Homeಕರ್ನಾಟಕಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು: ಕುಮಾರಸ್ವಾಮಿ

ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು: ಕುಮಾರಸ್ವಾಮಿ

ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್‌ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ.

- Advertisement -
- Advertisement -

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌‌. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್‌ನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್‌ಗೆ ಸಲಹೆ ನೀಡಿ ಖರ್ಗೆ ಸಿಎಂ ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು‌. ಆ ನಾಯಕರುಗಳು ಯಾರು ಯಾರೇಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿ ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದ ಕಾಂಗ್ರೆಸ್‌ ವಿರುದ್ದ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ತೀವ್ರ ದಾಳಿ ನಡೆಸಿದ್ದಾರೆ.

“ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್‌ನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಓದಿ: ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ


ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್‌ನ ನೈತಿಕತೆ ಎಲ್ಲಿತ್ತು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್‌ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ ಅವರು ಹೇಳಿದ್ದಾರೆ.

ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್‌ನ ನಾಯಕರು ಪಕ್ಷದ ಟ್ವಿಟರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರು ಯಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್ನ ಟ್ವಿಟರ್ ಖಾತೆಗೆ ಸೀಮಿತವೋ ಎಂದು ಪ್ರಶ್ನಿಸಿದ್ದಾರೆ.

ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ ‘ಮಾರುವೇಷ’ ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರ್ಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ ಎಂದು ಅವರು ಹೇಳಿದ್ದಾರೆ.

“ತನ್ನರಿದೆ ಅರಿವೆಂತುಂಟೊ?/ತನ್ನ ಮರೆದ ಮರೆಹೆಂತಂಟೊ?/ಅರೆದು ಮರೆದವರು/ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ, ಗುಹೇಶ್ವರಾ” ಎಂದು ಅಲ್ಲಮಪ್ರಭು ಅವರ ವಚನದೊಂದಿಗೆ ಕಾಂಗ್ರೆಸ್‌ ಅನ್ನು ಕುಮಾರಸ್ವಾಮಿ ಟೀಕಿಸಿದ್ದಾರೆ.


ಓ‌ದಿ: ಕಾಂಗ್ರೆಸ್ ಆಪರೇಷನ್ ಹಸ್ತ ಮಾಡಿದ್ದು ಸರಿಯೇ?: ಎಚ್.ಡಿ ಕುಮಾರಸ್ವಾಮಿ ಪ್ರಶ್ನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...