Homeಮುಖಪುಟಹಿಂದೂಗಳು ಮಾತ್ರ ದೇಶಭಕ್ತರಾಗಲು ಸಾಧ್ಯ: ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್ ಭಾಗವತ್

ಹಿಂದೂಗಳು ಮಾತ್ರ ದೇಶಭಕ್ತರಾಗಲು ಸಾಧ್ಯ: ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್ ಭಾಗವತ್

ತನ್ನ ತಾಯಿನಾಡಿನ ಮೇಲಿನ ಪ್ರೀತಿಯು ಅವರ ಆಧ್ಯಾತ್ಮಿಕತೆಯಿಂದ ಹುಟ್ಟಿಕೊಂಡಿರುವುದರಿಂದ ಅವರ ಧರ್ಮ ಮತ್ತು ದೇಶಭಕ್ತಿ ಭಿನ್ನವಾಗಿರಬಾರದು ಎಂದು ಗಾಂಧೀಜಿ ಹೇಳಿದ್ದಾರೆ- ಮೋಹನ್ ಭಾಗವತ್

- Advertisement -
- Advertisement -

“ಹಿಂದೂಗಳು ಮಾತ್ರ ದೇಶಭಕ್ತರಾಗಲು ಸಾಧ್ಯ. ಯಾಕೆಂದರೆ ಅದು ಅವರ ಮೂಲ ಗುಣ ಮತ್ತು ಸ್ವಭಾವವಾಗಿರುತ್ತದೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಶುಕ್ರವಾರ ಹೇಳಿದ್ದಾರೆ.

ಜೆ.ಕೆ.ಬಜಾಜ್ ಮತ್ತು ಎಂ.ಡಿ ಶ್ರೀನಿವಾಸ್ ಬರೆದ “ಮೇಕಿಂಗ್ ಆಫ್ ಎ ಹಿಂದೂ ದೇಶಭಕ್ತ: ಗಾಂಧೀಜಿಯ ಹಿಂದ್ ಸ್ವರಾಜ್ ಹಿನ್ನೆಲೆ” ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಮಾತನಾಡುತ್ತಾ, “ದೇಶಪ್ರೇಮವು ಅವರ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದಾರೆ” ಎಂದು ಉಲ್ಲೇಖಿಸಿ ಮಾತನಾಡಿದರು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಈ ಪುಸ್ತಕ ಮಹಾತ್ಮ ಗಾಂಧಿಯವರ ಕುರಿತಾದ ಅಧಿಕೃತ ವಿದ್ವತ್‌ಪೂರ್ಣ ಸಂಶೋಧನಾ ದಾಖಲೆಯಾಗಿದೆ ಎಂದು ವಿವರಿಸಿದ ಭಾಗವತ್, “ತನ್ನ ತಾಯಿನಾಡಿನ ಮೇಲಿನ ಪ್ರೀತಿಯು ಅವರ ಆಧ್ಯಾತ್ಮಿಕತೆಯಿಂದ ಹುಟ್ಟಿಕೊಂಡಿರುವುದರಿಂದ ಅವರ ಧರ್ಮ ಮತ್ತು ದೇಶಭಕ್ತಿ ಭಿನ್ನವಾಗಿರಬಾರದು ಎಂದು ಗಾಂಧೀಜಿ ಹೇಳಿದ್ದಾರೆ. ಧರ್ಮವು ಕೇವಲ ಧರ್ಮದ ಅರ್ಥದಲ್ಲಿಲ್ಲ, ಅದು ಧರ್ಮಕ್ಕಿಂತ ವಿಶಾಲವಾಗಿದೆ” ಎಂದು ಹೇಳಿದರು.

“ಹಿಂದೂಗಳಾದವರು ದೇಶಭಕ್ತರಾಗಿರಲೇಬೇಕು. ಅದು ಅವರ ಮೂಲ ಗುಣ ಮತ್ತು ಸ್ವಭಾವವಾಗಿರುತ್ತದೆ. ಕೆಲವೊಮ್ಮೆ ನೀವು ಅವರ ದೇಶಭಕ್ತಿಯನ್ನು ಜಾಗೃತಗೊಳಿಸಬೇಕಾಗಬಹುದು. ಆದರೆ ಅವರು ಎಂದಿಗೂ ಭಾರತ ವಿರೋಧಿ ಆಗಲು ಸಾಧ್ಯವಿಲ್ಲ. ಆದರೆ ಯಾರೇ ಒಬ್ಬ ತನ್ನ ದೇಶವನ್ನು ಪ್ರೀತಿಸಿದರೆ ಅದು ಕೇವಲ ಭೂಮಿಯನ್ನು ಮಾತ್ರ ಪ್ರೀತಿಸುವುದು ಎಂದು ಅರ್ಥವಲ್ಲ. ಅಲ್ಲಿನ ಜನರು, ನದಿಗಳು, ಸಂಸ್ಕೃತಿ, ಸಂಪ್ರದಾಯಗಳು ಮತ್ತು ಎಲ್ಲವನ್ನೂ ಅರ್ಥೈಸಿಕೊಳ್ಳಬೇಕು ಎಂಬ ಅಂಶವನ್ನು ಅರಿತುಕೊಳ್ಳಿ” ಎಂದು ಅವರು ಹೇಳಿದರು.


ಇದನ್ನೂ ಓದಿ: ’ದಾರಿ ತಪ್ಪಲು ನಾವು ಮಕ್ಕಳಲ್ಲ’: ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...