Homeಮುಖಪುಟಭಾರತದಾದ್ಯಂತ ಕೇಂದ್ರೀಯ ವಿ.ವಿಗಳಲ್ಲಿ ಕೇವಲ 9 ಒಬಿಸಿ ಪ್ರಾಧ್ಯಾಪಕರು! 304 ಕೋಟಾ ಖಾಲಿ

ಭಾರತದಾದ್ಯಂತ ಕೇಂದ್ರೀಯ ವಿ.ವಿಗಳಲ್ಲಿ ಕೇವಲ 9 ಒಬಿಸಿ ಪ್ರಾಧ್ಯಾಪಕರು! 304 ಕೋಟಾ ಖಾಲಿ

ಜನವರಿ 1, 2020 ರಿಂದ ಜವಾಹರಲಾಲ್‌ ವಿಶ್ವವಿದ್ಯಾಲಯ (ಜೆಎನ್‌ಯು), ದೆಹಲಿ ವಿವಿ,  ಬನಾರಸ್ ಹಿಂದೂ ವಿವಿ, ಅಲಹಾಬಾದ್ ವಿವಿ ಸೇರಿದಂತೆ ಹಲವು ವಿವಿಗಳಲ್ಲಿ ಒಬ್ಬರೇ ಒಬ್ಬರು ಒಬಿಸಿ ಪ್ರಾಧ್ಯಾಪಕರನ್ನು ನೇಮಿಸಿಕೊಂಡಿಲ್ಲ.

- Advertisement -
- Advertisement -

ಭಾರತದಾದ್ಯಂತ ಇರುವ ಕೇಂದ್ರೀಯ ವಿವಿಗಳಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರಾತಿನಿಧ್ಯ ತೀರಾ ಕಡಿಮೆಯಿದೆ. ಅವರಿಗಾಗಿಯೇ ಮೀಸಲಾದ ಪ್ರಾತಿನಿಧ್ಯದಲ್ಲಿ ಅಲ್ಪ ಪ್ರಮಾಣ ಮಾತ್ರ ತುಂಬಿದ್ದು ಉಳಿದಿದ್ದು ಖಾಲಿ ಬಿದ್ದಿದೆ.

ಪ್ರಾಧ್ಯಾಪಕ ಹುದ್ದೆಗಳಲ್ಲಿ ಓಬಿಸಿ ಕೋಟಾದಡಿ ಒಟ್ಟು ಮಂಜೂರಾದ 313 ಹುದ್ದೆಗಳಲ್ಲಿ ಕೇವಲ 09 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ಇನ್ನೂ 304 ಹುದ್ದೆಗಳು ಖಾಲಿ ಬಿದ್ದಿವೆ. ಅಂದರೆ ಕೇವಲ ಶೇ. 2.8 ಮಾತ್ರ ತುಂಬಿದೆ ಎಂದು ಯುಜಿಸಿ ಬಿಡುಗಡೆ ಮಾಡಿದ ಅಂಕಿ ಅಂಶಗಳು ಹೇಳಿವೆ.

ಜನವರಿ 1, 2020 ರಿಂದ ಜವಾಹರಲಾಲ್‌ ವಿಶ್ವವಿದ್ಯಾಲಯ (ಜೆಎನ್‌ಯು), ದೆಹಲಿ ವಿವಿ,  ಬನಾರಸ್ ಹಿಂದೂ ವಿವಿ, ಅಲಹಾಬಾದ್ ವಿವಿ ಸೇರಿದಂತೆ ಹಲವು ವಿವಿಗಳಲ್ಲಿ ಒಬ್ಬರೇ ಒಬ್ಬರು ಒಬಿಸಿ ಪ್ರಾಧ್ಯಾಪಕರನ್ನು ನೇಮಿಸಿಕೊಂಡಿಲ್ಲ ಎಂದು ದಿ ಪ್ರಿಂಟ್ ವರದಿ  ಮಾಡಿದೆ.

ಸಹ ಪ್ರಾಧ್ಯಾಪಕರ ಹುದ್ದೆಗಳ ವಿಷಯಕ್ಕೆ ಬಂದರೆ ಒಬಿಸಿ ಕೋಟಾದಡಿ ಮಂಜೂರಾದ ಹುದ್ದೆಗಳಲ್ಲಿ ಕೇವಲ ಶೇ. 5.17 ರಷ್ಟನ್ನು ಮಾತ್ರ ತುಂಬಲಾಗಿದೆ. 735 ಹುದ್ದೆಗಳಲ್ಲಿ 38 ಹುದ್ದೆಗಳು ಭರ್ತಿಯಾಗಿವೆ.

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಮಾತ್ರ ಸಮಾಧಾನಕರ ಅಂಶ ಎದ್ದುಕಾಣುತ್ತಿದೆ. ಈ ವಿಭಾಗದಲ್ಲಿ ಸುಮಾರು 60% ಒಬಿಸಿ ಹುದ್ದೆಗಳು ಭರ್ತಿಯಾಗಿವೆ. ಒಟ್ಟು ಮಂಜೂರಾದ 2232 ಹುದ್ದೆಗಳಲ್ಲಿ 1327 ಹುದ್ದೆಗಳು ಭರ್ತಿಯಾಗಿವೆ.

ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಆದಾಯದ ಮಿತಿಯನ್ನು ನಿರ್ಧರಿಸಲು ಸಂಬಳವನ್ನು ಒಂದು ಅಂಶವಾಗಿ ಸೇರಿಸುವ ಮೂಲಕ ಒಬಿಸಿ ಮೀಸಲಾತಿಯಲ್ಲಿನ “ಕೆನೆ ಪದರ” ದ ವ್ಯಾಖ್ಯಾನವನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿರ್ಧಾರಕ್ಕೆ ಬಿಜೆಪಿಯಲ್ಲಿನ ಕೆಲವ ಒಬಿಸಿ ಸಂಸದರು ಮತ್ತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಅಪಸ್ವರ ಎತ್ತಿವೆ. ಈಗಾಗಲೇ ಒಬಿಸಿ ಸಮುದಾಯದ ಕಡಿಮೆ ಪ್ರಾತಿನಿಧ್ಯವಿದ್ದು, ಕೇಂದ್ರದ ಈ ನಡೆ ಅದನ್ನು ಮತ್ತಷ್ಟು ಕಡಿಮೆಗೊಳಿಸುತ್ತದೆ ಎಂದು ಆರೋಪಿಸಿವೆ.

ಕಳೆದ ತಿಂಗಳ ಸಭೆಯೊಂದರಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಒಬಿಸಿ ಪ್ರಾತಿನಿಧ್ಯದ ಕುರಿತು ಮಾಹಿತಿ ಒದಗಿಸುವಂತೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದರು. ತದನಂತರದ ಪರಿಶೀಲನೆಯಲ್ಲಿ ಈ ಮೇಲಿನ ಅಂಶಗಳು ಬೆಳಕಿಗೆ ಬಂದಿವೆ.

ಕಾರಣವೇನು?

2016 ಸುಪ್ರೀಂ ಕೋರ್ಟ್‌ನ ಆದೇಶದಂತೆ ಯುಜಿಸಿಯು ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಲ್ಲಿ ಒಬಿಸಿ ಸಮುದಾಯಕ್ಕಿದ್ದ 27% ಮೀಸಲಾತಿಯನ್ನು ರದ್ದುಗೊಳಿಸಿತ್ತು. 27% ಮೀಸಲಾತಿಯನ್ನು ಕೇವಲ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಮಾತ್ರ ಸೀಮಿತಗೊಳಿಸಿತ್ತು.

ನಂತರ 2019 ರಲ್ಲಿ ಸರ್ಕಾರವು ಕೇಂದ್ರ ಶಿಕ್ಷಣ ಸಂಸ್ಥೆಗಳು (ಶಿಕ್ಷಕರ ಹುದ್ದೆಗಳಲ್ಲಿ ಮೀಸಲಾತಿ) ಸುಗ್ರೀವಾಜ್ಞೆಯನ್ನು ತಂದಿತು. ಆದ್ದರಿಂದ ಎಸ್‌ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಕೇಂದ್ರ ಸರ್ಕಾರದಿಂದ ತೆರೆಯಲ್ಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳಲ್ಲಿ ಮೀಸಲಾತಿಯನ್ನು ಮತ್ತೆ ಒದಗಿಸಿತು.

ಆದರೂ ಸಾಕಷ್ಟು ಪ್ರಚಾರದ ಕೊರತೆಯಿಂದಾಗಿ ಉನ್ನತ ಭೋದನಾ ಹುದ್ದೆಗಳಲ್ಲಿ ಒಬಿಸಿಗಳ ಸಮುದಾಯದ ಪ್ರಾತಿನಿಧ್ಯತೆ ಹೆಚ್ಚಾಗಿಲ್ಲ. ಸರ್ಕಾರವು ಸಮರ್ಥ ಪರಿಣಿತರು ಸಿಗುತ್ತಿಲ್ಲ ಎಂದು ವಾದಿಸುತ್ತಿದೆ. ಇಷ್ಟು ದೊಡ್ಡ ದೇಶದಲ್ಲಿ ಒಬಿಸಿ ಸಮುದಾಯದ ಪ್ರಾಧ್ಯಾಪಕರಿಲ್ಲವೇ ಎಂಬ ಪ್ರಶ್ನೆಯನ್ನು ಇದು ಮುನ್ನೆಲೆಗೆ ತಂದಿದೆ.

ವಿವಿಗಳಲ್ಲಿ ಮೀಸಲಾತಿ ನೀಡಲು ಸರ್ಕಾರಕ್ಕೆ ಮನಸ್ಸಿಲ್ಲ

ಒಬಿಸಿಗಳ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಿಸಿಕೊಳ್ಳಲು ಯಾವುದೇ ಜಾಹೀರಾತು ನೀಡುತ್ತಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಸರ್ಕಾರಕ್ಕೆ ನೇಮಕ ಮಾಡಿಕೊಳ್ಳುವ ಮನಸ್ಸಿಲ್ಲ ಎಂದು ನೇಮಕಾತಿ ಸಮಿತಿಯ ಭಾಗವಾಗಿರುವ ದೆಹಲಿ ವಿವಿಯ ಮಹಾರಾಜ ಆಗ್ರಾಸೆನ್ ಕಾಲೇಜಿನ ಭೋದಿಸುವ ಸುಬೋಧ್ ಕುಮಾರ್ ಹೇಳುತ್ತಾರೆ.

ಯಾವುದೇ ವಿವಿಯ ಉಪಕುಲಪತಿಗಳ ಹುದ್ದೆಯಲ್ಲಿ ಮೇಲ್ಜಾತಿಯವರಿರುತ್ತಾರೆ. ಅವರು ಮೇಲ್ಜಾತಿಯವರಿಗೆ ಹೆಚ್ಚಿನ ಅವಕಾಶ ನೀಡುತ್ತಾರೆ. ಮೇಲ್ಜಾತಿ ಸಂಸ್ಕೃತಿಯೇ ಬೇರೂರಿದೆ ಎಂದು ಅವರು ಆರೋಪಿಸಿದ್ದಾರೆ.

ನೇಮಕಾತಿ ವಿಧಾನವೂ ತೀರಾ ನಿಧಾನವಾಗಿದೆ. ಅಲ್ಲದೇ ಸರ್ಕಾರಿ ಸಂಸ್ಥೆಗಳಲ್ಲಿ ಒಬಿಸಿಗಳ ಮೀಸಲಾತಿ ಜಾರಿಯೂ ಸಹ ವಿಳಂಬವಾಗುತ್ತದೆ. ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನೀವು ನಿರ್ದಿಷ್ಠ ಸಿದ್ದಾಂತಕ್ಕೆ ಬದ್ಧರಾಗಿಲ್ಲದಿದ್ದರೆ ನಿಮ್ಮ ನೇಮಕಾತಿ ತೀರಾ ಕಷ್ಟವಾಗುತ್ತದೆ. ಈ ಮೂರು ಕಾರಣಗಳು ಒಬಿಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಉನ್ನತ ಭೋದನಾ ಹುದ್ದೆಗಳಲ್ಲಿ ಇಲ್ಲದಿರುವುದಕ್ಕೆ ಕಾರಣ ಎಂದು ಜೆಎನ್‌ಯುವಿನ ಪ್ರೊ.ನರೇಂದ್ರ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: NEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...