Homeಮುಖಪುಟಒಂದೇ ಕ್ಷೇತ್ರದಲ್ಲಿ ಸ್ಪರ್ಧೆ: ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ!

ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ: ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ!

291 ಕ್ಷೇತ್ರಗಳಲ್ಲಿ ಟಿಎಂಸಿಯು 50 ಮಹಿಳೆಯರಿಗೆ, 42 ಮುಸ್ಲಿಮರಿಗೆ, 79 ಪರಿಶಿಷ್ಟ ಜಾತಿ & 17 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

- Advertisement -
- Advertisement -

ಭಾರೀ ಕುತೂಹಲ ಹುಟ್ಟಿಸಿರುವ ಪಶ್ಛಿಮ ಬಂಗಾಳ ಚುನಾವಣೆಯಲ್ಲಿ ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯುವುದಾಗಿ ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಒಟ್ಟು 294 ಕ್ಷೇತ್ರಗಳಲ್ಲಿ 291 ಕ್ಷೇತ್ರಗಳಿಗೆ ಟಿಎಂಸಿ ಅಭ್ಯರ್ಥಿಗಳನ್ನು ಇಂದು ಅವರು ಘೋಷಿಸಿದ್ದಾರೆ.

ನಂದಿಗ್ರಾಮವು ಈ ಹಿಂದೆ ಟಿಎಂಸಿಯ ಪ್ರಭಾವಿ ನಾಯಕನಾಗಿದ್ದ ಮತ್ತು ಈಗ ಬಿಜೆಪಿಗೆ ಪಕ್ಷಾಂತರ ಮಾಡಿರುವ ಸುವೇಂಧು ಅಧಿಕಾರಿಯ ಪ್ರಬಲ ನೆಲೆಯಾಗಿದೆ. ಸದ್ಯ ಕೋಲ್ಕತ್ತಾದ ಭವಾನಿಪೋರ್ ಪ್ರತಿನಿಧಿಸುತ್ತಿರುವ ಮಮತಾ ಬ್ಯಾನರ್ಜಿಯವರು ತಮ್ಮ ಸುರಕ್ಷಿತ ಸ್ಥಾನವನ್ನು ತೆರವುಗೊಳಿಸಿ ಕಠಿಣ ನಂದಿಗ್ರಾಮದಲ್ಲಿ ಸ್ಪರ್ಧಿಸುವುದಾಗಿ ಮತ್ತು ಅದೊಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ತೀರ್ಮಾನಿಸಿದ್ದಾರೆ.

ಟಿಎಂಸಿಯ ಅಭ್ಯರ್ಥಿಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಮತ್ತು ಮುಸ್ಲಿಮರಿಗೆ ಹೆಚ್ಚಿನ ಸೀಟುಗಳನ್ನು ನೀಡಲಾಗಿದೆ. 291 ಕ್ಷೇತ್ರಗಳಲ್ಲಿ 50 ಮಹಿಳೆಯರಿಗೆ, 42 ಮುಸ್ಲಿಮರಿಗೆ, 79 ಪರಿಶಿಷ್ಟ ಜಾತಿ ಮತ್ತು 17 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನೀಡಿಲ್ಲ.

ನಂದಿಗ್ರಾಮ ಸುವೇಂಧು ಅಧಿಕಾರಿಯವರ ಪ್ರಬಲ ನೆಲೆಯಾದ್ದರಿಂದ ಮಮತಾ ಬ್ಯಾನರ್ಜಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಅದಕ್ಕೆ ತೆರೆ ಎಳೆದಿರುವ ಮಮತಾ ಬ್ಯಾನರ್ಜಿ ತಾವು ತೆರವುಗೊಳಿಸುವ ಭವಾನಿಪೋರ್ ಕ್ಷೇತ್ರದಿಂದ ಅವರ ಸಂಪುಟದ ವಿದ್ಯುತ್ ಸಚಿವ ಸೋವಾಂಡೇಬ್ ಚಟ್ಟೋಪಾಧ್ಯಾಯರು ಸ್ಪರ್ಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಟಿಎಂಸಿ ತ್ಯಜಿಸಿ ಬಿಜೆಪಿ ಸೇರಿರುವ ಸುವೇಂಧು ಅಧಿಕಾರಿ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ಅವರನ್ನು ಮಮತಾ ಬ್ಯಾನರ್ಜಿಯವರ ಬಲಗೈ ಎಂದು ಕರೆಯಲಾಗುತ್ತಿತ್ತು. ನಂದಿಗ್ರಾಮದಲ್ಲಿ ಟಾಟಾ ಕಂಪನಿಯ ಕಾರು ತಯಾರಿಕ ಘಟಕಕ್ಕಾಗಿ ರೈತರಿಂದ ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿದ್ದಾಗ ಅದನ್ನು ವಿರೋಧಿಸಿ ಸುವೇಂಧು ಅಧಿಕಾರಿ ಟಿಎಂಸಿ ಅಭಿಯಾನದ ನೇತೃತ್ವ ವಹಿಸಿದ್ದರು. ಅವರು ನಿನ್ನೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿ ಇಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿದರೆ ಅವರನ್ನು 50,000 ಮತಗಳ ಅಂತರದಿಂದ ಸೋಲಿಸುತ್ತೇನೆ ಎಂದಿದ್ದರು. ಆ ಸವಾಲು ಸ್ವೀಕರಿಸಿರುವ ಮಮತಾ ಬ್ಯಾನರ್ಜಿ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಆದರೆ ಸುವೇಂಧು ಬಿಜೆಪಿ ಅಭ್ಯರ್ಥಿಯೇ ಎಂಬುದನ್ನು ಪ್ರಧಾನಿ ನಿರ್ಧರಿಸಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನಂದಿಗ್ರಾಮ ನನ್ನ ಅದೃಷ್ಟದ ಕ್ಷೇತ್ರ. ಅದು ನನ್ನ ಹಿರಿಯ ಸಹೋದರಿಯಂತೆ. ನಾನು ಪ್ರತಿನಿಧಿಸುತ್ತಿರುವ ಭವಾನಿಪೋರ್ ಕಿರಿಯ ಸಹೋದರಿಯಿದ್ದಂತೆ. ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು. ಅಥವಾ ನಂದಿಗ್ರಾಮವೊಂದರಲ್ಲೇ ಸ್ಪರ್ಧಿಸಲಿದ್ದು, ಭವಾನಿಪೋರ್‌ನಲ್ಲಿ ನಮ್ಮ ಪಕ್ಷದ ಇತರ ನಾಯಕರು ಸ್ಪರ್ಧಿಸಬಹುದು” ಎಂದು ಈ ಹಿಂದೆ ಮಮತಾ ಬ್ಯಾನರ್ಜಿ ಹೇಳಿದ್ದರು.

ಮೂರು ಕ್ಷೇತ್ರಗಳಿಲ್ಲಿ ಟಿಎಂಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಅವುಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಡಲು ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.


ಇದನ್ನೂ ಓದಿ: ದೀದಿ ನಿಜವಾದ ಬಂಗಾಳಿ ಟೈಗರ್‌: ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...