ಬಂದಿಗಳು ಪಿಪಿಇ ಧರಿಸಿರಬೇಕು. ಅಲ್ಲದೆ ಗಣ್ಯರು ಕೂರುವ ಆಸನಗಳನ್ನು ಸಾಮಾಜಿಕ ಅಂತರದೊಟ್ಟಿಗೆ ಬೇರೆ ಬೇರೆ ಸ್ಥಳಗಳಲ್ಲಿ ಹಾಕಲು ನಿಯೋಜಿಸಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಭೆಯಲ್ಲಿ, ಆಚರಣೆಗೆ ಕೊರೊನಾ ವಾರಿಯರ್‍ಸ್ ಗಳನ್ನು ಗಮನದಲ್ಲಿಟ್ಟುಕೊಂಡು, ಅವರನ್ನೇ ಅತಿಥಿಗಳಾಗಿ ಆಹ್ವಾನಿಸುವ ಸಾದ್ಯತೆಯಿದೆ ಎಂದು ತಿಳಿದು ಬಂದಿದೆ.

ಪ್ರತಿ ವರ್ಷವೂ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡುವಾಗ 900-1,000 ಜನ ಇರುತ್ತಿದ್ದರು. ಆದರೆ ಈ ವರ್ಷ ಕೇವಲ 250 ಜನರಷ್ಟೇ ಇರಲಿದ್ದಾರೆ ಎಂದು ಭಾರತೀಯ ಪುರಾತತ್ವ ಇಲಾಖೆ ಹೇಳಿದೆ. ಹಾಗೆಯೇ ಈ ವರ್ಷದ ಅತಿಥಿಗಳ ಪಟ್ಟಿಯನ್ನು ರಕ್ಷಣಾ ಸಚಿವಾಲಯ ಸಿದ್ಧಪಡಿಸುತ್ತದೆ ಎಂದು ತಿಳಿಸಿದರು.

“ಈ ವರ್ಷ, ಎನ್‌ಸಿಸಿ ಕೆಡೆಟ್‌ಗಳನ್ನು ಹೊರತುಪಡಿಸಿ ಮಕ್ಕಳು ಭಾಗವಹಿಸುವುದಿಲ್ಲ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗುವುದು. ಸಿಬ್ಬಂದಿಗಳು ಪಿಪಿಇ ಕಿಟ್‌ಗಳಲ್ಲಿರುತ್ತಾರೆ. ಹಾಗೆಯೇ ಹಲವಾರು ನೈರ್ಮಲ್ಯೀಕರಣ ಕೇಂದ್ರಗಳು ಇರುತ್ತವೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಮೋನಿಕಾ ಭರದ್ವಾಜ್ ಹೇಳಿದರು.

ಇದರ ಕಾರ್ಯರೂಪವನ್ನು ಅಂತಿಮಗೊಳಿಸಲಾಗುವುದು. ಆದರೆ ಇದು ಆಗಸ್ಟ್ ಮಧ್ಯದಲ್ಲಿ ಕೊರೊನಾ ಮತ್ತು ಸ್ಥಳದ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ.

ದಿನಾಚರಣೆಯ ಕಾರಣದಿಂದ ಆಗಸ್ಟ್ 1 ರಿಂದ ಕೆಂಪು ಕೋಟೆಯನ್ನು ಸಾರ್ವಜನಿಕರಿಗೆ ನಿರ್ಭಂದಿಸಲಾಗುತ್ತದೆ. ಇದಕ್ಕೂ ಮೊದಲು ಆಗಸ್ಟ್ 7 ರವರೆಗೆ ಇದು ತೆರೆದಿರುತ್ತಿತ್ತು ಎಂದು ಸಭೆಯಲ್ಲಿ ಭಾಗಿಯಾಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: ಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...