Homeಕರ್ನಾಟಕಅಂತಿಮ ಸೆಮಿಸ್ಟರ್ ಬಿಟ್ಟು ಉಳಿದೆಲ್ಲಾ‌ ವಿದ್ಯಾರ್ಥಿಗಳು ಪಾಸ್: ಸರ್ಕಾರದ ಮಹತ್ವದ ನಿರ್ಧಾರ

ಅಂತಿಮ ಸೆಮಿಸ್ಟರ್ ಬಿಟ್ಟು ಉಳಿದೆಲ್ಲಾ‌ ವಿದ್ಯಾರ್ಥಿಗಳು ಪಾಸ್: ಸರ್ಕಾರದ ಮಹತ್ವದ ನಿರ್ಧಾರ

ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರ್ಕಾರ 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ಡೌನ್‌ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್‌ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್‌ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್‌/ಆಫ್‌‌ಲೈನ್‌) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.

ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್‌/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್‌ಲಾಗ್‌ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದು ಡಿಸಿಎಂ ತಿಳಿಸಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ನೇರ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಕೊರೊನಾ ಇಡೀ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಪೆಟ್ಟು ನೀಡಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಅವರ ಭವಿಷ್ಯದ ಬಗ್ಗೆಯೂ ನಿರ್ಧರಿಸುವ ಸವಾಲು ಸರಕಾರದ ಮುಂದಿತ್ತು. ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...