Homeಮುಖಪುಟಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

- Advertisement -
- Advertisement -

ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ ಬಣದ ನಾಯಕ ಸಂಜಯ್ ರಾವುತ್‌ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ಕುರಿತು ರಾಹುಲ್ ಆಡಿದ್ದ ಮಾತುಗಳಿಂದಾಗಿ ಮೈತ್ರಿ ಪಕ್ಷಗಳಲ್ಲಿ ಒಡಕು ಮೂಡಿಸುತ್ತಿದೆ ಎಂದು ಚರ್ಚೆಯಾಗುತ್ತಿರುವ ಹೊತ್ತಿನಲ್ಲಿ ಸಂಜಯ್‌ ರಾವುತ್‌ ಅವರು ರಾಹುಲ್‌ ಗಾಂಧಿಯವರನ್ನು ಹೊಗಳಿದ್ದಾರೆ.

“ನನಗೆ ಕರೆ ಮಾಡಿ ಮಾತನಾಡಿರುವುದು ರಾಹುಲ್ ಗಾಂಧಿಯವರ ಮಾನವೀಯತೆಯನ್ನು ತೋರುತ್ತದೆ. ಬಿಡುವಿಲ್ಲದ ತಮ್ಮ ಯಾತ್ರೆಯ ನಡುವೆಯೂ ತಮ್ಮ ರಾಜಕೀಯ ಸಹೋದ್ಯೋಗಿಗೆ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂದು ರಾವುತ್‌ ಮೆಚ್ಚುಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿದ್ದಾಗಲೂ ರಾಹುಲ್ ರಾತ್ರಿ ನನಗೆ ಕರೆ ಮಾಡಿದರು. ಅವರು ನನ್ನ ಆರೋಗ್ಯದ ಬಗ್ಗೆ ಕೇಳಿದರು. ‘ನಿಮ್ಮ ಬಗ್ಗೆ ನಮಗೆ ಚಿಂತೆಯಾಗಿದೆ’ ಎಂದರು. ರಾಜಕೀಯ ಮಿತ್ರನನ್ನು ನಕಲಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದುಃಖಿಸಲು ಸಾಧ್ಯವಾಗುವುದು ಮನುಷ್ಯನಿಗೆ ಮಾತ್ರ. 110 ದಿನಗಳ ಕಾಲ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಯಿತು” ಎಂದು ಸಂಜಯ್ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇಂಗ್ಲಿಷ್‌ನಲ್ಲಿ ಮತ್ತೊಂದು ಪೋಸ್ಟ್ ಮಾಡಿರುವ ರಾವುತ್‌, “ಕೆಲವು ವಿಷಯಗಳ ಬಗ್ಗೆ ಬಲವಾದ ಭಿನ್ನಾಭಿಪ್ರಾಯಗಳ ನಡುವೆಯೂ, ನಿಮ್ಮ ರಾಜಕೀಯ ಸಹೋದ್ಯೋಗಿಯನ್ನು ವಿಚಾರಿಸುವುದು ಮಾನವೀಯತೆಯ ಸಂಕೇತವಾಗಿದೆ. ರಾಜಕೀಯದ ಕಹಿ ಗಳಿಗೆಯಲ್ಲಿ, ಇಂತಹ ಕ್ರಿಯೆಗಳು ಅಪರೂಪವಾಗುತ್ತಿವೆ. ರಾಹುಲ್‌ಜಿ ತಮ್ಮ ಯಾತ್ರೆಯನ್ನು ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಕೇಂದ್ರೀಕರಿಸಿದ್ದಾರೆ. ಹೀಗಾಗಿ ಯಾತ್ರೆಗೆ ಭಾರೀ ಪ್ರತಿಕ್ರಿಯೆ ಸಿಗುತ್ತಿದೆ” ಎಂದು ರಾವುತ್‌ ಹೊಗಳಿದ್ದಾರೆ.

ಸಾವರ್ಕರ್‌ ಕುರಿತು ರಾಹುಲ್‌ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಹೊಂದಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯನ್ನು ಮುರಿಯುವ ಬಗ್ಗೆ ಠಾಕ್ರೆ ಬಣವು ಸುಳಿವು ನೀಡಿತ್ತು. ಇದಾದ ನಂತರ ರಾಹುಲ್ ಗಾಂಧಿಯವರ ಕಾಳಜಿಯ ಬಗ್ಗೆ ಶಿವಸೇನಾ ನಾಯಕ ಸಂಜಯ್‌ ರಾವುತ್ ಮಾಡಿರುವ ಪೋಸ್ಟ್‌- ಈ ವಿವಾದವನ್ನು ಸಮತೂಗಿಸುವ ಸೂಚನೆಯಂತೆ ಕಾಣುತ್ತಿದೆ.

ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರಕ್ಕೆ ಕಾಲಿಟ್ಟ ಬಳಿಕ ರಾಹುಲ್ ಗಾಂಧಿಯವರು ಮಾತನಾಡುತ್ತಾ, “ವಿ.ಡಿ.ಸಾವರ್ಕರ್‌ರವರು ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು” ಎಂದು ಟೀಕಿಸಿದ್ದರು. “ಬ್ರಿಟಿಷರಿಗೆ ಕ್ಷಮೆ ಕೋರುವ ಮೂಲಕ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರೂ ಮತ್ತು ಸರ್ದಾರ್ ಪಟೇಲ್ ಅವರಂತಹ ಸ್ವಾತಂತ್ರ್ಯದ ಐಕಾನ್‌ಗಳಿಗೆ ಸಾವರ್ಕರ್‌‌ ದ್ರೋಹ ಮಾಡಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗಳು ಶಿವಸೇನೆಯ ಎರಡೂ ಬಣಗಳನ್ನು ಕೆರಳಿಸಿತು. ಕಾಂಗ್ರೆಸ್‌ನೊಂದಿಗಿನ ಸಂಬಂಧದ ಬಗ್ಗೆ ಪ್ರತಿಸ್ಪರ್ಧಿ ಏಕನಾಥ್ ಶಿಂಧೆ ಬಣ ಕುಟುಕಿತ್ತು. ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರವಾಗಿ ಉದ್ಧವ್‌ ಠಾಕ್ರೆ ಬಣವು ಟೀಕೆಯನ್ನು ಎದುರಿಸಿತು.

ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿ, “ನಮ್ಮ ಪಕ್ಷವು ಸಾವರ್ಕರ್ ಬಗ್ಗೆ ಅಪಾರವಾದ ಗೌರವ ಹೊಂದಿದೆ” ಎಂದಿದ್ದರು. ಎನ್‌ಡಿಟಿವಿ ಜೊತೆ ಮಾತನಾಡಿದ್ದ ಸಂಜಯ್ ರಾವುತ್, “ಸಾವರ್ಕರ್ ಅವರ ವಿಷಯ ನಮಗೆ ಮುಖ್ಯವಾಗಿದೆ. ನಾವು ಸಾವರ್ಕರ್‌‌ ಸಿದ್ಧಾಂತವನ್ನು ನಂಬುತ್ತೇವೆ. ಕಾಂಗ್ರೆಸ್‌ ಈ ವಿಷಯವನ್ನು ತರಬಾರದಿತ್ತು” ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿರಿ: ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಪಕ್ಷದ ಮತ್ತೊಬ್ಬ ನಾಯಕ, ಶಿವಸೇನಾ ಸಂಸದ ಅರವಿಂದ್ ಸಾವಂತ್ ಒಂದು ಹೆಜ್ಜೆ ಮುಂದೆ ಹೋಗಿ, “ನಾವು ಎಂವಿಎ (ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ) ಮುಂದುವರಿಯುವುದಿಲ್ಲ ಎಂದು ಸಂಜಯ್ ರಾವುತ್ ಹೇಳಿಕೆ ನೀಡಿದ್ದಾರೆ. ಇದು ಪಕ್ಷದಿಂದ ನೀಡಲಾದ ಗಂಭೀರ ಪ್ರತಿಕ್ರಿಯೆಯಾಗಿದೆ. ಉದ್ಧವ್ ಠಾಕ್ರೆ ಅವರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ” ಎಂದಿದ್ದರು.

ವಿವಾದ ಭುಗಿಲೆದ್ದ ಬಳಿಕ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿ ಯಾರನ್ನೂ ಅವಮಾನಿಸಿಲ್ಲ. ಆದರೆ ಐತಿಹಾಸಿಕ ಸತ್ಯವನ್ನು ಮಾತ್ರ ಹೇಳಿದ್ದಾರೆ. ನಾನು ಇಂದು ಸಂಜಯ್ ರಾವುತ್ ಅವರೊಂದಿಗೆ ಮಾತನಾಡಿದ್ದೇನೆ. ನಾವು ಭಿನ್ನಾಭಿಪ್ರಾಯವನ್ನು ಒಪ್ಪಿಕೊಳ್ಳುತ್ತೇವೆ. ಇದು ಮಹಾ ವಿಕಾಸ್ ಅಘಾಡಿಯನ್ನು ದುರ್ಬಲಗೊಳಿಸುತ್ತದೆ ಎಂಬುದು ಸುಳ್ಳು. ಈ ಹೇಳಿಕೆ ಮೈತ್ರಿ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...