Homeಮುಖಪುಟಡಿಮಾನಿಟೈಜೇಷನ್‌ನಿಂದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ: ರಾಹುಲ್

ಡಿಮಾನಿಟೈಜೇಷನ್‌ನಿಂದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ: ರಾಹುಲ್

ಭಾರತದ ಆರ್ಥಿಕತೆ ಕುಸಿಯಲು ಕೋವಿಡ್ ಕಾರಣವಲ್ಲ. ಇಡೀ ದೇಶದಲ್ಲಿ ಕೋವಿಡ್ ಇದೆ. ಆದರೂ ಅಲ್ಲೆಲ್ಲಿಯೂ ಭಾರತದಷ್ಟು ಆರ್ಥಿಕತೆ ಕುಸಿದಿಲ್ಲ. ನೋಟ್ ಬಂದಿ, ಜಿಎಸ್‌ಟಿ ಜಾರಿಯೇ ಇದಕ್ಕೆ ಕಾರಣ.

- Advertisement -
- Advertisement -

ನಾಲ್ಕು ವರ್ಷದ ಹಿಂದೆ ಇದೇ ದಿನ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ ಡಿಮಾನಿಟೈಜೇಷನ್‌ನಿಂದ ಭಾರತದ ಆರ್ಥಿಕತೆ ನಾಶವಾಗಿದ್ದು, ಅದರಿಂದ ಮೋದಿಯವರ ಸ್ನೇಹಿತರಾದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಆರೋಪಿಸಿದ್ದಾರೆ.

SpeakUpAgainstDeMoDisaster ಪ್ರಚಾರಾಭಿಯಾನದಲ್ಲಿ ಮಾತನಾಡಿದ ರಾಹುಲ್, “ಇದು ಬಡವರ ಪರವಾಗಿನ ಕಾಳಜಿಯಿಂದ ಜಾರಿಗೊಳಿಸಿದ ಯೋಜನೆಯಲ್ಲ. ಮೋದಿಯವರ ಅನಾಹುತದಿಂದ ಭಾರತದ ಆರ್ಥಿಕತೆ ಬಾಂಗ್ಲಾದೇಶಕ್ಕಿಂತ ಕೆಳಗಿಳಿಯಬೇಕಾದ ಪರಿಸ್ಥಿತಿ ಬಂದಿದೆ” ಎಂದಿದ್ದಾರೆ.

ಭಾರತದ ಆರ್ಥಿಕತೆ ಕುಸಿಯಲು ಕೋವಿಡ್ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ಅದು ಸುಳ್ಳು. ಏಕೆಂದರೆ ಬಾಂಗ್ಲಾದೇಶ ಸೇರಿದಂತೆ ಇಡೀ ದೇಶದಲ್ಲಿ ಕೋವಿಡ್ ಇದೆ. ಆದರೂ ಅಲ್ಲೆಲ್ಲಿಯೂ ಭಾರತದಷ್ಟು ಆರ್ಥಿಕತೆ ಕುಸಿದಿಲ್ಲ. ಭಾರತದ ಪರಿಸ್ಥಿತಿಗೆ ನೋಟ್ ಬಂದಿ ಮತ್ತು ಜಿಎಸ್‌ಟಿ ಜಾರಿಯೇ ಕಾರಣ ಎಂದಿದ್ದಾರೆ.

ನಾಲ್ಕು ವರ್ಷದ ಹಿಂದೆ ಭಾರತದ ಆರ್ಥಿಕತೆ ಮೇಲೆ ನರೇಂದ್ರ ಮೋದಿಯವರು ಪ್ರಹಾರ ನಡೆಸಿದರು. ಅದು ಭಾರತದ ರೈತರು, ಕಾರ್ಮಿಕರು ಮತ್ತು ಸಣ್ಣ ವ್ಯಾಪರಿಗಳನ್ನು ಸಂಕಷ್ಟಕ್ಕೆ ದೂಡಿತು. ಮೋದಿಯವರು ಇದು ಕಪ್ಪು ಹಣದ ವಿರುದ್ಧ ಯುದ್ಧ ಎಂದು ಕರೆದರು. ಆದರೆ ಕಪ್ಪು ಹಣ ಬಂದಿತೆ? ಅದು ದೊಡ್ಡ ಸುಳ್ಳು. ನಿಮ್ಮ ಹಣವನ್ನು ತೆಗೆದುಕೊಂಡು ಅವರ 2-3 ಕ್ರೋನಿ ಕ್ಯಾಪಿಟಲಿಸ್ಟ್ ಸ್ನೇಹಿತರಿಗೆ ನೀಡಿದ್ದಾರೆ. ನಿಮ್ಮ ಹಣದಿಂದ ಅವರ ಸ್ನೇಹಿತರ ಮೂರೂವರೆ ಲಕ್ಷ ಕೋಟಿ ಬಂಡವಾಳಿಗರ ಸಾಲ ಮನ್ನಾ ಮಾಡಲಾಗಿದೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಅಷ್ಟೇ ಅಲ್ಲದೆ ಅದರ ಮರುವರ್ಷ ಪ್ರಧಾನಿ ನರೇಂದ್ರ ಮೋದಿಯವರು ಅಸಮರ್ಪಕ ಜಿಎಸ್‌ಟಿ ಜಾರಿಗೊಳಿಸಿದರು. ಇದರಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳು ನಷ್ಟ ಹೊಂದಿದ್ದಾರೆ. ಅದರಿಂದ ಮೋದಿಯವರ ಸ್ನೇಹಿತರಾದ ಕಂಪನಿಗಳಿಗೆ ಮಾತ್ರ ಲಾಭವಾಗುತ್ತಿದೆ ಎಂದು ರಾಹುಲ್ ತಿಳಿಸಿದ್ದಾರೆ.

ಮೋದಿಯವರು ಭಾರತದ ಘನತೆಗೆ ಚ್ಯುತಿ ತಂದಿದ್ದಾರೆ. ಆರ್ಥಿಕತೆಯನ್ನು ನಾಶಗೊಳಸಿದ್ದಾರೆ. ಮೂರು ಕೃಷಿ ಕಾನೂನುಗಳ ಮೂಲಕ ರೈತರನ್ನು ಮುಗಿಸಲು ಹೊರಟಿದ್ದಾರೆ. ಈಗ ಇದೆಲ್ಲವನ್ನು ನಾವೆಲ್ಲರೂ ಸೇರಿ ಮರುನಿರ್ಮಾಣ ಮಾಡಬೇಕಿದೆ ಎಂದು ರಾಹುಲ್ ಹೇಳಿದ್ದಾರೆ.

ಡಿಮಾನಿಟೈಜೇಷನ್ ನ 4 ನೇ ವರ್ಷವನ್ನು ಕರಾಳ ದಿನಾಚರಣೆಯಂದು ದೇಶಾದ್ಯಂತ ಆಚರಿಸುತ್ತಿರುವ ಈ ಹೊತ್ತಿನಲ್ಲಿ ಕಾಂಗ್ರೆಸ್ ಅದನ್ನು ‘ವಿಶ್ವಾಸಘಾತ ದಿನ’ ಎಂದು ಕರೆದಿದೆ.


ಇದನ್ನೂ ಓದಿ: ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...