Homeಮುಖಪುಟಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

- Advertisement -
- Advertisement -

ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ ಬಣದ ನಾಯಕ ಸಂಜಯ್ ರಾವುತ್‌ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ಕುರಿತು ರಾಹುಲ್ ಆಡಿದ್ದ ಮಾತುಗಳಿಂದಾಗಿ ಮೈತ್ರಿ ಪಕ್ಷಗಳಲ್ಲಿ ಒಡಕು ಮೂಡಿಸುತ್ತಿದೆ ಎಂದು ಚರ್ಚೆಯಾಗುತ್ತಿರುವ ಹೊತ್ತಿನಲ್ಲಿ ಸಂಜಯ್‌ ರಾವುತ್‌ ಅವರು ರಾಹುಲ್‌ ಗಾಂಧಿಯವರನ್ನು ಹೊಗಳಿದ್ದಾರೆ.

“ನನಗೆ ಕರೆ ಮಾಡಿ ಮಾತನಾಡಿರುವುದು ರಾಹುಲ್ ಗಾಂಧಿಯವರ ಮಾನವೀಯತೆಯನ್ನು ತೋರುತ್ತದೆ. ಬಿಡುವಿಲ್ಲದ ತಮ್ಮ ಯಾತ್ರೆಯ ನಡುವೆಯೂ ತಮ್ಮ ರಾಜಕೀಯ ಸಹೋದ್ಯೋಗಿಗೆ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂದು ರಾವುತ್‌ ಮೆಚ್ಚುಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿದ್ದಾಗಲೂ ರಾಹುಲ್ ರಾತ್ರಿ ನನಗೆ ಕರೆ ಮಾಡಿದರು. ಅವರು ನನ್ನ ಆರೋಗ್ಯದ ಬಗ್ಗೆ ಕೇಳಿದರು. ‘ನಿಮ್ಮ ಬಗ್ಗೆ ನಮಗೆ ಚಿಂತೆಯಾಗಿದೆ’ ಎಂದರು. ರಾಜಕೀಯ ಮಿತ್ರನನ್ನು ನಕಲಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದುಃಖಿಸಲು ಸಾಧ್ಯವಾಗುವುದು ಮನುಷ್ಯನಿಗೆ ಮಾತ್ರ. 110 ದಿನಗಳ ಕಾಲ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಯಿತು” ಎಂದು ಸಂಜಯ್ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇಂಗ್ಲಿಷ್‌ನಲ್ಲಿ ಮತ್ತೊಂದು ಪೋಸ್ಟ್ ಮಾಡಿರುವ ರಾವುತ್‌, “ಕೆಲವು ವಿಷಯಗಳ ಬಗ್ಗೆ ಬಲವಾದ ಭಿನ್ನಾಭಿಪ್ರಾಯಗಳ ನಡುವೆಯೂ, ನಿಮ್ಮ ರಾಜಕೀಯ ಸಹೋದ್ಯೋಗಿಯನ್ನು ವಿಚಾರಿಸುವುದು ಮಾನವೀಯತೆಯ ಸಂಕೇತವಾಗಿದೆ. ರಾಜಕೀಯದ ಕಹಿ ಗಳಿಗೆಯಲ್ಲಿ, ಇಂತಹ ಕ್ರಿಯೆಗಳು ಅಪರೂಪವಾಗುತ್ತಿವೆ. ರಾಹುಲ್‌ಜಿ ತಮ್ಮ ಯಾತ್ರೆಯನ್ನು ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಕೇಂದ್ರೀಕರಿಸಿದ್ದಾರೆ. ಹೀಗಾಗಿ ಯಾತ್ರೆಗೆ ಭಾರೀ ಪ್ರತಿಕ್ರಿಯೆ ಸಿಗುತ್ತಿದೆ” ಎಂದು ರಾವುತ್‌ ಹೊಗಳಿದ್ದಾರೆ.

ಸಾವರ್ಕರ್‌ ಕುರಿತು ರಾಹುಲ್‌ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಹೊಂದಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯನ್ನು ಮುರಿಯುವ ಬಗ್ಗೆ ಠಾಕ್ರೆ ಬಣವು ಸುಳಿವು ನೀಡಿತ್ತು. ಇದಾದ ನಂತರ ರಾಹುಲ್ ಗಾಂಧಿಯವರ ಕಾಳಜಿಯ ಬಗ್ಗೆ ಶಿವಸೇನಾ ನಾಯಕ ಸಂಜಯ್‌ ರಾವುತ್ ಮಾಡಿರುವ ಪೋಸ್ಟ್‌- ಈ ವಿವಾದವನ್ನು ಸಮತೂಗಿಸುವ ಸೂಚನೆಯಂತೆ ಕಾಣುತ್ತಿದೆ.

ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರಕ್ಕೆ ಕಾಲಿಟ್ಟ ಬಳಿಕ ರಾಹುಲ್ ಗಾಂಧಿಯವರು ಮಾತನಾಡುತ್ತಾ, “ವಿ.ಡಿ.ಸಾವರ್ಕರ್‌ರವರು ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು” ಎಂದು ಟೀಕಿಸಿದ್ದರು. “ಬ್ರಿಟಿಷರಿಗೆ ಕ್ಷಮೆ ಕೋರುವ ಮೂಲಕ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರೂ ಮತ್ತು ಸರ್ದಾರ್ ಪಟೇಲ್ ಅವರಂತಹ ಸ್ವಾತಂತ್ರ್ಯದ ಐಕಾನ್‌ಗಳಿಗೆ ಸಾವರ್ಕರ್‌‌ ದ್ರೋಹ ಮಾಡಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗಳು ಶಿವಸೇನೆಯ ಎರಡೂ ಬಣಗಳನ್ನು ಕೆರಳಿಸಿತು. ಕಾಂಗ್ರೆಸ್‌ನೊಂದಿಗಿನ ಸಂಬಂಧದ ಬಗ್ಗೆ ಪ್ರತಿಸ್ಪರ್ಧಿ ಏಕನಾಥ್ ಶಿಂಧೆ ಬಣ ಕುಟುಕಿತ್ತು. ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರವಾಗಿ ಉದ್ಧವ್‌ ಠಾಕ್ರೆ ಬಣವು ಟೀಕೆಯನ್ನು ಎದುರಿಸಿತು.

ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿ, “ನಮ್ಮ ಪಕ್ಷವು ಸಾವರ್ಕರ್ ಬಗ್ಗೆ ಅಪಾರವಾದ ಗೌರವ ಹೊಂದಿದೆ” ಎಂದಿದ್ದರು. ಎನ್‌ಡಿಟಿವಿ ಜೊತೆ ಮಾತನಾಡಿದ್ದ ಸಂಜಯ್ ರಾವುತ್, “ಸಾವರ್ಕರ್ ಅವರ ವಿಷಯ ನಮಗೆ ಮುಖ್ಯವಾಗಿದೆ. ನಾವು ಸಾವರ್ಕರ್‌‌ ಸಿದ್ಧಾಂತವನ್ನು ನಂಬುತ್ತೇವೆ. ಕಾಂಗ್ರೆಸ್‌ ಈ ವಿಷಯವನ್ನು ತರಬಾರದಿತ್ತು” ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿರಿ: ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಪಕ್ಷದ ಮತ್ತೊಬ್ಬ ನಾಯಕ, ಶಿವಸೇನಾ ಸಂಸದ ಅರವಿಂದ್ ಸಾವಂತ್ ಒಂದು ಹೆಜ್ಜೆ ಮುಂದೆ ಹೋಗಿ, “ನಾವು ಎಂವಿಎ (ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ) ಮುಂದುವರಿಯುವುದಿಲ್ಲ ಎಂದು ಸಂಜಯ್ ರಾವುತ್ ಹೇಳಿಕೆ ನೀಡಿದ್ದಾರೆ. ಇದು ಪಕ್ಷದಿಂದ ನೀಡಲಾದ ಗಂಭೀರ ಪ್ರತಿಕ್ರಿಯೆಯಾಗಿದೆ. ಉದ್ಧವ್ ಠಾಕ್ರೆ ಅವರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ” ಎಂದಿದ್ದರು.

ವಿವಾದ ಭುಗಿಲೆದ್ದ ಬಳಿಕ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿ ಯಾರನ್ನೂ ಅವಮಾನಿಸಿಲ್ಲ. ಆದರೆ ಐತಿಹಾಸಿಕ ಸತ್ಯವನ್ನು ಮಾತ್ರ ಹೇಳಿದ್ದಾರೆ. ನಾನು ಇಂದು ಸಂಜಯ್ ರಾವುತ್ ಅವರೊಂದಿಗೆ ಮಾತನಾಡಿದ್ದೇನೆ. ನಾವು ಭಿನ್ನಾಭಿಪ್ರಾಯವನ್ನು ಒಪ್ಪಿಕೊಳ್ಳುತ್ತೇವೆ. ಇದು ಮಹಾ ವಿಕಾಸ್ ಅಘಾಡಿಯನ್ನು ದುರ್ಬಲಗೊಳಿಸುತ್ತದೆ ಎಂಬುದು ಸುಳ್ಳು. ಈ ಹೇಳಿಕೆ ಮೈತ್ರಿ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...