Homeಮುಖಪುಟಭಾರತದಾದ್ಯಂತ ಕೇಂದ್ರೀಯ ವಿ.ವಿಗಳಲ್ಲಿ ಕೇವಲ 9 ಒಬಿಸಿ ಪ್ರಾಧ್ಯಾಪಕರು! 304 ಕೋಟಾ ಖಾಲಿ

ಭಾರತದಾದ್ಯಂತ ಕೇಂದ್ರೀಯ ವಿ.ವಿಗಳಲ್ಲಿ ಕೇವಲ 9 ಒಬಿಸಿ ಪ್ರಾಧ್ಯಾಪಕರು! 304 ಕೋಟಾ ಖಾಲಿ

ಜನವರಿ 1, 2020 ರಿಂದ ಜವಾಹರಲಾಲ್‌ ವಿಶ್ವವಿದ್ಯಾಲಯ (ಜೆಎನ್‌ಯು), ದೆಹಲಿ ವಿವಿ,  ಬನಾರಸ್ ಹಿಂದೂ ವಿವಿ, ಅಲಹಾಬಾದ್ ವಿವಿ ಸೇರಿದಂತೆ ಹಲವು ವಿವಿಗಳಲ್ಲಿ ಒಬ್ಬರೇ ಒಬ್ಬರು ಒಬಿಸಿ ಪ್ರಾಧ್ಯಾಪಕರನ್ನು ನೇಮಿಸಿಕೊಂಡಿಲ್ಲ.

- Advertisement -
- Advertisement -

ಭಾರತದಾದ್ಯಂತ ಇರುವ ಕೇಂದ್ರೀಯ ವಿವಿಗಳಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರಾತಿನಿಧ್ಯ ತೀರಾ ಕಡಿಮೆಯಿದೆ. ಅವರಿಗಾಗಿಯೇ ಮೀಸಲಾದ ಪ್ರಾತಿನಿಧ್ಯದಲ್ಲಿ ಅಲ್ಪ ಪ್ರಮಾಣ ಮಾತ್ರ ತುಂಬಿದ್ದು ಉಳಿದಿದ್ದು ಖಾಲಿ ಬಿದ್ದಿದೆ.

ಪ್ರಾಧ್ಯಾಪಕ ಹುದ್ದೆಗಳಲ್ಲಿ ಓಬಿಸಿ ಕೋಟಾದಡಿ ಒಟ್ಟು ಮಂಜೂರಾದ 313 ಹುದ್ದೆಗಳಲ್ಲಿ ಕೇವಲ 09 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ಇನ್ನೂ 304 ಹುದ್ದೆಗಳು ಖಾಲಿ ಬಿದ್ದಿವೆ. ಅಂದರೆ ಕೇವಲ ಶೇ. 2.8 ಮಾತ್ರ ತುಂಬಿದೆ ಎಂದು ಯುಜಿಸಿ ಬಿಡುಗಡೆ ಮಾಡಿದ ಅಂಕಿ ಅಂಶಗಳು ಹೇಳಿವೆ.

ಜನವರಿ 1, 2020 ರಿಂದ ಜವಾಹರಲಾಲ್‌ ವಿಶ್ವವಿದ್ಯಾಲಯ (ಜೆಎನ್‌ಯು), ದೆಹಲಿ ವಿವಿ,  ಬನಾರಸ್ ಹಿಂದೂ ವಿವಿ, ಅಲಹಾಬಾದ್ ವಿವಿ ಸೇರಿದಂತೆ ಹಲವು ವಿವಿಗಳಲ್ಲಿ ಒಬ್ಬರೇ ಒಬ್ಬರು ಒಬಿಸಿ ಪ್ರಾಧ್ಯಾಪಕರನ್ನು ನೇಮಿಸಿಕೊಂಡಿಲ್ಲ ಎಂದು ದಿ ಪ್ರಿಂಟ್ ವರದಿ  ಮಾಡಿದೆ.

ಸಹ ಪ್ರಾಧ್ಯಾಪಕರ ಹುದ್ದೆಗಳ ವಿಷಯಕ್ಕೆ ಬಂದರೆ ಒಬಿಸಿ ಕೋಟಾದಡಿ ಮಂಜೂರಾದ ಹುದ್ದೆಗಳಲ್ಲಿ ಕೇವಲ ಶೇ. 5.17 ರಷ್ಟನ್ನು ಮಾತ್ರ ತುಂಬಲಾಗಿದೆ. 735 ಹುದ್ದೆಗಳಲ್ಲಿ 38 ಹುದ್ದೆಗಳು ಭರ್ತಿಯಾಗಿವೆ.

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಮಾತ್ರ ಸಮಾಧಾನಕರ ಅಂಶ ಎದ್ದುಕಾಣುತ್ತಿದೆ. ಈ ವಿಭಾಗದಲ್ಲಿ ಸುಮಾರು 60% ಒಬಿಸಿ ಹುದ್ದೆಗಳು ಭರ್ತಿಯಾಗಿವೆ. ಒಟ್ಟು ಮಂಜೂರಾದ 2232 ಹುದ್ದೆಗಳಲ್ಲಿ 1327 ಹುದ್ದೆಗಳು ಭರ್ತಿಯಾಗಿವೆ.

ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಆದಾಯದ ಮಿತಿಯನ್ನು ನಿರ್ಧರಿಸಲು ಸಂಬಳವನ್ನು ಒಂದು ಅಂಶವಾಗಿ ಸೇರಿಸುವ ಮೂಲಕ ಒಬಿಸಿ ಮೀಸಲಾತಿಯಲ್ಲಿನ “ಕೆನೆ ಪದರ” ದ ವ್ಯಾಖ್ಯಾನವನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿರ್ಧಾರಕ್ಕೆ ಬಿಜೆಪಿಯಲ್ಲಿನ ಕೆಲವ ಒಬಿಸಿ ಸಂಸದರು ಮತ್ತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಅಪಸ್ವರ ಎತ್ತಿವೆ. ಈಗಾಗಲೇ ಒಬಿಸಿ ಸಮುದಾಯದ ಕಡಿಮೆ ಪ್ರಾತಿನಿಧ್ಯವಿದ್ದು, ಕೇಂದ್ರದ ಈ ನಡೆ ಅದನ್ನು ಮತ್ತಷ್ಟು ಕಡಿಮೆಗೊಳಿಸುತ್ತದೆ ಎಂದು ಆರೋಪಿಸಿವೆ.

ಕಳೆದ ತಿಂಗಳ ಸಭೆಯೊಂದರಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಒಬಿಸಿ ಪ್ರಾತಿನಿಧ್ಯದ ಕುರಿತು ಮಾಹಿತಿ ಒದಗಿಸುವಂತೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದರು. ತದನಂತರದ ಪರಿಶೀಲನೆಯಲ್ಲಿ ಈ ಮೇಲಿನ ಅಂಶಗಳು ಬೆಳಕಿಗೆ ಬಂದಿವೆ.

ಕಾರಣವೇನು?

2016 ಸುಪ್ರೀಂ ಕೋರ್ಟ್‌ನ ಆದೇಶದಂತೆ ಯುಜಿಸಿಯು ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಲ್ಲಿ ಒಬಿಸಿ ಸಮುದಾಯಕ್ಕಿದ್ದ 27% ಮೀಸಲಾತಿಯನ್ನು ರದ್ದುಗೊಳಿಸಿತ್ತು. 27% ಮೀಸಲಾತಿಯನ್ನು ಕೇವಲ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಮಾತ್ರ ಸೀಮಿತಗೊಳಿಸಿತ್ತು.

ನಂತರ 2019 ರಲ್ಲಿ ಸರ್ಕಾರವು ಕೇಂದ್ರ ಶಿಕ್ಷಣ ಸಂಸ್ಥೆಗಳು (ಶಿಕ್ಷಕರ ಹುದ್ದೆಗಳಲ್ಲಿ ಮೀಸಲಾತಿ) ಸುಗ್ರೀವಾಜ್ಞೆಯನ್ನು ತಂದಿತು. ಆದ್ದರಿಂದ ಎಸ್‌ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಕೇಂದ್ರ ಸರ್ಕಾರದಿಂದ ತೆರೆಯಲ್ಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳಲ್ಲಿ ಮೀಸಲಾತಿಯನ್ನು ಮತ್ತೆ ಒದಗಿಸಿತು.

ಆದರೂ ಸಾಕಷ್ಟು ಪ್ರಚಾರದ ಕೊರತೆಯಿಂದಾಗಿ ಉನ್ನತ ಭೋದನಾ ಹುದ್ದೆಗಳಲ್ಲಿ ಒಬಿಸಿಗಳ ಸಮುದಾಯದ ಪ್ರಾತಿನಿಧ್ಯತೆ ಹೆಚ್ಚಾಗಿಲ್ಲ. ಸರ್ಕಾರವು ಸಮರ್ಥ ಪರಿಣಿತರು ಸಿಗುತ್ತಿಲ್ಲ ಎಂದು ವಾದಿಸುತ್ತಿದೆ. ಇಷ್ಟು ದೊಡ್ಡ ದೇಶದಲ್ಲಿ ಒಬಿಸಿ ಸಮುದಾಯದ ಪ್ರಾಧ್ಯಾಪಕರಿಲ್ಲವೇ ಎಂಬ ಪ್ರಶ್ನೆಯನ್ನು ಇದು ಮುನ್ನೆಲೆಗೆ ತಂದಿದೆ.

ವಿವಿಗಳಲ್ಲಿ ಮೀಸಲಾತಿ ನೀಡಲು ಸರ್ಕಾರಕ್ಕೆ ಮನಸ್ಸಿಲ್ಲ

ಒಬಿಸಿಗಳ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಿಸಿಕೊಳ್ಳಲು ಯಾವುದೇ ಜಾಹೀರಾತು ನೀಡುತ್ತಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಸರ್ಕಾರಕ್ಕೆ ನೇಮಕ ಮಾಡಿಕೊಳ್ಳುವ ಮನಸ್ಸಿಲ್ಲ ಎಂದು ನೇಮಕಾತಿ ಸಮಿತಿಯ ಭಾಗವಾಗಿರುವ ದೆಹಲಿ ವಿವಿಯ ಮಹಾರಾಜ ಆಗ್ರಾಸೆನ್ ಕಾಲೇಜಿನ ಭೋದಿಸುವ ಸುಬೋಧ್ ಕುಮಾರ್ ಹೇಳುತ್ತಾರೆ.

ಯಾವುದೇ ವಿವಿಯ ಉಪಕುಲಪತಿಗಳ ಹುದ್ದೆಯಲ್ಲಿ ಮೇಲ್ಜಾತಿಯವರಿರುತ್ತಾರೆ. ಅವರು ಮೇಲ್ಜಾತಿಯವರಿಗೆ ಹೆಚ್ಚಿನ ಅವಕಾಶ ನೀಡುತ್ತಾರೆ. ಮೇಲ್ಜಾತಿ ಸಂಸ್ಕೃತಿಯೇ ಬೇರೂರಿದೆ ಎಂದು ಅವರು ಆರೋಪಿಸಿದ್ದಾರೆ.

ನೇಮಕಾತಿ ವಿಧಾನವೂ ತೀರಾ ನಿಧಾನವಾಗಿದೆ. ಅಲ್ಲದೇ ಸರ್ಕಾರಿ ಸಂಸ್ಥೆಗಳಲ್ಲಿ ಒಬಿಸಿಗಳ ಮೀಸಲಾತಿ ಜಾರಿಯೂ ಸಹ ವಿಳಂಬವಾಗುತ್ತದೆ. ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನೀವು ನಿರ್ದಿಷ್ಠ ಸಿದ್ದಾಂತಕ್ಕೆ ಬದ್ಧರಾಗಿಲ್ಲದಿದ್ದರೆ ನಿಮ್ಮ ನೇಮಕಾತಿ ತೀರಾ ಕಷ್ಟವಾಗುತ್ತದೆ. ಈ ಮೂರು ಕಾರಣಗಳು ಒಬಿಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಉನ್ನತ ಭೋದನಾ ಹುದ್ದೆಗಳಲ್ಲಿ ಇಲ್ಲದಿರುವುದಕ್ಕೆ ಕಾರಣ ಎಂದು ಜೆಎನ್‌ಯುವಿನ ಪ್ರೊ.ನರೇಂದ್ರ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: NEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...