Homeಕರ್ನಾಟಕಅಂತಿಮ ಸೆಮಿಸ್ಟರ್ ಬಿಟ್ಟು ಉಳಿದೆಲ್ಲಾ‌ ವಿದ್ಯಾರ್ಥಿಗಳು ಪಾಸ್: ಸರ್ಕಾರದ ಮಹತ್ವದ ನಿರ್ಧಾರ

ಅಂತಿಮ ಸೆಮಿಸ್ಟರ್ ಬಿಟ್ಟು ಉಳಿದೆಲ್ಲಾ‌ ವಿದ್ಯಾರ್ಥಿಗಳು ಪಾಸ್: ಸರ್ಕಾರದ ಮಹತ್ವದ ನಿರ್ಧಾರ

ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರ್ಕಾರ 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ಡೌನ್‌ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್‌ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್‌ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್‌/ಆಫ್‌‌ಲೈನ್‌) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.

ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್‌/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್‌ಲಾಗ್‌ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದು ಡಿಸಿಎಂ ತಿಳಿಸಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ನೇರ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಕೊರೊನಾ ಇಡೀ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಪೆಟ್ಟು ನೀಡಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಅವರ ಭವಿಷ್ಯದ ಬಗ್ಗೆಯೂ ನಿರ್ಧರಿಸುವ ಸವಾಲು ಸರಕಾರದ ಮುಂದಿತ್ತು. ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...