Homeಮುಖಪುಟಡಿಮಾನಿಟೈಜೇಷನ್‌ನಿಂದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ: ರಾಹುಲ್

ಡಿಮಾನಿಟೈಜೇಷನ್‌ನಿಂದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ: ರಾಹುಲ್

ಭಾರತದ ಆರ್ಥಿಕತೆ ಕುಸಿಯಲು ಕೋವಿಡ್ ಕಾರಣವಲ್ಲ. ಇಡೀ ದೇಶದಲ್ಲಿ ಕೋವಿಡ್ ಇದೆ. ಆದರೂ ಅಲ್ಲೆಲ್ಲಿಯೂ ಭಾರತದಷ್ಟು ಆರ್ಥಿಕತೆ ಕುಸಿದಿಲ್ಲ. ನೋಟ್ ಬಂದಿ, ಜಿಎಸ್‌ಟಿ ಜಾರಿಯೇ ಇದಕ್ಕೆ ಕಾರಣ.

- Advertisement -
- Advertisement -

ನಾಲ್ಕು ವರ್ಷದ ಹಿಂದೆ ಇದೇ ದಿನ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ ಡಿಮಾನಿಟೈಜೇಷನ್‌ನಿಂದ ಭಾರತದ ಆರ್ಥಿಕತೆ ನಾಶವಾಗಿದ್ದು, ಅದರಿಂದ ಮೋದಿಯವರ ಸ್ನೇಹಿತರಾದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಆರೋಪಿಸಿದ್ದಾರೆ.

SpeakUpAgainstDeMoDisaster ಪ್ರಚಾರಾಭಿಯಾನದಲ್ಲಿ ಮಾತನಾಡಿದ ರಾಹುಲ್, “ಇದು ಬಡವರ ಪರವಾಗಿನ ಕಾಳಜಿಯಿಂದ ಜಾರಿಗೊಳಿಸಿದ ಯೋಜನೆಯಲ್ಲ. ಮೋದಿಯವರ ಅನಾಹುತದಿಂದ ಭಾರತದ ಆರ್ಥಿಕತೆ ಬಾಂಗ್ಲಾದೇಶಕ್ಕಿಂತ ಕೆಳಗಿಳಿಯಬೇಕಾದ ಪರಿಸ್ಥಿತಿ ಬಂದಿದೆ” ಎಂದಿದ್ದಾರೆ.

ಭಾರತದ ಆರ್ಥಿಕತೆ ಕುಸಿಯಲು ಕೋವಿಡ್ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ಅದು ಸುಳ್ಳು. ಏಕೆಂದರೆ ಬಾಂಗ್ಲಾದೇಶ ಸೇರಿದಂತೆ ಇಡೀ ದೇಶದಲ್ಲಿ ಕೋವಿಡ್ ಇದೆ. ಆದರೂ ಅಲ್ಲೆಲ್ಲಿಯೂ ಭಾರತದಷ್ಟು ಆರ್ಥಿಕತೆ ಕುಸಿದಿಲ್ಲ. ಭಾರತದ ಪರಿಸ್ಥಿತಿಗೆ ನೋಟ್ ಬಂದಿ ಮತ್ತು ಜಿಎಸ್‌ಟಿ ಜಾರಿಯೇ ಕಾರಣ ಎಂದಿದ್ದಾರೆ.

ನಾಲ್ಕು ವರ್ಷದ ಹಿಂದೆ ಭಾರತದ ಆರ್ಥಿಕತೆ ಮೇಲೆ ನರೇಂದ್ರ ಮೋದಿಯವರು ಪ್ರಹಾರ ನಡೆಸಿದರು. ಅದು ಭಾರತದ ರೈತರು, ಕಾರ್ಮಿಕರು ಮತ್ತು ಸಣ್ಣ ವ್ಯಾಪರಿಗಳನ್ನು ಸಂಕಷ್ಟಕ್ಕೆ ದೂಡಿತು. ಮೋದಿಯವರು ಇದು ಕಪ್ಪು ಹಣದ ವಿರುದ್ಧ ಯುದ್ಧ ಎಂದು ಕರೆದರು. ಆದರೆ ಕಪ್ಪು ಹಣ ಬಂದಿತೆ? ಅದು ದೊಡ್ಡ ಸುಳ್ಳು. ನಿಮ್ಮ ಹಣವನ್ನು ತೆಗೆದುಕೊಂಡು ಅವರ 2-3 ಕ್ರೋನಿ ಕ್ಯಾಪಿಟಲಿಸ್ಟ್ ಸ್ನೇಹಿತರಿಗೆ ನೀಡಿದ್ದಾರೆ. ನಿಮ್ಮ ಹಣದಿಂದ ಅವರ ಸ್ನೇಹಿತರ ಮೂರೂವರೆ ಲಕ್ಷ ಕೋಟಿ ಬಂಡವಾಳಿಗರ ಸಾಲ ಮನ್ನಾ ಮಾಡಲಾಗಿದೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಅಷ್ಟೇ ಅಲ್ಲದೆ ಅದರ ಮರುವರ್ಷ ಪ್ರಧಾನಿ ನರೇಂದ್ರ ಮೋದಿಯವರು ಅಸಮರ್ಪಕ ಜಿಎಸ್‌ಟಿ ಜಾರಿಗೊಳಿಸಿದರು. ಇದರಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳು ನಷ್ಟ ಹೊಂದಿದ್ದಾರೆ. ಅದರಿಂದ ಮೋದಿಯವರ ಸ್ನೇಹಿತರಾದ ಕಂಪನಿಗಳಿಗೆ ಮಾತ್ರ ಲಾಭವಾಗುತ್ತಿದೆ ಎಂದು ರಾಹುಲ್ ತಿಳಿಸಿದ್ದಾರೆ.

ಮೋದಿಯವರು ಭಾರತದ ಘನತೆಗೆ ಚ್ಯುತಿ ತಂದಿದ್ದಾರೆ. ಆರ್ಥಿಕತೆಯನ್ನು ನಾಶಗೊಳಸಿದ್ದಾರೆ. ಮೂರು ಕೃಷಿ ಕಾನೂನುಗಳ ಮೂಲಕ ರೈತರನ್ನು ಮುಗಿಸಲು ಹೊರಟಿದ್ದಾರೆ. ಈಗ ಇದೆಲ್ಲವನ್ನು ನಾವೆಲ್ಲರೂ ಸೇರಿ ಮರುನಿರ್ಮಾಣ ಮಾಡಬೇಕಿದೆ ಎಂದು ರಾಹುಲ್ ಹೇಳಿದ್ದಾರೆ.

ಡಿಮಾನಿಟೈಜೇಷನ್ ನ 4 ನೇ ವರ್ಷವನ್ನು ಕರಾಳ ದಿನಾಚರಣೆಯಂದು ದೇಶಾದ್ಯಂತ ಆಚರಿಸುತ್ತಿರುವ ಈ ಹೊತ್ತಿನಲ್ಲಿ ಕಾಂಗ್ರೆಸ್ ಅದನ್ನು ‘ವಿಶ್ವಾಸಘಾತ ದಿನ’ ಎಂದು ಕರೆದಿದೆ.


ಇದನ್ನೂ ಓದಿ: ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...