Homeಕರ್ನಾಟಕಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

ಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

“ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು”

- Advertisement -
- Advertisement -

ಕೇಂದ್ರ ಸರಕಾರದ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌‌ಎಸ್‌ಸಿ) ವಿವಿಧ ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

#ಕೇಂದ್ರ_ಸರಕಾರಿ_ಕೆಲಸ_ಕನ್ನಡಿಗರ_ಹಕ್ಕು ಹ್ಯಾಷ್‌ಟ್ಯಾಗ್‌ ಬಳಸಿರುವ ಅವರು ಸರಣಿ ಟ್ವೀಟ್ ಮಾಡಿದ್ದಾರೆ. “ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಹಿಂದಿ, ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ! ಇದೆಂಥಾ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

“ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ” ಎಂದು ತಿಳಿಸಿದ್ದಾರೆ.

“ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...