Homeಕರ್ನಾಟಕಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

ಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

“ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು”

- Advertisement -
- Advertisement -

ಕೇಂದ್ರ ಸರಕಾರದ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌‌ಎಸ್‌ಸಿ) ವಿವಿಧ ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

#ಕೇಂದ್ರ_ಸರಕಾರಿ_ಕೆಲಸ_ಕನ್ನಡಿಗರ_ಹಕ್ಕು ಹ್ಯಾಷ್‌ಟ್ಯಾಗ್‌ ಬಳಸಿರುವ ಅವರು ಸರಣಿ ಟ್ವೀಟ್ ಮಾಡಿದ್ದಾರೆ. “ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಹಿಂದಿ, ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ! ಇದೆಂಥಾ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

“ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ” ಎಂದು ತಿಳಿಸಿದ್ದಾರೆ.

“ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...