Homeಮುಖಪುಟಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

- Advertisement -
- Advertisement -

ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ ಬಣದ ನಾಯಕ ಸಂಜಯ್ ರಾವುತ್‌ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ಕುರಿತು ರಾಹುಲ್ ಆಡಿದ್ದ ಮಾತುಗಳಿಂದಾಗಿ ಮೈತ್ರಿ ಪಕ್ಷಗಳಲ್ಲಿ ಒಡಕು ಮೂಡಿಸುತ್ತಿದೆ ಎಂದು ಚರ್ಚೆಯಾಗುತ್ತಿರುವ ಹೊತ್ತಿನಲ್ಲಿ ಸಂಜಯ್‌ ರಾವುತ್‌ ಅವರು ರಾಹುಲ್‌ ಗಾಂಧಿಯವರನ್ನು ಹೊಗಳಿದ್ದಾರೆ.

“ನನಗೆ ಕರೆ ಮಾಡಿ ಮಾತನಾಡಿರುವುದು ರಾಹುಲ್ ಗಾಂಧಿಯವರ ಮಾನವೀಯತೆಯನ್ನು ತೋರುತ್ತದೆ. ಬಿಡುವಿಲ್ಲದ ತಮ್ಮ ಯಾತ್ರೆಯ ನಡುವೆಯೂ ತಮ್ಮ ರಾಜಕೀಯ ಸಹೋದ್ಯೋಗಿಗೆ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂದು ರಾವುತ್‌ ಮೆಚ್ಚುಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿದ್ದಾಗಲೂ ರಾಹುಲ್ ರಾತ್ರಿ ನನಗೆ ಕರೆ ಮಾಡಿದರು. ಅವರು ನನ್ನ ಆರೋಗ್ಯದ ಬಗ್ಗೆ ಕೇಳಿದರು. ‘ನಿಮ್ಮ ಬಗ್ಗೆ ನಮಗೆ ಚಿಂತೆಯಾಗಿದೆ’ ಎಂದರು. ರಾಜಕೀಯ ಮಿತ್ರನನ್ನು ನಕಲಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದುಃಖಿಸಲು ಸಾಧ್ಯವಾಗುವುದು ಮನುಷ್ಯನಿಗೆ ಮಾತ್ರ. 110 ದಿನಗಳ ಕಾಲ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಯಿತು” ಎಂದು ಸಂಜಯ್ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇಂಗ್ಲಿಷ್‌ನಲ್ಲಿ ಮತ್ತೊಂದು ಪೋಸ್ಟ್ ಮಾಡಿರುವ ರಾವುತ್‌, “ಕೆಲವು ವಿಷಯಗಳ ಬಗ್ಗೆ ಬಲವಾದ ಭಿನ್ನಾಭಿಪ್ರಾಯಗಳ ನಡುವೆಯೂ, ನಿಮ್ಮ ರಾಜಕೀಯ ಸಹೋದ್ಯೋಗಿಯನ್ನು ವಿಚಾರಿಸುವುದು ಮಾನವೀಯತೆಯ ಸಂಕೇತವಾಗಿದೆ. ರಾಜಕೀಯದ ಕಹಿ ಗಳಿಗೆಯಲ್ಲಿ, ಇಂತಹ ಕ್ರಿಯೆಗಳು ಅಪರೂಪವಾಗುತ್ತಿವೆ. ರಾಹುಲ್‌ಜಿ ತಮ್ಮ ಯಾತ್ರೆಯನ್ನು ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಕೇಂದ್ರೀಕರಿಸಿದ್ದಾರೆ. ಹೀಗಾಗಿ ಯಾತ್ರೆಗೆ ಭಾರೀ ಪ್ರತಿಕ್ರಿಯೆ ಸಿಗುತ್ತಿದೆ” ಎಂದು ರಾವುತ್‌ ಹೊಗಳಿದ್ದಾರೆ.

ಸಾವರ್ಕರ್‌ ಕುರಿತು ರಾಹುಲ್‌ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಹೊಂದಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯನ್ನು ಮುರಿಯುವ ಬಗ್ಗೆ ಠಾಕ್ರೆ ಬಣವು ಸುಳಿವು ನೀಡಿತ್ತು. ಇದಾದ ನಂತರ ರಾಹುಲ್ ಗಾಂಧಿಯವರ ಕಾಳಜಿಯ ಬಗ್ಗೆ ಶಿವಸೇನಾ ನಾಯಕ ಸಂಜಯ್‌ ರಾವುತ್ ಮಾಡಿರುವ ಪೋಸ್ಟ್‌- ಈ ವಿವಾದವನ್ನು ಸಮತೂಗಿಸುವ ಸೂಚನೆಯಂತೆ ಕಾಣುತ್ತಿದೆ.

ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರಕ್ಕೆ ಕಾಲಿಟ್ಟ ಬಳಿಕ ರಾಹುಲ್ ಗಾಂಧಿಯವರು ಮಾತನಾಡುತ್ತಾ, “ವಿ.ಡಿ.ಸಾವರ್ಕರ್‌ರವರು ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು” ಎಂದು ಟೀಕಿಸಿದ್ದರು. “ಬ್ರಿಟಿಷರಿಗೆ ಕ್ಷಮೆ ಕೋರುವ ಮೂಲಕ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರೂ ಮತ್ತು ಸರ್ದಾರ್ ಪಟೇಲ್ ಅವರಂತಹ ಸ್ವಾತಂತ್ರ್ಯದ ಐಕಾನ್‌ಗಳಿಗೆ ಸಾವರ್ಕರ್‌‌ ದ್ರೋಹ ಮಾಡಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗಳು ಶಿವಸೇನೆಯ ಎರಡೂ ಬಣಗಳನ್ನು ಕೆರಳಿಸಿತು. ಕಾಂಗ್ರೆಸ್‌ನೊಂದಿಗಿನ ಸಂಬಂಧದ ಬಗ್ಗೆ ಪ್ರತಿಸ್ಪರ್ಧಿ ಏಕನಾಥ್ ಶಿಂಧೆ ಬಣ ಕುಟುಕಿತ್ತು. ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರವಾಗಿ ಉದ್ಧವ್‌ ಠಾಕ್ರೆ ಬಣವು ಟೀಕೆಯನ್ನು ಎದುರಿಸಿತು.

ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿ, “ನಮ್ಮ ಪಕ್ಷವು ಸಾವರ್ಕರ್ ಬಗ್ಗೆ ಅಪಾರವಾದ ಗೌರವ ಹೊಂದಿದೆ” ಎಂದಿದ್ದರು. ಎನ್‌ಡಿಟಿವಿ ಜೊತೆ ಮಾತನಾಡಿದ್ದ ಸಂಜಯ್ ರಾವುತ್, “ಸಾವರ್ಕರ್ ಅವರ ವಿಷಯ ನಮಗೆ ಮುಖ್ಯವಾಗಿದೆ. ನಾವು ಸಾವರ್ಕರ್‌‌ ಸಿದ್ಧಾಂತವನ್ನು ನಂಬುತ್ತೇವೆ. ಕಾಂಗ್ರೆಸ್‌ ಈ ವಿಷಯವನ್ನು ತರಬಾರದಿತ್ತು” ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿರಿ: ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಪಕ್ಷದ ಮತ್ತೊಬ್ಬ ನಾಯಕ, ಶಿವಸೇನಾ ಸಂಸದ ಅರವಿಂದ್ ಸಾವಂತ್ ಒಂದು ಹೆಜ್ಜೆ ಮುಂದೆ ಹೋಗಿ, “ನಾವು ಎಂವಿಎ (ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ) ಮುಂದುವರಿಯುವುದಿಲ್ಲ ಎಂದು ಸಂಜಯ್ ರಾವುತ್ ಹೇಳಿಕೆ ನೀಡಿದ್ದಾರೆ. ಇದು ಪಕ್ಷದಿಂದ ನೀಡಲಾದ ಗಂಭೀರ ಪ್ರತಿಕ್ರಿಯೆಯಾಗಿದೆ. ಉದ್ಧವ್ ಠಾಕ್ರೆ ಅವರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ” ಎಂದಿದ್ದರು.

ವಿವಾದ ಭುಗಿಲೆದ್ದ ಬಳಿಕ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿ ಯಾರನ್ನೂ ಅವಮಾನಿಸಿಲ್ಲ. ಆದರೆ ಐತಿಹಾಸಿಕ ಸತ್ಯವನ್ನು ಮಾತ್ರ ಹೇಳಿದ್ದಾರೆ. ನಾನು ಇಂದು ಸಂಜಯ್ ರಾವುತ್ ಅವರೊಂದಿಗೆ ಮಾತನಾಡಿದ್ದೇನೆ. ನಾವು ಭಿನ್ನಾಭಿಪ್ರಾಯವನ್ನು ಒಪ್ಪಿಕೊಳ್ಳುತ್ತೇವೆ. ಇದು ಮಹಾ ವಿಕಾಸ್ ಅಘಾಡಿಯನ್ನು ದುರ್ಬಲಗೊಳಿಸುತ್ತದೆ ಎಂಬುದು ಸುಳ್ಳು. ಈ ಹೇಳಿಕೆ ಮೈತ್ರಿ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...