Homeಮುಖಪುಟಭಾರತದಾದ್ಯಂತ ಕೇಂದ್ರೀಯ ವಿ.ವಿಗಳಲ್ಲಿ ಕೇವಲ 9 ಒಬಿಸಿ ಪ್ರಾಧ್ಯಾಪಕರು! 304 ಕೋಟಾ ಖಾಲಿ

ಭಾರತದಾದ್ಯಂತ ಕೇಂದ್ರೀಯ ವಿ.ವಿಗಳಲ್ಲಿ ಕೇವಲ 9 ಒಬಿಸಿ ಪ್ರಾಧ್ಯಾಪಕರು! 304 ಕೋಟಾ ಖಾಲಿ

ಜನವರಿ 1, 2020 ರಿಂದ ಜವಾಹರಲಾಲ್‌ ವಿಶ್ವವಿದ್ಯಾಲಯ (ಜೆಎನ್‌ಯು), ದೆಹಲಿ ವಿವಿ,  ಬನಾರಸ್ ಹಿಂದೂ ವಿವಿ, ಅಲಹಾಬಾದ್ ವಿವಿ ಸೇರಿದಂತೆ ಹಲವು ವಿವಿಗಳಲ್ಲಿ ಒಬ್ಬರೇ ಒಬ್ಬರು ಒಬಿಸಿ ಪ್ರಾಧ್ಯಾಪಕರನ್ನು ನೇಮಿಸಿಕೊಂಡಿಲ್ಲ.

- Advertisement -
- Advertisement -

ಭಾರತದಾದ್ಯಂತ ಇರುವ ಕೇಂದ್ರೀಯ ವಿವಿಗಳಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರಾತಿನಿಧ್ಯ ತೀರಾ ಕಡಿಮೆಯಿದೆ. ಅವರಿಗಾಗಿಯೇ ಮೀಸಲಾದ ಪ್ರಾತಿನಿಧ್ಯದಲ್ಲಿ ಅಲ್ಪ ಪ್ರಮಾಣ ಮಾತ್ರ ತುಂಬಿದ್ದು ಉಳಿದಿದ್ದು ಖಾಲಿ ಬಿದ್ದಿದೆ.

ಪ್ರಾಧ್ಯಾಪಕ ಹುದ್ದೆಗಳಲ್ಲಿ ಓಬಿಸಿ ಕೋಟಾದಡಿ ಒಟ್ಟು ಮಂಜೂರಾದ 313 ಹುದ್ದೆಗಳಲ್ಲಿ ಕೇವಲ 09 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ಇನ್ನೂ 304 ಹುದ್ದೆಗಳು ಖಾಲಿ ಬಿದ್ದಿವೆ. ಅಂದರೆ ಕೇವಲ ಶೇ. 2.8 ಮಾತ್ರ ತುಂಬಿದೆ ಎಂದು ಯುಜಿಸಿ ಬಿಡುಗಡೆ ಮಾಡಿದ ಅಂಕಿ ಅಂಶಗಳು ಹೇಳಿವೆ.

ಜನವರಿ 1, 2020 ರಿಂದ ಜವಾಹರಲಾಲ್‌ ವಿಶ್ವವಿದ್ಯಾಲಯ (ಜೆಎನ್‌ಯು), ದೆಹಲಿ ವಿವಿ,  ಬನಾರಸ್ ಹಿಂದೂ ವಿವಿ, ಅಲಹಾಬಾದ್ ವಿವಿ ಸೇರಿದಂತೆ ಹಲವು ವಿವಿಗಳಲ್ಲಿ ಒಬ್ಬರೇ ಒಬ್ಬರು ಒಬಿಸಿ ಪ್ರಾಧ್ಯಾಪಕರನ್ನು ನೇಮಿಸಿಕೊಂಡಿಲ್ಲ ಎಂದು ದಿ ಪ್ರಿಂಟ್ ವರದಿ  ಮಾಡಿದೆ.

ಸಹ ಪ್ರಾಧ್ಯಾಪಕರ ಹುದ್ದೆಗಳ ವಿಷಯಕ್ಕೆ ಬಂದರೆ ಒಬಿಸಿ ಕೋಟಾದಡಿ ಮಂಜೂರಾದ ಹುದ್ದೆಗಳಲ್ಲಿ ಕೇವಲ ಶೇ. 5.17 ರಷ್ಟನ್ನು ಮಾತ್ರ ತುಂಬಲಾಗಿದೆ. 735 ಹುದ್ದೆಗಳಲ್ಲಿ 38 ಹುದ್ದೆಗಳು ಭರ್ತಿಯಾಗಿವೆ.

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಮಾತ್ರ ಸಮಾಧಾನಕರ ಅಂಶ ಎದ್ದುಕಾಣುತ್ತಿದೆ. ಈ ವಿಭಾಗದಲ್ಲಿ ಸುಮಾರು 60% ಒಬಿಸಿ ಹುದ್ದೆಗಳು ಭರ್ತಿಯಾಗಿವೆ. ಒಟ್ಟು ಮಂಜೂರಾದ 2232 ಹುದ್ದೆಗಳಲ್ಲಿ 1327 ಹುದ್ದೆಗಳು ಭರ್ತಿಯಾಗಿವೆ.

ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಆದಾಯದ ಮಿತಿಯನ್ನು ನಿರ್ಧರಿಸಲು ಸಂಬಳವನ್ನು ಒಂದು ಅಂಶವಾಗಿ ಸೇರಿಸುವ ಮೂಲಕ ಒಬಿಸಿ ಮೀಸಲಾತಿಯಲ್ಲಿನ “ಕೆನೆ ಪದರ” ದ ವ್ಯಾಖ್ಯಾನವನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿರ್ಧಾರಕ್ಕೆ ಬಿಜೆಪಿಯಲ್ಲಿನ ಕೆಲವ ಒಬಿಸಿ ಸಂಸದರು ಮತ್ತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಅಪಸ್ವರ ಎತ್ತಿವೆ. ಈಗಾಗಲೇ ಒಬಿಸಿ ಸಮುದಾಯದ ಕಡಿಮೆ ಪ್ರಾತಿನಿಧ್ಯವಿದ್ದು, ಕೇಂದ್ರದ ಈ ನಡೆ ಅದನ್ನು ಮತ್ತಷ್ಟು ಕಡಿಮೆಗೊಳಿಸುತ್ತದೆ ಎಂದು ಆರೋಪಿಸಿವೆ.

ಕಳೆದ ತಿಂಗಳ ಸಭೆಯೊಂದರಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಒಬಿಸಿ ಪ್ರಾತಿನಿಧ್ಯದ ಕುರಿತು ಮಾಹಿತಿ ಒದಗಿಸುವಂತೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದರು. ತದನಂತರದ ಪರಿಶೀಲನೆಯಲ್ಲಿ ಈ ಮೇಲಿನ ಅಂಶಗಳು ಬೆಳಕಿಗೆ ಬಂದಿವೆ.

ಕಾರಣವೇನು?

2016 ಸುಪ್ರೀಂ ಕೋರ್ಟ್‌ನ ಆದೇಶದಂತೆ ಯುಜಿಸಿಯು ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಲ್ಲಿ ಒಬಿಸಿ ಸಮುದಾಯಕ್ಕಿದ್ದ 27% ಮೀಸಲಾತಿಯನ್ನು ರದ್ದುಗೊಳಿಸಿತ್ತು. 27% ಮೀಸಲಾತಿಯನ್ನು ಕೇವಲ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಮಾತ್ರ ಸೀಮಿತಗೊಳಿಸಿತ್ತು.

ನಂತರ 2019 ರಲ್ಲಿ ಸರ್ಕಾರವು ಕೇಂದ್ರ ಶಿಕ್ಷಣ ಸಂಸ್ಥೆಗಳು (ಶಿಕ್ಷಕರ ಹುದ್ದೆಗಳಲ್ಲಿ ಮೀಸಲಾತಿ) ಸುಗ್ರೀವಾಜ್ಞೆಯನ್ನು ತಂದಿತು. ಆದ್ದರಿಂದ ಎಸ್‌ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಕೇಂದ್ರ ಸರ್ಕಾರದಿಂದ ತೆರೆಯಲ್ಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳಲ್ಲಿ ಮೀಸಲಾತಿಯನ್ನು ಮತ್ತೆ ಒದಗಿಸಿತು.

ಆದರೂ ಸಾಕಷ್ಟು ಪ್ರಚಾರದ ಕೊರತೆಯಿಂದಾಗಿ ಉನ್ನತ ಭೋದನಾ ಹುದ್ದೆಗಳಲ್ಲಿ ಒಬಿಸಿಗಳ ಸಮುದಾಯದ ಪ್ರಾತಿನಿಧ್ಯತೆ ಹೆಚ್ಚಾಗಿಲ್ಲ. ಸರ್ಕಾರವು ಸಮರ್ಥ ಪರಿಣಿತರು ಸಿಗುತ್ತಿಲ್ಲ ಎಂದು ವಾದಿಸುತ್ತಿದೆ. ಇಷ್ಟು ದೊಡ್ಡ ದೇಶದಲ್ಲಿ ಒಬಿಸಿ ಸಮುದಾಯದ ಪ್ರಾಧ್ಯಾಪಕರಿಲ್ಲವೇ ಎಂಬ ಪ್ರಶ್ನೆಯನ್ನು ಇದು ಮುನ್ನೆಲೆಗೆ ತಂದಿದೆ.

ವಿವಿಗಳಲ್ಲಿ ಮೀಸಲಾತಿ ನೀಡಲು ಸರ್ಕಾರಕ್ಕೆ ಮನಸ್ಸಿಲ್ಲ

ಒಬಿಸಿಗಳ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಿಸಿಕೊಳ್ಳಲು ಯಾವುದೇ ಜಾಹೀರಾತು ನೀಡುತ್ತಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಸರ್ಕಾರಕ್ಕೆ ನೇಮಕ ಮಾಡಿಕೊಳ್ಳುವ ಮನಸ್ಸಿಲ್ಲ ಎಂದು ನೇಮಕಾತಿ ಸಮಿತಿಯ ಭಾಗವಾಗಿರುವ ದೆಹಲಿ ವಿವಿಯ ಮಹಾರಾಜ ಆಗ್ರಾಸೆನ್ ಕಾಲೇಜಿನ ಭೋದಿಸುವ ಸುಬೋಧ್ ಕುಮಾರ್ ಹೇಳುತ್ತಾರೆ.

ಯಾವುದೇ ವಿವಿಯ ಉಪಕುಲಪತಿಗಳ ಹುದ್ದೆಯಲ್ಲಿ ಮೇಲ್ಜಾತಿಯವರಿರುತ್ತಾರೆ. ಅವರು ಮೇಲ್ಜಾತಿಯವರಿಗೆ ಹೆಚ್ಚಿನ ಅವಕಾಶ ನೀಡುತ್ತಾರೆ. ಮೇಲ್ಜಾತಿ ಸಂಸ್ಕೃತಿಯೇ ಬೇರೂರಿದೆ ಎಂದು ಅವರು ಆರೋಪಿಸಿದ್ದಾರೆ.

ನೇಮಕಾತಿ ವಿಧಾನವೂ ತೀರಾ ನಿಧಾನವಾಗಿದೆ. ಅಲ್ಲದೇ ಸರ್ಕಾರಿ ಸಂಸ್ಥೆಗಳಲ್ಲಿ ಒಬಿಸಿಗಳ ಮೀಸಲಾತಿ ಜಾರಿಯೂ ಸಹ ವಿಳಂಬವಾಗುತ್ತದೆ. ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನೀವು ನಿರ್ದಿಷ್ಠ ಸಿದ್ದಾಂತಕ್ಕೆ ಬದ್ಧರಾಗಿಲ್ಲದಿದ್ದರೆ ನಿಮ್ಮ ನೇಮಕಾತಿ ತೀರಾ ಕಷ್ಟವಾಗುತ್ತದೆ. ಈ ಮೂರು ಕಾರಣಗಳು ಒಬಿಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಉನ್ನತ ಭೋದನಾ ಹುದ್ದೆಗಳಲ್ಲಿ ಇಲ್ಲದಿರುವುದಕ್ಕೆ ಕಾರಣ ಎಂದು ಜೆಎನ್‌ಯುವಿನ ಪ್ರೊ.ನರೇಂದ್ರ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: NEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...