Homeಮುಖಪುಟಭಾರತದಾದ್ಯಂತ ಕೇಂದ್ರೀಯ ವಿ.ವಿಗಳಲ್ಲಿ ಕೇವಲ 9 ಒಬಿಸಿ ಪ್ರಾಧ್ಯಾಪಕರು! 304 ಕೋಟಾ ಖಾಲಿ

ಭಾರತದಾದ್ಯಂತ ಕೇಂದ್ರೀಯ ವಿ.ವಿಗಳಲ್ಲಿ ಕೇವಲ 9 ಒಬಿಸಿ ಪ್ರಾಧ್ಯಾಪಕರು! 304 ಕೋಟಾ ಖಾಲಿ

ಜನವರಿ 1, 2020 ರಿಂದ ಜವಾಹರಲಾಲ್‌ ವಿಶ್ವವಿದ್ಯಾಲಯ (ಜೆಎನ್‌ಯು), ದೆಹಲಿ ವಿವಿ,  ಬನಾರಸ್ ಹಿಂದೂ ವಿವಿ, ಅಲಹಾಬಾದ್ ವಿವಿ ಸೇರಿದಂತೆ ಹಲವು ವಿವಿಗಳಲ್ಲಿ ಒಬ್ಬರೇ ಒಬ್ಬರು ಒಬಿಸಿ ಪ್ರಾಧ್ಯಾಪಕರನ್ನು ನೇಮಿಸಿಕೊಂಡಿಲ್ಲ.

- Advertisement -
- Advertisement -

ಭಾರತದಾದ್ಯಂತ ಇರುವ ಕೇಂದ್ರೀಯ ವಿವಿಗಳಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರಾತಿನಿಧ್ಯ ತೀರಾ ಕಡಿಮೆಯಿದೆ. ಅವರಿಗಾಗಿಯೇ ಮೀಸಲಾದ ಪ್ರಾತಿನಿಧ್ಯದಲ್ಲಿ ಅಲ್ಪ ಪ್ರಮಾಣ ಮಾತ್ರ ತುಂಬಿದ್ದು ಉಳಿದಿದ್ದು ಖಾಲಿ ಬಿದ್ದಿದೆ.

ಪ್ರಾಧ್ಯಾಪಕ ಹುದ್ದೆಗಳಲ್ಲಿ ಓಬಿಸಿ ಕೋಟಾದಡಿ ಒಟ್ಟು ಮಂಜೂರಾದ 313 ಹುದ್ದೆಗಳಲ್ಲಿ ಕೇವಲ 09 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ಇನ್ನೂ 304 ಹುದ್ದೆಗಳು ಖಾಲಿ ಬಿದ್ದಿವೆ. ಅಂದರೆ ಕೇವಲ ಶೇ. 2.8 ಮಾತ್ರ ತುಂಬಿದೆ ಎಂದು ಯುಜಿಸಿ ಬಿಡುಗಡೆ ಮಾಡಿದ ಅಂಕಿ ಅಂಶಗಳು ಹೇಳಿವೆ.

ಜನವರಿ 1, 2020 ರಿಂದ ಜವಾಹರಲಾಲ್‌ ವಿಶ್ವವಿದ್ಯಾಲಯ (ಜೆಎನ್‌ಯು), ದೆಹಲಿ ವಿವಿ,  ಬನಾರಸ್ ಹಿಂದೂ ವಿವಿ, ಅಲಹಾಬಾದ್ ವಿವಿ ಸೇರಿದಂತೆ ಹಲವು ವಿವಿಗಳಲ್ಲಿ ಒಬ್ಬರೇ ಒಬ್ಬರು ಒಬಿಸಿ ಪ್ರಾಧ್ಯಾಪಕರನ್ನು ನೇಮಿಸಿಕೊಂಡಿಲ್ಲ ಎಂದು ದಿ ಪ್ರಿಂಟ್ ವರದಿ  ಮಾಡಿದೆ.

ಸಹ ಪ್ರಾಧ್ಯಾಪಕರ ಹುದ್ದೆಗಳ ವಿಷಯಕ್ಕೆ ಬಂದರೆ ಒಬಿಸಿ ಕೋಟಾದಡಿ ಮಂಜೂರಾದ ಹುದ್ದೆಗಳಲ್ಲಿ ಕೇವಲ ಶೇ. 5.17 ರಷ್ಟನ್ನು ಮಾತ್ರ ತುಂಬಲಾಗಿದೆ. 735 ಹುದ್ದೆಗಳಲ್ಲಿ 38 ಹುದ್ದೆಗಳು ಭರ್ತಿಯಾಗಿವೆ.

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಮಾತ್ರ ಸಮಾಧಾನಕರ ಅಂಶ ಎದ್ದುಕಾಣುತ್ತಿದೆ. ಈ ವಿಭಾಗದಲ್ಲಿ ಸುಮಾರು 60% ಒಬಿಸಿ ಹುದ್ದೆಗಳು ಭರ್ತಿಯಾಗಿವೆ. ಒಟ್ಟು ಮಂಜೂರಾದ 2232 ಹುದ್ದೆಗಳಲ್ಲಿ 1327 ಹುದ್ದೆಗಳು ಭರ್ತಿಯಾಗಿವೆ.

ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಆದಾಯದ ಮಿತಿಯನ್ನು ನಿರ್ಧರಿಸಲು ಸಂಬಳವನ್ನು ಒಂದು ಅಂಶವಾಗಿ ಸೇರಿಸುವ ಮೂಲಕ ಒಬಿಸಿ ಮೀಸಲಾತಿಯಲ್ಲಿನ “ಕೆನೆ ಪದರ” ದ ವ್ಯಾಖ್ಯಾನವನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿರ್ಧಾರಕ್ಕೆ ಬಿಜೆಪಿಯಲ್ಲಿನ ಕೆಲವ ಒಬಿಸಿ ಸಂಸದರು ಮತ್ತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಅಪಸ್ವರ ಎತ್ತಿವೆ. ಈಗಾಗಲೇ ಒಬಿಸಿ ಸಮುದಾಯದ ಕಡಿಮೆ ಪ್ರಾತಿನಿಧ್ಯವಿದ್ದು, ಕೇಂದ್ರದ ಈ ನಡೆ ಅದನ್ನು ಮತ್ತಷ್ಟು ಕಡಿಮೆಗೊಳಿಸುತ್ತದೆ ಎಂದು ಆರೋಪಿಸಿವೆ.

ಕಳೆದ ತಿಂಗಳ ಸಭೆಯೊಂದರಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಒಬಿಸಿ ಪ್ರಾತಿನಿಧ್ಯದ ಕುರಿತು ಮಾಹಿತಿ ಒದಗಿಸುವಂತೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದರು. ತದನಂತರದ ಪರಿಶೀಲನೆಯಲ್ಲಿ ಈ ಮೇಲಿನ ಅಂಶಗಳು ಬೆಳಕಿಗೆ ಬಂದಿವೆ.

ಕಾರಣವೇನು?

2016 ಸುಪ್ರೀಂ ಕೋರ್ಟ್‌ನ ಆದೇಶದಂತೆ ಯುಜಿಸಿಯು ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಲ್ಲಿ ಒಬಿಸಿ ಸಮುದಾಯಕ್ಕಿದ್ದ 27% ಮೀಸಲಾತಿಯನ್ನು ರದ್ದುಗೊಳಿಸಿತ್ತು. 27% ಮೀಸಲಾತಿಯನ್ನು ಕೇವಲ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಮಾತ್ರ ಸೀಮಿತಗೊಳಿಸಿತ್ತು.

ನಂತರ 2019 ರಲ್ಲಿ ಸರ್ಕಾರವು ಕೇಂದ್ರ ಶಿಕ್ಷಣ ಸಂಸ್ಥೆಗಳು (ಶಿಕ್ಷಕರ ಹುದ್ದೆಗಳಲ್ಲಿ ಮೀಸಲಾತಿ) ಸುಗ್ರೀವಾಜ್ಞೆಯನ್ನು ತಂದಿತು. ಆದ್ದರಿಂದ ಎಸ್‌ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಕೇಂದ್ರ ಸರ್ಕಾರದಿಂದ ತೆರೆಯಲ್ಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳಲ್ಲಿ ಮೀಸಲಾತಿಯನ್ನು ಮತ್ತೆ ಒದಗಿಸಿತು.

ಆದರೂ ಸಾಕಷ್ಟು ಪ್ರಚಾರದ ಕೊರತೆಯಿಂದಾಗಿ ಉನ್ನತ ಭೋದನಾ ಹುದ್ದೆಗಳಲ್ಲಿ ಒಬಿಸಿಗಳ ಸಮುದಾಯದ ಪ್ರಾತಿನಿಧ್ಯತೆ ಹೆಚ್ಚಾಗಿಲ್ಲ. ಸರ್ಕಾರವು ಸಮರ್ಥ ಪರಿಣಿತರು ಸಿಗುತ್ತಿಲ್ಲ ಎಂದು ವಾದಿಸುತ್ತಿದೆ. ಇಷ್ಟು ದೊಡ್ಡ ದೇಶದಲ್ಲಿ ಒಬಿಸಿ ಸಮುದಾಯದ ಪ್ರಾಧ್ಯಾಪಕರಿಲ್ಲವೇ ಎಂಬ ಪ್ರಶ್ನೆಯನ್ನು ಇದು ಮುನ್ನೆಲೆಗೆ ತಂದಿದೆ.

ವಿವಿಗಳಲ್ಲಿ ಮೀಸಲಾತಿ ನೀಡಲು ಸರ್ಕಾರಕ್ಕೆ ಮನಸ್ಸಿಲ್ಲ

ಒಬಿಸಿಗಳ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಿಸಿಕೊಳ್ಳಲು ಯಾವುದೇ ಜಾಹೀರಾತು ನೀಡುತ್ತಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಸರ್ಕಾರಕ್ಕೆ ನೇಮಕ ಮಾಡಿಕೊಳ್ಳುವ ಮನಸ್ಸಿಲ್ಲ ಎಂದು ನೇಮಕಾತಿ ಸಮಿತಿಯ ಭಾಗವಾಗಿರುವ ದೆಹಲಿ ವಿವಿಯ ಮಹಾರಾಜ ಆಗ್ರಾಸೆನ್ ಕಾಲೇಜಿನ ಭೋದಿಸುವ ಸುಬೋಧ್ ಕುಮಾರ್ ಹೇಳುತ್ತಾರೆ.

ಯಾವುದೇ ವಿವಿಯ ಉಪಕುಲಪತಿಗಳ ಹುದ್ದೆಯಲ್ಲಿ ಮೇಲ್ಜಾತಿಯವರಿರುತ್ತಾರೆ. ಅವರು ಮೇಲ್ಜಾತಿಯವರಿಗೆ ಹೆಚ್ಚಿನ ಅವಕಾಶ ನೀಡುತ್ತಾರೆ. ಮೇಲ್ಜಾತಿ ಸಂಸ್ಕೃತಿಯೇ ಬೇರೂರಿದೆ ಎಂದು ಅವರು ಆರೋಪಿಸಿದ್ದಾರೆ.

ನೇಮಕಾತಿ ವಿಧಾನವೂ ತೀರಾ ನಿಧಾನವಾಗಿದೆ. ಅಲ್ಲದೇ ಸರ್ಕಾರಿ ಸಂಸ್ಥೆಗಳಲ್ಲಿ ಒಬಿಸಿಗಳ ಮೀಸಲಾತಿ ಜಾರಿಯೂ ಸಹ ವಿಳಂಬವಾಗುತ್ತದೆ. ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನೀವು ನಿರ್ದಿಷ್ಠ ಸಿದ್ದಾಂತಕ್ಕೆ ಬದ್ಧರಾಗಿಲ್ಲದಿದ್ದರೆ ನಿಮ್ಮ ನೇಮಕಾತಿ ತೀರಾ ಕಷ್ಟವಾಗುತ್ತದೆ. ಈ ಮೂರು ಕಾರಣಗಳು ಒಬಿಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಉನ್ನತ ಭೋದನಾ ಹುದ್ದೆಗಳಲ್ಲಿ ಇಲ್ಲದಿರುವುದಕ್ಕೆ ಕಾರಣ ಎಂದು ಜೆಎನ್‌ಯುವಿನ ಪ್ರೊ.ನರೇಂದ್ರ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: NEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...