Homeಕರ್ನಾಟಕಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

ಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

“ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು”

- Advertisement -
- Advertisement -

ಕೇಂದ್ರ ಸರಕಾರದ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌‌ಎಸ್‌ಸಿ) ವಿವಿಧ ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

#ಕೇಂದ್ರ_ಸರಕಾರಿ_ಕೆಲಸ_ಕನ್ನಡಿಗರ_ಹಕ್ಕು ಹ್ಯಾಷ್‌ಟ್ಯಾಗ್‌ ಬಳಸಿರುವ ಅವರು ಸರಣಿ ಟ್ವೀಟ್ ಮಾಡಿದ್ದಾರೆ. “ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಹಿಂದಿ, ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ! ಇದೆಂಥಾ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

“ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ” ಎಂದು ತಿಳಿಸಿದ್ದಾರೆ.

“ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...