Homeಮುಖಪುಟಒಂದೇ ಕ್ಷೇತ್ರದಲ್ಲಿ ಸ್ಪರ್ಧೆ: ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ!

ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ: ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ!

291 ಕ್ಷೇತ್ರಗಳಲ್ಲಿ ಟಿಎಂಸಿಯು 50 ಮಹಿಳೆಯರಿಗೆ, 42 ಮುಸ್ಲಿಮರಿಗೆ, 79 ಪರಿಶಿಷ್ಟ ಜಾತಿ & 17 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.

- Advertisement -
- Advertisement -

ಭಾರೀ ಕುತೂಹಲ ಹುಟ್ಟಿಸಿರುವ ಪಶ್ಛಿಮ ಬಂಗಾಳ ಚುನಾವಣೆಯಲ್ಲಿ ಸ್ವಕ್ಷೇತ್ರ ಬಿಟ್ಟು ನಂದಿಗ್ರಾಮದಲ್ಲಿ ಕಣಕ್ಕಿಳಿಯುವುದಾಗಿ ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಒಟ್ಟು 294 ಕ್ಷೇತ್ರಗಳಲ್ಲಿ 291 ಕ್ಷೇತ್ರಗಳಿಗೆ ಟಿಎಂಸಿ ಅಭ್ಯರ್ಥಿಗಳನ್ನು ಇಂದು ಅವರು ಘೋಷಿಸಿದ್ದಾರೆ.

ನಂದಿಗ್ರಾಮವು ಈ ಹಿಂದೆ ಟಿಎಂಸಿಯ ಪ್ರಭಾವಿ ನಾಯಕನಾಗಿದ್ದ ಮತ್ತು ಈಗ ಬಿಜೆಪಿಗೆ ಪಕ್ಷಾಂತರ ಮಾಡಿರುವ ಸುವೇಂಧು ಅಧಿಕಾರಿಯ ಪ್ರಬಲ ನೆಲೆಯಾಗಿದೆ. ಸದ್ಯ ಕೋಲ್ಕತ್ತಾದ ಭವಾನಿಪೋರ್ ಪ್ರತಿನಿಧಿಸುತ್ತಿರುವ ಮಮತಾ ಬ್ಯಾನರ್ಜಿಯವರು ತಮ್ಮ ಸುರಕ್ಷಿತ ಸ್ಥಾನವನ್ನು ತೆರವುಗೊಳಿಸಿ ಕಠಿಣ ನಂದಿಗ್ರಾಮದಲ್ಲಿ ಸ್ಪರ್ಧಿಸುವುದಾಗಿ ಮತ್ತು ಅದೊಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ತೀರ್ಮಾನಿಸಿದ್ದಾರೆ.

ಟಿಎಂಸಿಯ ಅಭ್ಯರ್ಥಿಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಮತ್ತು ಮುಸ್ಲಿಮರಿಗೆ ಹೆಚ್ಚಿನ ಸೀಟುಗಳನ್ನು ನೀಡಲಾಗಿದೆ. 291 ಕ್ಷೇತ್ರಗಳಲ್ಲಿ 50 ಮಹಿಳೆಯರಿಗೆ, 42 ಮುಸ್ಲಿಮರಿಗೆ, 79 ಪರಿಶಿಷ್ಟ ಜಾತಿ ಮತ್ತು 17 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನೀಡಿಲ್ಲ.

ನಂದಿಗ್ರಾಮ ಸುವೇಂಧು ಅಧಿಕಾರಿಯವರ ಪ್ರಬಲ ನೆಲೆಯಾದ್ದರಿಂದ ಮಮತಾ ಬ್ಯಾನರ್ಜಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಅದಕ್ಕೆ ತೆರೆ ಎಳೆದಿರುವ ಮಮತಾ ಬ್ಯಾನರ್ಜಿ ತಾವು ತೆರವುಗೊಳಿಸುವ ಭವಾನಿಪೋರ್ ಕ್ಷೇತ್ರದಿಂದ ಅವರ ಸಂಪುಟದ ವಿದ್ಯುತ್ ಸಚಿವ ಸೋವಾಂಡೇಬ್ ಚಟ್ಟೋಪಾಧ್ಯಾಯರು ಸ್ಪರ್ಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಟಿಎಂಸಿ ತ್ಯಜಿಸಿ ಬಿಜೆಪಿ ಸೇರಿರುವ ಸುವೇಂಧು ಅಧಿಕಾರಿ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ಅವರನ್ನು ಮಮತಾ ಬ್ಯಾನರ್ಜಿಯವರ ಬಲಗೈ ಎಂದು ಕರೆಯಲಾಗುತ್ತಿತ್ತು. ನಂದಿಗ್ರಾಮದಲ್ಲಿ ಟಾಟಾ ಕಂಪನಿಯ ಕಾರು ತಯಾರಿಕ ಘಟಕಕ್ಕಾಗಿ ರೈತರಿಂದ ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳಲು ಮುಂದಾಗಿದ್ದಾಗ ಅದನ್ನು ವಿರೋಧಿಸಿ ಸುವೇಂಧು ಅಧಿಕಾರಿ ಟಿಎಂಸಿ ಅಭಿಯಾನದ ನೇತೃತ್ವ ವಹಿಸಿದ್ದರು. ಅವರು ನಿನ್ನೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿ ಇಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿದರೆ ಅವರನ್ನು 50,000 ಮತಗಳ ಅಂತರದಿಂದ ಸೋಲಿಸುತ್ತೇನೆ ಎಂದಿದ್ದರು. ಆ ಸವಾಲು ಸ್ವೀಕರಿಸಿರುವ ಮಮತಾ ಬ್ಯಾನರ್ಜಿ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಆದರೆ ಸುವೇಂಧು ಬಿಜೆಪಿ ಅಭ್ಯರ್ಥಿಯೇ ಎಂಬುದನ್ನು ಪ್ರಧಾನಿ ನಿರ್ಧರಿಸಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನಂದಿಗ್ರಾಮ ನನ್ನ ಅದೃಷ್ಟದ ಕ್ಷೇತ್ರ. ಅದು ನನ್ನ ಹಿರಿಯ ಸಹೋದರಿಯಂತೆ. ನಾನು ಪ್ರತಿನಿಧಿಸುತ್ತಿರುವ ಭವಾನಿಪೋರ್ ಕಿರಿಯ ಸಹೋದರಿಯಿದ್ದಂತೆ. ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು. ಅಥವಾ ನಂದಿಗ್ರಾಮವೊಂದರಲ್ಲೇ ಸ್ಪರ್ಧಿಸಲಿದ್ದು, ಭವಾನಿಪೋರ್‌ನಲ್ಲಿ ನಮ್ಮ ಪಕ್ಷದ ಇತರ ನಾಯಕರು ಸ್ಪರ್ಧಿಸಬಹುದು” ಎಂದು ಈ ಹಿಂದೆ ಮಮತಾ ಬ್ಯಾನರ್ಜಿ ಹೇಳಿದ್ದರು.

ಮೂರು ಕ್ಷೇತ್ರಗಳಿಲ್ಲಿ ಟಿಎಂಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಅವುಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಡಲು ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.


ಇದನ್ನೂ ಓದಿ: ದೀದಿ ನಿಜವಾದ ಬಂಗಾಳಿ ಟೈಗರ್‌: ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...