Homeಮುಖಪುಟಕೋಮು ಸಂಬಂಧಗಳ ಸುಧಾರಣೆ, ಉತ್ತಮ ಉದ್ಯೋಗದ ಭರವಸೆ ಕಳೆದುಕೊಂಡ ಭಾರತೀಯರು: ಸಮೀಕ್ಷಾ ವರದಿ

ಕೋಮು ಸಂಬಂಧಗಳ ಸುಧಾರಣೆ, ಉತ್ತಮ ಉದ್ಯೋಗದ ಭರವಸೆ ಕಳೆದುಕೊಂಡ ಭಾರತೀಯರು: ಸಮೀಕ್ಷಾ ವರದಿ

- Advertisement -
- Advertisement -

ಭಾರತದಲ್ಲಿ ಹಿಂದೂ- ಮುಸ್ಲಿಂ ಕೋಮು ಸಂಬಂಧಗಳ ಸುಧಾರಣೆ, ಉತ್ತಮ ಉದ್ಯೋಗಗಳ ಭರವಸೆ ಜನರಲ್ಲಿ ಕಡಿಮೆಯಾಗಿದೆ ಎನ್ನುವುದನ್ನು ಸಮೀಕ್ಷೆಯೊಂದು ಬಹಿರಂಗಪಡಿಸಿದೆ.

ಮುಂಬರುವ ಐದು ವರ್ಷಗಳಲ್ಲಿ ಕೋಮು ಸಂಬಂಧಗಳಲ್ಲಿ ಸುಧಾರಣೆ ನಿರೀಕ್ಷಿಸಲಾಗಿದೆ ಎಂದು ಕೇವಲ 31% ದಷ್ಟು ಜನರು ಮಾತ್ರ ನಿರೀಕ್ಷೆಯನ್ನು ಹೊಂದಿದ್ದು, 43%ದಷ್ಟು ಜನರು 2029ರವರೆಗೆ ಯುವ ಭಾರತೀಯರು ಉತ್ತಮ ಉದ್ಯೋಗಗಳ ಭರವಸೆಯನ್ನು ಕಳೆದುಕೊಂಡಿದ್ದಾರೆ ಎಂದು YouGov-Mint-CPR ಸಮೀಕ್ಷೆ ಬಹಿರಂಗಪಡಿಸಿದೆ.

ಡಿಸೆಂಬರ್‌ನಲ್ಲಿ ನಡೆಸಲಾದ YouGov-Mint-CPR ಮಿಲೇನಿಯಲ್ ಸಮೀಕ್ಷೆಯ ಪ್ರಕಾರ, 79% ನಗರ ಭಾರತೀಯರು ಈ ಬಾರಿ ಮತ ಚಲಾಯಿಸಲು ಉದ್ದೇಶಿಸಿದ್ದಾರೆ. 1996ರ ನಂತರ ಜನಿಸಿದವರು ಈ ವರ್ಷ ಮತದಾನ ಮಾಡುವ ಸಾಧ್ಯತೆ ಕಡಿಮೆ ಎಂದು ಸಮೀಕ್ಷೆಯು ಉಲ್ಲೇಖಿಸಿದೆ. ಮುಂದಿನ ಐದು ವರ್ಷಗಳಲ್ಲಿ ದೇಶ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಪರಿಹಾರದ ಬಗ್ಗೆ ಕೇಳಿದಾಗ ಸಮಸ್ಯೆಗಳ ಪರಿಹಾರದ ಕುರಿತು ನಂಬಿಕೆಯ ಕೊರತೆ ಇರುವುದನ್ನು ಸಮೀಕ್ಷೆಯು ಬಹಿರಂಗಪಡಿಸುತ್ತದೆ.

ಮುಂಬರುವ ಐದು ವರ್ಷಗಳಲ್ಲಿ ಕೋಮು ಸಂಬಂಧಗಳಲ್ಲಿ ಸುಧಾರಣೆಯನ್ನು ನಿರೀಕ್ಷಿಸಲಾಗಿದೆ ಎಂದು ಪ್ರತಿಕ್ರಿಯಿಸಿದವರಲ್ಲಿ 31%ಕ್ಕಿಂತ ಹೆಚ್ಚಿಲ್ಲ, ಕೇವಲ 38% ಜನರು ಬಡತನದ ಮಟ್ಟವನ್ನು ಕಡಿಮೆಯಾಗಬಹುದೆಂಬ ಆಶಾಭಾವನೆ ಹೊಂದಿದ್ದಾರೆ. 43% ಜನರು 2029ರವರೆಗೆ ಯುವ ಭಾರತೀಯರು ಉತ್ತಮ ಉದ್ಯೋಗ ಪಡೆಯುತ್ತಾರೆ ಎಂಬ ಬಗ್ಗೆ ಭರವಸೆಯನ್ನು ಹೊಂದಿಲ್ಲ. 48% ಜನರು 2029ರ ವೇಳೆಗೆ ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳ ಪಟ್ಟಿಗೆ ಸೇರಲಿದೆ ಎಂಬ ನಿರೀಕ್ಷೆಯನ್ನು ಹೊಂದಿದ್ದಾರೆ.

ಈ ಸಮೀಕ್ಷೆಯಲ್ಲಿ 200ಕ್ಕೂ ಹೆಚ್ಚು ನಗರಗಳು ಮತ್ತು ಪಟ್ಟಣಗಳ 12,544 ಜನರು ಭಾಗವಹಿಸಿದ್ದರು. ಗಮನಾರ್ಹವಾಗಿ, ಸರಿಸುಮಾರು 84% ಪ್ರತಿಕ್ರಿಯಿಸಿದವರು ಯುವಜನರಾಗಿದ್ದಾರೆ. ಸಮೀಕ್ಷೆಯ ಪ್ರಕಾರ, ಮುಂದಿನ ಐದು ವರ್ಷಗಳಲ್ಲಿ ಹಿಂದೂ-ಮುಸ್ಲಿಂ ಸಂಬಂಧಗಳು ಉತ್ತಮಗೊಳ್ಳುತ್ತವೆ ಎಂದು ಕೇವಲ 31% ಜನರು ಹೇಳಿದ್ದಾರೆ. 38% ಮಂದಿ ಪ್ರತಿಕ್ರಿಯಿಸಿದವರಲ್ಲಿ ಮುಂದಿನ ಐದು ವರ್ಷಗಳಲ್ಲಿ ಬಡತನದ ಮಟ್ಟ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಮತದಾನದಲ್ಲಿ ಯಾರು ಗೆದ್ದರೂ ಮುಂದಿನ ಐದು ವರ್ಷಗಳಲ್ಲಿ ಯುವ ಭಾರತೀಯರಿಗೆ ಉತ್ತಮ ಭವಿಷ್ಯವನ್ನು 43% ಜನರು ನಿರೀಕ್ಷಿಸುತ್ತಾರೆ. ನಿರುದ್ಯೋಗವು ಸಮಸ್ಯೆಯಾಗಿದೆ, 49% ಪ್ರತಿಕ್ರಿಯಿಸಿದವರು ಇದನ್ನು ಮೊದಲ ಮೂರು ಸ್ಥಾನಗಳಲ್ಲಿ ಹೆಸರಿಸಿದ್ದಾರೆ, ಹೆಚ್ಚು ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ನಿರುದ್ಯೋಗ ದೊಡ್ಡ ಸಮಸ್ಯೆ ಎಂದು ಉಲ್ಲೇಖಿಸಿದ್ದಾರೆ.

ಬೆಲೆ ಏರಿಕೆ ಮತ್ತು ಹಣದುಬ್ಬರ ದೊಡ್ಡ ಸಮಸ್ಯೆಯಾಗಿದೆ ಎಂದು ಪ್ರತಿಕ್ರಿಯಿಸಿದ 40% ದಷ್ಟು ಜನರು ಹೇಳುತ್ತಾರೆ, ನಂತರ ಭ್ರಷ್ಟಾಚಾರ ಮತ್ತು ಮಹಿಳಾ ಸುರಕ್ಷತೆ ದೊಡ್ಡ ಸಮಸ್ಯೆ ಎಂದು 34%ದಷ್ಟು ಜನರು ಹೇಳುತ್ತಿದ್ದಾರೆ.

ಇದನ್ನು ಓದಿ: ಪಾಕಿಸ್ತಾನ ಪರ ಘೋಷಣೆ ಆರೋಪ: ಖಾಸಗಿ ಎಫ್‌ಎಸ್‌ಎಲ್‌ ವರದಿ ಹರಿಬಿಟ್ಟ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...