Homeಮುಖಪುಟಹಿಂದೂಗಳು ಮಾತ್ರ ದೇಶಭಕ್ತರಾಗಲು ಸಾಧ್ಯ: ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್ ಭಾಗವತ್

ಹಿಂದೂಗಳು ಮಾತ್ರ ದೇಶಭಕ್ತರಾಗಲು ಸಾಧ್ಯ: ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್ ಭಾಗವತ್

ತನ್ನ ತಾಯಿನಾಡಿನ ಮೇಲಿನ ಪ್ರೀತಿಯು ಅವರ ಆಧ್ಯಾತ್ಮಿಕತೆಯಿಂದ ಹುಟ್ಟಿಕೊಂಡಿರುವುದರಿಂದ ಅವರ ಧರ್ಮ ಮತ್ತು ದೇಶಭಕ್ತಿ ಭಿನ್ನವಾಗಿರಬಾರದು ಎಂದು ಗಾಂಧೀಜಿ ಹೇಳಿದ್ದಾರೆ- ಮೋಹನ್ ಭಾಗವತ್

- Advertisement -
- Advertisement -

“ಹಿಂದೂಗಳು ಮಾತ್ರ ದೇಶಭಕ್ತರಾಗಲು ಸಾಧ್ಯ. ಯಾಕೆಂದರೆ ಅದು ಅವರ ಮೂಲ ಗುಣ ಮತ್ತು ಸ್ವಭಾವವಾಗಿರುತ್ತದೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಶುಕ್ರವಾರ ಹೇಳಿದ್ದಾರೆ.

ಜೆ.ಕೆ.ಬಜಾಜ್ ಮತ್ತು ಎಂ.ಡಿ ಶ್ರೀನಿವಾಸ್ ಬರೆದ “ಮೇಕಿಂಗ್ ಆಫ್ ಎ ಹಿಂದೂ ದೇಶಭಕ್ತ: ಗಾಂಧೀಜಿಯ ಹಿಂದ್ ಸ್ವರಾಜ್ ಹಿನ್ನೆಲೆ” ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಮಾತನಾಡುತ್ತಾ, “ದೇಶಪ್ರೇಮವು ಅವರ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದಾರೆ” ಎಂದು ಉಲ್ಲೇಖಿಸಿ ಮಾತನಾಡಿದರು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ಈ ಪುಸ್ತಕ ಮಹಾತ್ಮ ಗಾಂಧಿಯವರ ಕುರಿತಾದ ಅಧಿಕೃತ ವಿದ್ವತ್‌ಪೂರ್ಣ ಸಂಶೋಧನಾ ದಾಖಲೆಯಾಗಿದೆ ಎಂದು ವಿವರಿಸಿದ ಭಾಗವತ್, “ತನ್ನ ತಾಯಿನಾಡಿನ ಮೇಲಿನ ಪ್ರೀತಿಯು ಅವರ ಆಧ್ಯಾತ್ಮಿಕತೆಯಿಂದ ಹುಟ್ಟಿಕೊಂಡಿರುವುದರಿಂದ ಅವರ ಧರ್ಮ ಮತ್ತು ದೇಶಭಕ್ತಿ ಭಿನ್ನವಾಗಿರಬಾರದು ಎಂದು ಗಾಂಧೀಜಿ ಹೇಳಿದ್ದಾರೆ. ಧರ್ಮವು ಕೇವಲ ಧರ್ಮದ ಅರ್ಥದಲ್ಲಿಲ್ಲ, ಅದು ಧರ್ಮಕ್ಕಿಂತ ವಿಶಾಲವಾಗಿದೆ” ಎಂದು ಹೇಳಿದರು.

“ಹಿಂದೂಗಳಾದವರು ದೇಶಭಕ್ತರಾಗಿರಲೇಬೇಕು. ಅದು ಅವರ ಮೂಲ ಗುಣ ಮತ್ತು ಸ್ವಭಾವವಾಗಿರುತ್ತದೆ. ಕೆಲವೊಮ್ಮೆ ನೀವು ಅವರ ದೇಶಭಕ್ತಿಯನ್ನು ಜಾಗೃತಗೊಳಿಸಬೇಕಾಗಬಹುದು. ಆದರೆ ಅವರು ಎಂದಿಗೂ ಭಾರತ ವಿರೋಧಿ ಆಗಲು ಸಾಧ್ಯವಿಲ್ಲ. ಆದರೆ ಯಾರೇ ಒಬ್ಬ ತನ್ನ ದೇಶವನ್ನು ಪ್ರೀತಿಸಿದರೆ ಅದು ಕೇವಲ ಭೂಮಿಯನ್ನು ಮಾತ್ರ ಪ್ರೀತಿಸುವುದು ಎಂದು ಅರ್ಥವಲ್ಲ. ಅಲ್ಲಿನ ಜನರು, ನದಿಗಳು, ಸಂಸ್ಕೃತಿ, ಸಂಪ್ರದಾಯಗಳು ಮತ್ತು ಎಲ್ಲವನ್ನೂ ಅರ್ಥೈಸಿಕೊಳ್ಳಬೇಕು ಎಂಬ ಅಂಶವನ್ನು ಅರಿತುಕೊಳ್ಳಿ” ಎಂದು ಅವರು ಹೇಳಿದರು.


ಇದನ್ನೂ ಓದಿ: ’ದಾರಿ ತಪ್ಪಲು ನಾವು ಮಕ್ಕಳಲ್ಲ’: ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...