Homeಮುಖಪುಟಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

- Advertisement -
- Advertisement -

ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ ಬಣದ ನಾಯಕ ಸಂಜಯ್ ರಾವುತ್‌ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ಕುರಿತು ರಾಹುಲ್ ಆಡಿದ್ದ ಮಾತುಗಳಿಂದಾಗಿ ಮೈತ್ರಿ ಪಕ್ಷಗಳಲ್ಲಿ ಒಡಕು ಮೂಡಿಸುತ್ತಿದೆ ಎಂದು ಚರ್ಚೆಯಾಗುತ್ತಿರುವ ಹೊತ್ತಿನಲ್ಲಿ ಸಂಜಯ್‌ ರಾವುತ್‌ ಅವರು ರಾಹುಲ್‌ ಗಾಂಧಿಯವರನ್ನು ಹೊಗಳಿದ್ದಾರೆ.

“ನನಗೆ ಕರೆ ಮಾಡಿ ಮಾತನಾಡಿರುವುದು ರಾಹುಲ್ ಗಾಂಧಿಯವರ ಮಾನವೀಯತೆಯನ್ನು ತೋರುತ್ತದೆ. ಬಿಡುವಿಲ್ಲದ ತಮ್ಮ ಯಾತ್ರೆಯ ನಡುವೆಯೂ ತಮ್ಮ ರಾಜಕೀಯ ಸಹೋದ್ಯೋಗಿಗೆ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂದು ರಾವುತ್‌ ಮೆಚ್ಚುಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿದ್ದಾಗಲೂ ರಾಹುಲ್ ರಾತ್ರಿ ನನಗೆ ಕರೆ ಮಾಡಿದರು. ಅವರು ನನ್ನ ಆರೋಗ್ಯದ ಬಗ್ಗೆ ಕೇಳಿದರು. ‘ನಿಮ್ಮ ಬಗ್ಗೆ ನಮಗೆ ಚಿಂತೆಯಾಗಿದೆ’ ಎಂದರು. ರಾಜಕೀಯ ಮಿತ್ರನನ್ನು ನಕಲಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದುಃಖಿಸಲು ಸಾಧ್ಯವಾಗುವುದು ಮನುಷ್ಯನಿಗೆ ಮಾತ್ರ. 110 ದಿನಗಳ ಕಾಲ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಯಿತು” ಎಂದು ಸಂಜಯ್ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇಂಗ್ಲಿಷ್‌ನಲ್ಲಿ ಮತ್ತೊಂದು ಪೋಸ್ಟ್ ಮಾಡಿರುವ ರಾವುತ್‌, “ಕೆಲವು ವಿಷಯಗಳ ಬಗ್ಗೆ ಬಲವಾದ ಭಿನ್ನಾಭಿಪ್ರಾಯಗಳ ನಡುವೆಯೂ, ನಿಮ್ಮ ರಾಜಕೀಯ ಸಹೋದ್ಯೋಗಿಯನ್ನು ವಿಚಾರಿಸುವುದು ಮಾನವೀಯತೆಯ ಸಂಕೇತವಾಗಿದೆ. ರಾಜಕೀಯದ ಕಹಿ ಗಳಿಗೆಯಲ್ಲಿ, ಇಂತಹ ಕ್ರಿಯೆಗಳು ಅಪರೂಪವಾಗುತ್ತಿವೆ. ರಾಹುಲ್‌ಜಿ ತಮ್ಮ ಯಾತ್ರೆಯನ್ನು ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಕೇಂದ್ರೀಕರಿಸಿದ್ದಾರೆ. ಹೀಗಾಗಿ ಯಾತ್ರೆಗೆ ಭಾರೀ ಪ್ರತಿಕ್ರಿಯೆ ಸಿಗುತ್ತಿದೆ” ಎಂದು ರಾವುತ್‌ ಹೊಗಳಿದ್ದಾರೆ.

ಸಾವರ್ಕರ್‌ ಕುರಿತು ರಾಹುಲ್‌ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಹೊಂದಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯನ್ನು ಮುರಿಯುವ ಬಗ್ಗೆ ಠಾಕ್ರೆ ಬಣವು ಸುಳಿವು ನೀಡಿತ್ತು. ಇದಾದ ನಂತರ ರಾಹುಲ್ ಗಾಂಧಿಯವರ ಕಾಳಜಿಯ ಬಗ್ಗೆ ಶಿವಸೇನಾ ನಾಯಕ ಸಂಜಯ್‌ ರಾವುತ್ ಮಾಡಿರುವ ಪೋಸ್ಟ್‌- ಈ ವಿವಾದವನ್ನು ಸಮತೂಗಿಸುವ ಸೂಚನೆಯಂತೆ ಕಾಣುತ್ತಿದೆ.

ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರಕ್ಕೆ ಕಾಲಿಟ್ಟ ಬಳಿಕ ರಾಹುಲ್ ಗಾಂಧಿಯವರು ಮಾತನಾಡುತ್ತಾ, “ವಿ.ಡಿ.ಸಾವರ್ಕರ್‌ರವರು ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು” ಎಂದು ಟೀಕಿಸಿದ್ದರು. “ಬ್ರಿಟಿಷರಿಗೆ ಕ್ಷಮೆ ಕೋರುವ ಮೂಲಕ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರೂ ಮತ್ತು ಸರ್ದಾರ್ ಪಟೇಲ್ ಅವರಂತಹ ಸ್ವಾತಂತ್ರ್ಯದ ಐಕಾನ್‌ಗಳಿಗೆ ಸಾವರ್ಕರ್‌‌ ದ್ರೋಹ ಮಾಡಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗಳು ಶಿವಸೇನೆಯ ಎರಡೂ ಬಣಗಳನ್ನು ಕೆರಳಿಸಿತು. ಕಾಂಗ್ರೆಸ್‌ನೊಂದಿಗಿನ ಸಂಬಂಧದ ಬಗ್ಗೆ ಪ್ರತಿಸ್ಪರ್ಧಿ ಏಕನಾಥ್ ಶಿಂಧೆ ಬಣ ಕುಟುಕಿತ್ತು. ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರವಾಗಿ ಉದ್ಧವ್‌ ಠಾಕ್ರೆ ಬಣವು ಟೀಕೆಯನ್ನು ಎದುರಿಸಿತು.

ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿ, “ನಮ್ಮ ಪಕ್ಷವು ಸಾವರ್ಕರ್ ಬಗ್ಗೆ ಅಪಾರವಾದ ಗೌರವ ಹೊಂದಿದೆ” ಎಂದಿದ್ದರು. ಎನ್‌ಡಿಟಿವಿ ಜೊತೆ ಮಾತನಾಡಿದ್ದ ಸಂಜಯ್ ರಾವುತ್, “ಸಾವರ್ಕರ್ ಅವರ ವಿಷಯ ನಮಗೆ ಮುಖ್ಯವಾಗಿದೆ. ನಾವು ಸಾವರ್ಕರ್‌‌ ಸಿದ್ಧಾಂತವನ್ನು ನಂಬುತ್ತೇವೆ. ಕಾಂಗ್ರೆಸ್‌ ಈ ವಿಷಯವನ್ನು ತರಬಾರದಿತ್ತು” ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿರಿ: ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಪಕ್ಷದ ಮತ್ತೊಬ್ಬ ನಾಯಕ, ಶಿವಸೇನಾ ಸಂಸದ ಅರವಿಂದ್ ಸಾವಂತ್ ಒಂದು ಹೆಜ್ಜೆ ಮುಂದೆ ಹೋಗಿ, “ನಾವು ಎಂವಿಎ (ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ) ಮುಂದುವರಿಯುವುದಿಲ್ಲ ಎಂದು ಸಂಜಯ್ ರಾವುತ್ ಹೇಳಿಕೆ ನೀಡಿದ್ದಾರೆ. ಇದು ಪಕ್ಷದಿಂದ ನೀಡಲಾದ ಗಂಭೀರ ಪ್ರತಿಕ್ರಿಯೆಯಾಗಿದೆ. ಉದ್ಧವ್ ಠಾಕ್ರೆ ಅವರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ” ಎಂದಿದ್ದರು.

ವಿವಾದ ಭುಗಿಲೆದ್ದ ಬಳಿಕ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿ ಯಾರನ್ನೂ ಅವಮಾನಿಸಿಲ್ಲ. ಆದರೆ ಐತಿಹಾಸಿಕ ಸತ್ಯವನ್ನು ಮಾತ್ರ ಹೇಳಿದ್ದಾರೆ. ನಾನು ಇಂದು ಸಂಜಯ್ ರಾವುತ್ ಅವರೊಂದಿಗೆ ಮಾತನಾಡಿದ್ದೇನೆ. ನಾವು ಭಿನ್ನಾಭಿಪ್ರಾಯವನ್ನು ಒಪ್ಪಿಕೊಳ್ಳುತ್ತೇವೆ. ಇದು ಮಹಾ ವಿಕಾಸ್ ಅಘಾಡಿಯನ್ನು ದುರ್ಬಲಗೊಳಿಸುತ್ತದೆ ಎಂಬುದು ಸುಳ್ಳು. ಈ ಹೇಳಿಕೆ ಮೈತ್ರಿ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...